Featured

ಉಡುಪಿ: ಸೈಂಟ್ ಮೇರಿಸ್ ದ್ವೀಪದ ಅವ್ಯವಸ್ಥೆ ವಿರುದ್ಧ ಆಕ್ರೋಶ ; ಪ್ರವಾಸಿಗರ‌ ಮೇಲೆ ನಿರ್ವಹಣಾ ಸಿಬ್ಬಂದಿ ದರ್ಪ – Vishwanews24

ಉಡುಪಿ: ಸೈಂಟ್ ಮೇರಿಸ್ ದ್ವೀಪದ ಅವ್ಯವಸ್ಥೆ ವಿರುದ್ಧ ಆಕ್ರೋಶ ..

ಪ್ರವಾಸಿಗರ‌ ಮೇಲೆ ನಿರ್ವಹಣಾ ಸಿಬ್ಬಂದಿ ದರ್ಪ

ಉಡುಪಿ: ಉಡುಪಿ ಸೈಂಟ್ ಮೇರಿಸ್ ದ್ವೀಪದ ಅವ್ಯವಸ್ಥೆ ವಿರುದ್ಧ ಆಕ್ರೋಶ ಹೊರ ಹಾಕಿದ ಪ್ರವಾಸಿಗರ‌ ಮೇಲೆ ಸೈಂಟ್ ಮೇರಿಸ್‌ ದ್ವೀಪದ ನಿರ್ವಹಣಾ ಸಿಬ್ಬಂದಿ ದರ್ಪ ತೋರಿಸಿದ ಘಟನೆ ನಡೆದಿದೆ.

ದ್ವೀಪದೊಳಗಡೆ ಕ್ಯಾಮರಾ ನಿಷೇಧವಿದ್ದರೂ, ಶುಲ್ಕ ಪಾವತಿಸಿ ಲಗೇಜ್ ರೂಂನಲ್ಲಿ ಕ್ಯಾಮರಾ ಇಡಬಹುದು. ಆದರೆ ಇಲ್ಲಿ ಸುರಕ್ಷಿತವಾಗಿ ಕ್ಯಾಮರಾ ಇಡಲು ಯಾವುದೇ ವ್ಯವಸ್ಥೆ ಇಲ್ಲ. ಬಾಗಿಲೇ ಇಲ್ಲದ ರೂಂನಲ್ಲಿ ಲಕ್ಷಾಂತರ ಮೌಲ್ಯದ ಕ್ಯಾಮರಾ ಹೇಗೆ ಇಡುವುದು ಎಂದು ಪ್ರವಾಸಿಗನೊಬ್ಬ ಪ್ರಶ್ನಿಸಿದ್ದಾರೆ. ಆದರೆ ಇದಕ್ಕೆ ಕ್ಯಾಮರಾ ತೆಗೆದು ಬಿಸಾಡುತ್ತೇನೆ ಎಂಬುದಾಗಿ ದ್ವೀಪದ ನಿರ್ವಹಣಾ ಸಿಬಂದಿ ದರ್ಪದಿಂದ ಉತ್ತರಿಸಿದ್ದಾರೆ.

ಪ್ರವಾಸಿಗರನ್ನು ಸಿಬಂದಿಯು ಏಕವಚನದಲ್ಲೇ ಮಾತನಾಡಿಸಿದ್ದು, ಬೆದರಿಕೆ ಹಾಕಿದ್ದಾರೆ ಎಂದು ಪ್ರವಾಸಿಗರು ಆರೋಪಿಸಿದ್ದಾರೆ.

ಇನ್ನು ಸೀ ವಾಕ್‌ನಲ್ಲಿ ಕ್ಯಾಮರಾ ಪ್ರವೇಶಕ್ಕೆ ಹಣ ಪಾವತಿ ಮಾಡಿದ್ದರೂ, ಸೈಂಟ್ ಮೇರೀಸ್‌ನಲ್ಲಿ ಕ್ಯಾಮರಾಕ್ಕೆ ಅವಕಾಶ ಇಲ್ಲ. ಸೈಂಟ್ ಮೇರೀಸ್ ದ್ವೀಪಕ್ಕೆ ತೆರಳುವ ಬೋಟ್‌ನಲ್ಲಿ ದುಬಾರಿ ದರ ತೆಗೆದುಕೊಳ್ಳಲಾಗುತ್ತಿದೆ ಎಂದು ಪ್ರವಾಸಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅವ್ಯವಸ್ಥೆ ಆಗರವಾದರೂ ಉಡುಪಿ ಜಿಲ್ಲಾಡಳಿತ ಮೌನವಾಗಿದೆ ಎಂದು ಆಪಾದಿಸಿದ್ದಾರೆ. ಸೈಂಟ್ ಮೇರಿಸ್ ದ್ವೀಪದ ನಿರ್ವಹಣೆ ಜವಾಬ್ದಾರಿಯನ್ನು ಮಲ್ಪೆ ಅಭಿವೃದ್ಧಿ ಸಮಿತಿ ಹೊತ್ತಿದೆ. ಪ್ರವಾಸಿಗ ಹಾಗೂ ಸಿಬ್ಬಂದಿ ನಡುವಿನ ವಾಗ್ವಾದ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

Join our Whatsapp group by clicking the below link 👇👇

https://chat.whatsapp.com/KfUmhXQKZb114i4QHNvqEK 

 

Vishwa News 24

Recent Posts

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ – vishwanews24

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…

1 hour ago

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು – vishwanews24

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…

3 hours ago

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ – vishwanews24

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…

3 hours ago

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ – vishwanews24

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…

3 hours ago

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ – vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…

3 hours ago

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

2 days ago