ಉಡುಪಿ: ಶಿರ್ವ ಗ್ರಾಮ ಪಂಚಾಯತ್ ವ್ಯಾಪ್ತಿಯ ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ಮನೆಕಟ್ಟಿದ್ದಾರೆ ಅನ್ನೋ ನೆಪದಲ್ಲಿ, ಪರಿಶಿಷ್ಟ ಜಾತಿಯ ವ್ಯಕ್ತಿಯೊಬ್ಬರ ಮನೆಯನ್ನು ಬಿಜೆಪಿಯವರ ಕುಮ್ಮಕ್ಕಿನಿಂದ ಶಿರ್ವ ಗ್ರಾಮಪಂಚಾಯತ್ ಪಿಡಿಓ ,ಕಾಪು ತಹಸಿಲ್ದಾರ್ ಆದೇಶದ ನೆಪವನ್ನು ಇಟ್ಟುಕೊಂಡು ಮನೆ ದ್ವಂಸಗೊಳಿಸಿದ್ದು, ಈ ವಿಚಾರದಲ್ಲಿ ಸ್ಪಷ್ಟನೆ ಕೇಳಲು ತೆರಳಿದ ಮಾಜಿ ಸಚಿವರಾದ ವಿನಯಕುಮಾರ್ ಸೊರಕೆಯವರ ಜೊತೆ ಅಮಾನವೀಯ ವರ್ತನೆ ತೋರಿ ಹಲ್ಲೆಗೆ ಯತ್ನಿಸಿದ ಪಿಡಿಓ ರವರನ್ನು ತಕ್ಷಣ ಅಮಾನತುಗೊಳಿಸಬೇಕು ಎಂದು ಕಾಪು ಯುವಕಾಂಗ್ರೆಸ್ ಒತ್ತಾಯಿಸಿದೆ.
ಈ ಮಧ್ಯೆ ಈ ವಿಚಾರದಲ್ಲಿ ಸೊರಕೆಯವರು ಮಾಧ್ಯಮ ಹೇಳಿಕೆ ನೀಡುತ್ತಿದ್ದ ಸಂದರ್ಭದಲ್ಲಿ ಏಕಾಏಕಿ ಬಿಜೆಪಿ ಗೂಂಡಾಗಳು, ಘೋಷಣೆ ಕೂಗುತ್ತಾ, ಸೊರಕೆಯವರ ಮಾತಿಗೆ ಅಡ್ಡಿಪಡಿಸಿದ್ದು, ಬಡಕುಟುಂಬದ ಮನೆಯನ್ನು ದ್ವಂಸಗೊಳಿಸುವಲ್ಲಿ ಬಿಜೆಪಿಯ ಕೈವಾಡ ಸ್ಪಷ್ಟವಾಗಿ ಗೋಚರವಾಗುತ್ತಿದ್ದು, ಶಿರ್ವ ಪಿಡಿಓ ಜೊತೆ ಸೇರಿ ಯಾವುದೇ ನೋಟಿಸ್ ನೀಡದೆ ಮನೆಯನ್ನು ದ್ವಂಸಗೊಳಿಸಿದ್ದು ಅತ್ಯಂತ ಖಂಡನೀಯ ಆ ಕುಟುಂಬ ಮನೆ ಇಲ್ಲದೆ ಈಗ ಬೀದಿಪಾಲಾಗಿದೆ. ಬಿಜೆಪಿ ಯವರಿಗೆ ನೈತಿಕತೆ ಇದ್ದರೆ ನೊಂದ ಮಹಿಳೆಯ ಕುಟುಂಬದ ಜೊತೆ ಇದ್ದು ಮನೆ ನಿರ್ಮಾಣ ಕಾರ್ಯದಲ್ಲಿ ನೈತಿಕ ಬೆಂಬಲ ಸೂಚಿಸಬೇಕು. ಕೂಡಲೇ ಆ ಬಡಕುಟುಂಬಕ್ಕೆ ಮನೆಯನ್ನು ಪಂಚಾಯ್ತಿ ವತಿಯಿಂದಲೇ ನಿರ್ಮಾಣ ಮಾಡಿಕೊಡಬೇಕು ಎಂದು ಕಾಪು ಬ್ಲಾಕ್ ಯುವಕಾಂಗ್ರೆಸ್ ಅಧ್ಯಕ್ಷ ರಮೀಝ್ ಹುಸೈನ್ ಒತ್ತಾಯಿಸಿದ್ದಾರೆ
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…