Featured

ಉಡುಪಿ : ಸೇನಾ ನೇಮಕಾತಿ ರ‍್ಯಾಲಿಗೆ ಸಂಪೂರ್ಣ ಸಿದ್ದತೆ : ಜಿಲ್ಲಾಧಿಕಾರಿ ಜಿ.ಜಗದೀಶ್ -Vishwanews24

ಉಡುಪಿ : ಸೇನಾ ನೇಮಕಾತಿ ರ‍್ಯಾಲಿಗೆ ಸಂಪೂರ್ಣ ಸಿದ್ದತೆ : ಜಿಲ್ಲಾಧಿಕಾರಿ ಜಿ.ಜಗದೀಶ್ -Vishwanews24

ಉಡುಪಿ, : ”ಉಡುಪಿಯ ಅಜ್ಜರಕಾಡು ಕ್ರೀಡಾಂಗಣದಲ್ಲಿ ಮಾರ್ಚ್ 17 ರಿಂದ ನಡೆಯುವ ಭಾರತೀಯ ಸೇನೆಯ ನೇಮಕಾತಿ ರ‍್ಯಾಲಿಗೆ ಎಲ್ಲಾ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ” ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಹೇಳಿದರು.

ಅವರು ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೇನಾ ನೇಮಕಾತಿ ರ‍್ಯಾಲಿ ಕುರಿತು ಸೇನಾ ನೇಮಕಾತಿ ಅಧಿಕಾರಿಗಳೊಂದಿಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

”ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸುವ ಅಭ್ಯರ್ಥಿಗಳಿಗೆ ಕುಡಿಯುವ ನೀರು ಮತ್ತು ಶೌಚಾಲಯ ವ್ಯವಸ್ಥೆ ಕುರಿತಂತೆ ನಗರಸಭೆ ವತಿಯಿಂದ ಎಲ್ಲಾ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಕ್ರೀಡಾಂಗಣದಲ್ಲಿ ತುರ್ತು ಚಿಕಿತ್ಸೆಗಾಗಿ ಅಂಬುಲೆನ್ಸ್ ಹಾಗೂ ವೈದ್ಯಕೀಯ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಅಭ್ಯರ್ಥಿಗಳ ಶಾಲಾ ಅಂಕಪಟ್ಟಿಗಳ ಪರಿಶೀಲನೆಗೆ ಶಿಕ್ಷಣ ಇಲಾಖೆಯ 20 ಮಂದಿ ಸಿಬ್ಬಂದಿಯನ್ನು ನಿಯೋಜಿಸಿದ್ದು, ಅಗತ್ಯವಿದ್ದಲ್ಲಿ ಹೆಚ್ಚಿನ ಸಿಬ್ಬಂದಿ ನಿಯೋಜಿಸಲಾಗುವುದು” ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಹೇಳಿದರು.

ಉಚ್ಚಿಲ-ಪಣಿಯೂರು : 7 ಕೋಟಿ ರೂ. ಅನುದಾನದ ದ್ವಿಪಥ ರಸ್ತೆ ಕಾಮಗಾರಿಯ ಅವ್ಯವಸ್ಥೆ; ವ್ಯಾಪಾರಸ್ಥರು, ನಿವಾಸಿಗಳಿಗೆ ಧೂಳು ತಿನ್ನುವ ಸಂಕಟ, ವಾಹನ ಸವಾರರಿಗೆ ಸಂಚಾರದ ಸಂಕಟ -Vishwanews24

”ನೇಮಕಾತಿಗಾಗಿ ಪ್ರತಿದಿನ ಸುಮಾರು 3000 ಮಂದಿ ಅಭ್ಯರ್ಥಿಗಳು ಆಗಮಿಸಲಿದ್ದು, ನೂಕು ನುಗ್ಗಲು ತಪ್ಪಿಸಲು ಮತ್ತು ರ‍್ಯಾಲಿಯು ಸುಗಮವಾಗಿ ನಡೆಯಲು ಅನುಕೂಲವಾಗುವಂತೆ ಸೂಕ್ತ ಪೊಲೀಸ್ ಸಿಬ್ಬಂದಿ ನೇಮಕಕ್ಕೆ ಕ್ರಮ ಕೈಗೊಳ್ಳಲಾಗಿದೆ. ಕ್ರೀಡಾಂಗಣದಲ್ಲಿ ನಿರಂತರ ವಿದ್ಯುತ್ ವ್ಯವಸ್ಥೆ ಮತ್ತು ವೇಗದ ಇಂಟರ್ನೆಟ್ ಸೌಲಭ್ಯ ಒದಗಿಸಲಾಗುವುದು” ಎಂದು ಡಿಸಿ ಹೇಳಿದರು.

”ಜಿಲ್ಲೆಯಲ್ಲಿ ನಡೆಯುವ ಸೇನಾ ನೇಮಕಾತಿ ರ‍್ಯಾಲಿಯು ಅತ್ಯಂತ ಯಶಸ್ವಿಯಾಗಿ ನಡೆಯುವಂತೆ, ಸೇನೆಯ ಅಧಿಕಾರಿಗಳು ಕೋರುವ ಎಲ್ಲಾ ಸಹಕಾರವನ್ನು ನೀಡಲಾಗುವುದು” ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಹೇಳಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಸೇನಾ ನೇಮಕಾತಿ ವಿಭಾಗದ ಕರ್ನಲ್ ದುಬಾಷ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ. ರೋಶನ್ ಕುಮಾರ್ ಶೆಟ್ಟಿ ಹಾಗೂ ವಿವಿಧ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು

Vishwa News 24

Recent Posts

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ – vishwanews24

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್‌…

16 hours ago

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ ಪ್ರಕ್ರಿಯೆಗೆ ಚಾಲನೆ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ – vishwanews24

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…

16 hours ago

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ – vishwanews24

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…

17 hours ago

ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ – vishwanews24

 ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…

17 hours ago

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ–ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ – vishwanews24

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…

17 hours ago

ಕುದುರೆಮುಖ ಆಫ್ ರೋಡಿಂಗ್ ಚಟುವಟಿಕೆ ವಿರುದ್ಧ ತೀವ್ರ ಆಕ್ರೋಶ – vishwanews24

ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…

19 hours ago