Featured

ಉಡುಪಿ: ಸೈಂಟ್ ಮೇರಿಸ್ ಐಲ್ಯಾಂಡ್ ಬಳಿ ಫ್ಲೋಟಿಂಗ್ ಜಟ್ಟಿ ನಿರ್ಮಿಸುವ ರೂ. 5.50 ಕೋಟಿ ಮೊತ್ತದ ಕಾಮಗಾರಿಗೆ ಸರ್ಕಾರ ಅನುಮೋದನೆ – Vishwanews24

ಉಡುಪಿ: ಸೈಂಟ್ ಮೇರಿಸ್ ಐಲ್ಯಾಂಡ್ ಬಳಿ ಫ್ಲೋಟಿಂಗ್ ಜಟ್ಟಿ ನಿರ್ಮಿಸುವ ರೂ. 5.50 ಕೋಟಿ ಮೊತ್ತದ ಕಾಮಗಾರಿಗೆ ಸರ್ಕಾರ ಅನುಮೋದನೆ

ಉಡುಪಿ: ಜಿಲ್ಲೆಯ ಪ್ರಮುಖ ಪ್ರವಾಸಿ ತಾಣವಾದ ಸೈಂಟ್ ಮೇರಿಸ್ ಐಲ್ಯಾಂಡ್ ಬಳಿ ಫ್ಲೋಟಿಂಗ್ ಜಟ್ಟಿ ನಿರ್ಮಿಸುವ ರೂ. 5.50 ಕೋಟಿ ಮೊತ್ತದ ಕಾಮಗಾರಿಗೆ ಸರ್ಕಾರ ಆಡಳಿತಾತ್ಮಕ ಅನುಮೋದನೆ ನೀಡಿದೆ ಎಂದು ಶಾಸಕ ರಘುಪತಿ ಭಟ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಪ್ರಮುಖ ಕಾಮಗಾರಿಗೆ ಕೈಗೊಳ್ಳುವ ಬೇಡಿಕೆಯನ್ನು ಪೂರೈಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಶಾಸಕ ರಘುಪತಿ ಭಟ್ ಅವರು ಅಭಿನಂದನೆ ಸಲ್ಲಿಸಿದ್ದಾರೆ.

ಹಾಗೂ ಕರ್ನಾಟಕ ಟೂರಿಸಂ ವಿಷನ್ ಗ್ರೂಫಿನ ಶಿಫಾರಸ್ಸುಗಳಲ್ಲಿ ಉಡುಪಿ ಜಿಲ್ಲೆಯ ಸೈಂಟ್ ಮೇರಿಸ್ ಐಲ್ಯಾಂಡ್ ಬಳಿ ನಿರ್ಮಿಸುವ ಫೆರ್ರಿ ಜಟ್ಟಿ ನಿರ್ಮಿಸುವ ಕಾಮಗಾರಿಯನ್ನು ಪ್ರವಾಸೋದ್ಯಮ ಇಲಾಖೆಯ ಮೇಲುಸ್ತುವಾರಿಯಲ್ಲಿ ಲೋಕೋಪಯೋಗಿ ಇಲಾಖೆ ಮೂಲಕ ಕೈಗೊಳ್ಳಲು ಯೋಜಿಸಲಾಗಿತ್ತು. ಆದರೆ ಸಿ.ಆರ್.ಝಡ್. ನಿಯಮಾವಳಿ ಅನ್ವಯ ಫೆರ್ರಿ ಜಟ್ಟಿ ನಿರ್ಮಿಸಲು ಅಸಾಧ್ಯವಾಗಿರುವುದರಿಂದ ಉಡುಪಿ ಜಿಲ್ಲಾಧಿಕಾರಿಯವರು ಫೆರ್ರಿ ಜಟ್ಟಿ ಬದಲು ಫ್ಲೋಟಿಂಗ್ ಜಟ್ಟಿ ನಿರ್ಮಿಸುವ ಬಗ್ಗೆ ಅಭಿಪ್ರಾಯ ಹಾಗೂ ಅನುಷ್ಠಾನಕ್ಕೆ ಸಲ್ಲಿಸಿದ ವರದಿ ಮತ್ತು ಲೋಕೋಪಯೋಗಿ ಇಲಾಖೆ ಮೂಲಕ ಸಲ್ಲಿಸಿದ ಅಂದಾಜು ಪಟ್ಟಿಯಂತೆ ಪ್ರವಾಸೋದ್ಯಮ ಇಲಾಖೆಯು ಉಡುಪಿ ಜಿಲ್ಲೆಯ ಸೈಂಟ್ ಮೇರಿಸ್ ಐಲ್ಯಾಂಡ್ ಬಳಿ ಫ್ಲೋಟಿಂಗ್ ಜಟ್ಟಿ ನಿರ್ಮಿಸುವ ರೂ 5.50 ಕೋಟಿ ಮೊತ್ತದ ಯೋಜನೆಗೆ ಅನುಮೋದನೆ ನೀಡಿ ಆದೇಶಿಸಿದೆ ಎಂದು ತಿಳಿಸಿದ್ದಾರೆ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

14 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

14 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago