Featured

ಉಡುಪಿ : ಸೊರಕೆಯವರ ಜೊತೆ ಅಮಾನವೀಯ ವರ್ತನೆ ತೋರಿ ಹಲ್ಲೆಗೆ ಯತ್ನಿಸಿದ  ಶಿರ್ವ ಪಿಡಿಓರವರನ್ನು ತಕ್ಷಣ ಅಮಾನತುಗೊಳಿಸಿ  : ಕಾಪು ಯುವಕಾಂಗ್ರೆಸ್ ಅಧ್ಯಕ್ಷ ರಮೀಝ್ ಹುಸೈನ್ ಒತ್ತಾಯ – Vishwanews24

ಉಡುಪಿ : ಸೊರಕೆಯವರ ಜೊತೆ ಅಮಾನವೀಯ ವರ್ತನೆ ತೋರಿ ಹಲ್ಲೆಗೆ ಯತ್ನಿಸಿದ  ಶಿರ್ವ ಪಿಡಿಓರವರನ್ನು ತಕ್ಷಣ ಅಮಾನತುಗೊಳಿಸಿ  : ಕಾಪು ಯುವಕಾಂಗ್ರೆಸ್ ಅಧ್ಯಕ್ಷ ರಮೀಝ್ ಹುಸೈನ್ ಒತ್ತಾಯ

ಉಡುಪಿ: ಶಿರ್ವ ಗ್ರಾಮ ಪಂಚಾಯತ್ ವ್ಯಾಪ್ತಿಯ ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ಮನೆಕಟ್ಟಿದ್ದಾರೆ ಅನ್ನೋ ನೆಪದಲ್ಲಿ, ಪರಿಶಿಷ್ಟ ಜಾತಿಯ ವ್ಯಕ್ತಿಯೊಬ್ಬರ ಮನೆಯನ್ನು ಬಿಜೆಪಿಯವರ ಕುಮ್ಮಕ್ಕಿನಿಂದ ಶಿರ್ವ ಗ್ರಾಮಪಂಚಾಯತ್ ಪಿಡಿಓ ,ಕಾಪು ತಹಸಿಲ್ದಾರ್ ಆದೇಶದ ನೆಪವನ್ನು ಇಟ್ಟುಕೊಂಡು ಮನೆ ದ್ವಂಸಗೊಳಿಸಿದ್ದು, ಈ ವಿಚಾರದಲ್ಲಿ ಸ್ಪಷ್ಟನೆ ಕೇಳಲು ತೆರಳಿದ ಮಾಜಿ ಸಚಿವರಾದ ವಿನಯಕುಮಾರ್ ಸೊರಕೆಯವರ ಜೊತೆ ಅಮಾನವೀಯ ವರ್ತನೆ ತೋರಿ ಹಲ್ಲೆಗೆ ಯತ್ನಿಸಿದ ಪಿಡಿಓ ರವರನ್ನು ತಕ್ಷಣ ಅಮಾನತುಗೊಳಿಸಬೇಕು ಎಂದು ಕಾಪು ಯುವಕಾಂಗ್ರೆಸ್ ಒತ್ತಾಯಿಸಿದೆ.

ಈ ಮಧ್ಯೆ ಈ ವಿಚಾರದಲ್ಲಿ ಸೊರಕೆಯವರು ಮಾಧ್ಯಮ ಹೇಳಿಕೆ ನೀಡುತ್ತಿದ್ದ ಸಂದರ್ಭದಲ್ಲಿ ಏಕಾಏಕಿ ಬಿಜೆಪಿ ಗೂಂಡಾಗಳು, ಘೋಷಣೆ ಕೂಗುತ್ತಾ, ಸೊರಕೆಯವರ ಮಾತಿಗೆ ಅಡ್ಡಿಪಡಿಸಿದ್ದು, ಬಡಕುಟುಂಬದ ಮನೆಯನ್ನು ದ್ವಂಸಗೊಳಿಸುವಲ್ಲಿ ಬಿಜೆಪಿಯ ಕೈವಾಡ ಸ್ಪಷ್ಟವಾಗಿ ಗೋಚರವಾಗುತ್ತಿದ್ದು, ಶಿರ್ವ ಪಿಡಿಓ ಜೊತೆ ಸೇರಿ ಯಾವುದೇ ನೋಟಿಸ್ ನೀಡದೆ ಮನೆಯನ್ನು ದ್ವಂಸಗೊಳಿಸಿದ್ದು ಅತ್ಯಂತ ಖಂಡನೀಯ ಆ ಕುಟುಂಬ ಮನೆ ಇಲ್ಲದೆ ಈಗ ಬೀದಿಪಾಲಾಗಿದೆ. ಬಿಜೆಪಿ ಯವರಿಗೆ ನೈತಿಕತೆ ಇದ್ದರೆ ನೊಂದ ಮಹಿಳೆಯ ಕುಟುಂಬದ ಜೊತೆ ಇದ್ದು ಮನೆ ನಿರ್ಮಾಣ ಕಾರ್ಯದಲ್ಲಿ ನೈತಿಕ ಬೆಂಬಲ ಸೂಚಿಸಬೇಕು. ಕೂಡಲೇ ಆ ಬಡಕುಟುಂಬಕ್ಕೆ ಮನೆಯನ್ನು ಪಂಚಾಯ್ತಿ ವತಿಯಿಂದಲೇ ನಿರ್ಮಾಣ ಮಾಡಿಕೊಡಬೇಕು ಎಂದು ಕಾಪು ಬ್ಲಾಕ್ ಯುವಕಾಂಗ್ರೆಸ್ ಅಧ್ಯಕ್ಷ ರಮೀಝ್ ಹುಸೈನ್ ಒತ್ತಾಯಿಸಿದ್ದಾರೆ

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

2 days ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

2 days ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

2 days ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

2 days ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

2 days ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

2 days ago