ಉಡುಪಿ: ಜಿಲ್ಲೆಯ ಪ್ರಮುಖ ಪ್ರವಾಸಿ ತಾಣವಾದ ಸೈಂಟ್ ಮೇರಿಸ್ ಐಲ್ಯಾಂಡ್ ಬಳಿ ಫ್ಲೋಟಿಂಗ್ ಜಟ್ಟಿ ನಿರ್ಮಿಸುವ ರೂ. 5.50 ಕೋಟಿ ಮೊತ್ತದ ಕಾಮಗಾರಿಗೆ ಸರ್ಕಾರ ಆಡಳಿತಾತ್ಮಕ ಅನುಮೋದನೆ ನೀಡಿದೆ ಎಂದು ಶಾಸಕ ರಘುಪತಿ ಭಟ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ಪ್ರಮುಖ ಕಾಮಗಾರಿಗೆ ಕೈಗೊಳ್ಳುವ ಬೇಡಿಕೆಯನ್ನು ಪೂರೈಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಶಾಸಕ ರಘುಪತಿ ಭಟ್ ಅವರು ಅಭಿನಂದನೆ ಸಲ್ಲಿಸಿದ್ದಾರೆ.
ಹಾಗೂ ಕರ್ನಾಟಕ ಟೂರಿಸಂ ವಿಷನ್ ಗ್ರೂಫಿನ ಶಿಫಾರಸ್ಸುಗಳಲ್ಲಿ ಉಡುಪಿ ಜಿಲ್ಲೆಯ ಸೈಂಟ್ ಮೇರಿಸ್ ಐಲ್ಯಾಂಡ್ ಬಳಿ ನಿರ್ಮಿಸುವ ಫೆರ್ರಿ ಜಟ್ಟಿ ನಿರ್ಮಿಸುವ ಕಾಮಗಾರಿಯನ್ನು ಪ್ರವಾಸೋದ್ಯಮ ಇಲಾಖೆಯ ಮೇಲುಸ್ತುವಾರಿಯಲ್ಲಿ ಲೋಕೋಪಯೋಗಿ ಇಲಾಖೆ ಮೂಲಕ ಕೈಗೊಳ್ಳಲು ಯೋಜಿಸಲಾಗಿತ್ತು. ಆದರೆ ಸಿ.ಆರ್.ಝಡ್. ನಿಯಮಾವಳಿ ಅನ್ವಯ ಫೆರ್ರಿ ಜಟ್ಟಿ ನಿರ್ಮಿಸಲು ಅಸಾಧ್ಯವಾಗಿರುವುದರಿಂದ ಉಡುಪಿ ಜಿಲ್ಲಾಧಿಕಾರಿಯವರು ಫೆರ್ರಿ ಜಟ್ಟಿ ಬದಲು ಫ್ಲೋಟಿಂಗ್ ಜಟ್ಟಿ ನಿರ್ಮಿಸುವ ಬಗ್ಗೆ ಅಭಿಪ್ರಾಯ ಹಾಗೂ ಅನುಷ್ಠಾನಕ್ಕೆ ಸಲ್ಲಿಸಿದ ವರದಿ ಮತ್ತು ಲೋಕೋಪಯೋಗಿ ಇಲಾಖೆ ಮೂಲಕ ಸಲ್ಲಿಸಿದ ಅಂದಾಜು ಪಟ್ಟಿಯಂತೆ ಪ್ರವಾಸೋದ್ಯಮ ಇಲಾಖೆಯು ಉಡುಪಿ ಜಿಲ್ಲೆಯ ಸೈಂಟ್ ಮೇರಿಸ್ ಐಲ್ಯಾಂಡ್ ಬಳಿ ಫ್ಲೋಟಿಂಗ್ ಜಟ್ಟಿ ನಿರ್ಮಿಸುವ ರೂ 5.50 ಕೋಟಿ ಮೊತ್ತದ ಯೋಜನೆಗೆ ಅನುಮೋದನೆ ನೀಡಿ ಆದೇಶಿಸಿದೆ ಎಂದು ತಿಳಿಸಿದ್ದಾರೆ.
SSLC ಪರೀಕ್ಷೆ ಫಲಿತಾಂಶ: ದ.ಕ ಪ್ರಥಮ, ಉಡುಪಿ ಜಿಲ್ಲೆ ದ್ವಿತೀಯ ಬೆಂಗಳೂರು: 2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು,ಈ…
ಎಸೆಸೆಲ್ಸಿ ಪರೀಕ್ಷೆಯ ಫಲಿತಾಂಶ ವೆಬ್ ಸೈಟ್ ನಲ್ಲಿ ಪ್ರಕಟ ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ(KSEAB) ನಡೆಸಿದ…
ಉಡುಪಿ: ಸ್ಥಗಿತಗೊಂಡಿದ್ದ ಆಟೋ ಎಲ್ಪಿಜಿ ಪೂರೈಕೆ ಪುನರಾರಂಭ ಉಡುಪಿ : ಹಲವು ದಿನಗಳಿಂದ ಉಡುಪಿಯಲ್ಲಿ ಸ್ಥಗಿತಗೊಂಡಿದ್ದ ಆಟೋ ಎಲ್ಪಿಜಿ ಪೂರೈಕೆ…
ಇನ್ಮುಂದೆ ಯಾವುದೇ ರಸಗೊಬ್ಬರ ಖರೀದಿಸಬೇಕಿದ್ದರೂ FID ಕಡ್ಡಾಯ ಬೆಂಗಳೂರು: ಮಧ್ಯಪ್ರಾಚ್ಯದ ಯುದ್ಧದಿಂದ ರಸಗೊಬ್ಬರ ಕಚ್ಚಾವಸ್ತುಗಳ ಕೊರತೆಯ ಆತಂಕ ಎದುರಾಗಿದೆ. ಈ…
ನಾಳೆ SSLC ಫಲಿತಾಂಶ ಪ್ರಕಟ ಬೆಂಗಳೂರು: ನಾಳೆ ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟವಾಗಲಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.…
ಕಾಪು : ಸ್ಕೂಟಿ ಹಿಂಬದಿಗೆ ತಡೆರಹಿತ ಬಸ್ ಢಿಕ್ಕಿ - ಬಾಲಕಿ ಸಾವು ಕಾಪು : ಸರ್ವಿಸ್ ರಸ್ತೆಯಿಂದ ರಾಷ್ಟ್ರೀಯ…