ಉಡುಪಿ : ಸೋಮವಾರ ನಡೆಯುವ ಕರ್ನಾಟಕ ಬಂದ್ ಗೆ ಕರ್ನಾಟಕ ರಾಜ್ಯ ಬಸ್ ಮಾಲಕರ ಸಂಘಗಳ ಒಕ್ಕೂಟದ ಬೆಂಬಲವಿಲ್ಲ : ಕುಯಿಲಾಡಿ -Vishwanews24

Featured, ಉಡುಪಿ

ಉಡುಪಿ : ಸೋಮವಾರ ನಡೆಯುವ ಕರ್ನಾಟಕ ಬಂದ್ ಗೆ ಕರ್ನಾಟಕ ರಾಜ್ಯ ಬಸ್ ಮಾಲಕರ ಸಂಘಗಳ ಒಕ್ಕೂಟದ ಬೆಂಬಲವಿಲ್ಲ : ಕುಯಿಲಾಡಿ -Vishwanews24

 

ಉಡುಪಿ : ರಾಜ್ಯದ ಬೇರೆ ಬೇರೆ ಸಂಘಟನೆಗಳು ಕರೆದಿರುವ ಕರ್ನಾಟಕ ಬಂದ್ ಗೆ ರಾಜ್ಯ ಬಸ್ ಮಾಲಕರ ಸಂಘಗಳ ಒಕ್ಕೂಟದ ಬೆಂಬಲವಿಲ್ಲ ಯಥಾ ಸ್ಥಿತಿಯಂತೆ ಬಸ್ ಸಂಚಾರ ಇರುತ್ತದೆ ಎಂದು ಕರ್ನಾಟಕ ರಾಜ್ಯ ಬಸ್ ಮಾಲಕರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಕುಯಿಲಾಡಿ ಸುರೇಶ ನಾಯಕ್ ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಈಗಾಗಲೇ ಕೊರೋನಾ 1 ಮತ್ತು 2 ರ ಬಂದ್ ನಿಂದ ನಮ್ಮ ಬಸ್ ಉದ್ಯಮ ಸೊರಗಿ ಹೋಗಿದೆ. ಯಾವುದೇ ಕಾರಣಕ್ಕೂ ಬಸ್ ಬಂದ್ ಮಾಡುವ ಸ್ಥಿತಿಯಲ್ಲಿ ನಾವಿಲ್ಲ. ಈಗ ಬಸ್ ಉದ್ಯಮ ಸ್ವಲ್ಪ ಚೇತರಿಸಿಕೊಳ್ಳುತ್ತಾ ಇದೆ, ಈ ಹಂತದಲ್ಲಿ ಪುನಃ ಬಂದ್ ಮಾಡುವ ಪ್ರಶ್ನೆ ನಮ್ಮ ಮುಂದಿಲ್ಲ ನಮ್ಮನ್ನು ಯಾವುದೇ ಸಂಘಟನೆಗಳು ಇನ್ನು ಮುಂದೆ ಬಂದ್ ಗಾಗಿ ಕೇಳಿಕೊಳ್ಳಬಾರದು ಮತ್ತು ಅದನ್ನು ಬೆಂಬಲಿಸುವ ಪ್ರಶ್ನೆ ನಮ್ಮಲ್ಲಿ ಇಲ್ಲ ಎಂದು ಕುಯಿಲಾಡಿ ತಿಳಿಸಿದ್ದಾರೆ.