Featured

ಉಡುಪಿ: ಸೈಂಟ್ ಮೇರಿಸ್ ದ್ವೀಪದ ಅವ್ಯವಸ್ಥೆ ವಿರುದ್ಧ ಆಕ್ರೋಶ ; ಪ್ರವಾಸಿಗರ‌ ಮೇಲೆ ನಿರ್ವಹಣಾ ಸಿಬ್ಬಂದಿ ದರ್ಪ – Vishwanews24

ಉಡುಪಿ: ಸೈಂಟ್ ಮೇರಿಸ್ ದ್ವೀಪದ ಅವ್ಯವಸ್ಥೆ ವಿರುದ್ಧ ಆಕ್ರೋಶ ..

ಪ್ರವಾಸಿಗರ‌ ಮೇಲೆ ನಿರ್ವಹಣಾ ಸಿಬ್ಬಂದಿ ದರ್ಪ

ಉಡುಪಿ: ಉಡುಪಿ ಸೈಂಟ್ ಮೇರಿಸ್ ದ್ವೀಪದ ಅವ್ಯವಸ್ಥೆ ವಿರುದ್ಧ ಆಕ್ರೋಶ ಹೊರ ಹಾಕಿದ ಪ್ರವಾಸಿಗರ‌ ಮೇಲೆ ಸೈಂಟ್ ಮೇರಿಸ್‌ ದ್ವೀಪದ ನಿರ್ವಹಣಾ ಸಿಬ್ಬಂದಿ ದರ್ಪ ತೋರಿಸಿದ ಘಟನೆ ನಡೆದಿದೆ.

ದ್ವೀಪದೊಳಗಡೆ ಕ್ಯಾಮರಾ ನಿಷೇಧವಿದ್ದರೂ, ಶುಲ್ಕ ಪಾವತಿಸಿ ಲಗೇಜ್ ರೂಂನಲ್ಲಿ ಕ್ಯಾಮರಾ ಇಡಬಹುದು. ಆದರೆ ಇಲ್ಲಿ ಸುರಕ್ಷಿತವಾಗಿ ಕ್ಯಾಮರಾ ಇಡಲು ಯಾವುದೇ ವ್ಯವಸ್ಥೆ ಇಲ್ಲ. ಬಾಗಿಲೇ ಇಲ್ಲದ ರೂಂನಲ್ಲಿ ಲಕ್ಷಾಂತರ ಮೌಲ್ಯದ ಕ್ಯಾಮರಾ ಹೇಗೆ ಇಡುವುದು ಎಂದು ಪ್ರವಾಸಿಗನೊಬ್ಬ ಪ್ರಶ್ನಿಸಿದ್ದಾರೆ. ಆದರೆ ಇದಕ್ಕೆ ಕ್ಯಾಮರಾ ತೆಗೆದು ಬಿಸಾಡುತ್ತೇನೆ ಎಂಬುದಾಗಿ ದ್ವೀಪದ ನಿರ್ವಹಣಾ ಸಿಬಂದಿ ದರ್ಪದಿಂದ ಉತ್ತರಿಸಿದ್ದಾರೆ.

ಪ್ರವಾಸಿಗರನ್ನು ಸಿಬಂದಿಯು ಏಕವಚನದಲ್ಲೇ ಮಾತನಾಡಿಸಿದ್ದು, ಬೆದರಿಕೆ ಹಾಕಿದ್ದಾರೆ ಎಂದು ಪ್ರವಾಸಿಗರು ಆರೋಪಿಸಿದ್ದಾರೆ.

ಇನ್ನು ಸೀ ವಾಕ್‌ನಲ್ಲಿ ಕ್ಯಾಮರಾ ಪ್ರವೇಶಕ್ಕೆ ಹಣ ಪಾವತಿ ಮಾಡಿದ್ದರೂ, ಸೈಂಟ್ ಮೇರೀಸ್‌ನಲ್ಲಿ ಕ್ಯಾಮರಾಕ್ಕೆ ಅವಕಾಶ ಇಲ್ಲ. ಸೈಂಟ್ ಮೇರೀಸ್ ದ್ವೀಪಕ್ಕೆ ತೆರಳುವ ಬೋಟ್‌ನಲ್ಲಿ ದುಬಾರಿ ದರ ತೆಗೆದುಕೊಳ್ಳಲಾಗುತ್ತಿದೆ ಎಂದು ಪ್ರವಾಸಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅವ್ಯವಸ್ಥೆ ಆಗರವಾದರೂ ಉಡುಪಿ ಜಿಲ್ಲಾಡಳಿತ ಮೌನವಾಗಿದೆ ಎಂದು ಆಪಾದಿಸಿದ್ದಾರೆ. ಸೈಂಟ್ ಮೇರಿಸ್ ದ್ವೀಪದ ನಿರ್ವಹಣೆ ಜವಾಬ್ದಾರಿಯನ್ನು ಮಲ್ಪೆ ಅಭಿವೃದ್ಧಿ ಸಮಿತಿ ಹೊತ್ತಿದೆ. ಪ್ರವಾಸಿಗ ಹಾಗೂ ಸಿಬ್ಬಂದಿ ನಡುವಿನ ವಾಗ್ವಾದ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

Join our Whatsapp group by clicking the below link 👇👇

https://chat.whatsapp.com/KfUmhXQKZb114i4QHNvqEK 

 

Vishwa News 24

Recent Posts

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

22 hours ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

23 hours ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

1 day ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

1 day ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

1 day ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

1 day ago