Featured

ಉಡುಪಿ : ಸೋಲಿನ ಖಾತರಿಯಿಂದ ಕಾಂಗ್ರೆಸ್ ವಿತರಿಸುತ್ತಿರುವ ಗ್ಯಾರಂಟಿ ಕಾರ್ಡ್ ಮತದಾರರನ್ನು ಯಾಮಾರಿಸುವ ಸುಳ್ಳಿನ ಕಂತೆ  : ಕುಯಿಲಾಡಿ ಸುರೇಶ್ ನಾಯಕ್ – Vishwanews24

ಉಡುಪಿ : ಸೋಲಿನ ಖಾತರಿಯಿಂದ ಕಾಂಗ್ರೆಸ್ ವಿತರಿಸುತ್ತಿರುವ ಗ್ಯಾರಂಟಿ ಕಾರ್ಡ್ ಮತದಾರರನ್ನು ಯಾಮಾರಿಸುವ ಸುಳ್ಳಿನ ಕಂತೆ  : ಕುಯಿಲಾಡಿ ಸುರೇಶ್ ನಾಯಕ್

ಉಡುಪಿ : ಜನತೆಯ ವಿಶ್ವಾಸ ಕಳೆದುಕೊಂಡಿರುವ ಕಾಂಗ್ರೆಸ್ ಇದೀಗ ಸೋಲಿನ ಖಾತರಿಯಿಂದ ವಿತರಿಸುತ್ತಿರುವ ಗ್ಯಾರಂಟಿ ಕಾರ್ಡ್ ಮತದಾರರನ್ನು ಯಾಮಾರಿಸುವ ಸುಳ್ಳಿನ ಕಂತೆಯಾಗಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ.

‘ಗರೀಭೀ ಹಠಾವೋ’ ಎಂಬ ಪೊಳ್ಳು ಘೋಷಣೆಯೊಂದಿಗೆ ಸುದೀರ್ಘ ಅವಧಿಗೆ ದುರಾಡಳಿತ ನಡೆಸಿ ದೇಶ ಲೂಟಿಗೈದ ಕಾಂಗ್ರೆಸ್ಸಿನ ಸ್ವತಃ ಪರಮೋಚ್ಚ ನಾಯಕರು ಭ್ರಷ್ಟಾಚಾರ ಹಗರಣಗಳಲ್ಲಿ ತನಿಖೆ ಎದುರಿಸುತ್ತಾ ಬೇಲ್ ಮೇಲೆ ಹೊರಗಿರುವುದು ಕಾಂಗ್ರೆಸ್ಸಿನ ನೈತಿಕತೆಗೆ ಒಡ್ಡಿರುವ ಜ್ವಲಂತ ಸವಾಲಾಗಿದೆ.

ಅನ್ನಭಾಗ್ಯ ಕೇಂದ್ರ ಸರಕಾರದ ಯೋಜನೆಯಾಗಿದೆ. ಆಹಾರ ಭದ್ರತಾ ಕಾಯ್ದೆಯಡಿ ಕೇಂದ್ರ ಸರಕಾರ ಪ್ರತೀ ಕೆ.ಜಿ. ಅಕ್ಕಿಗೆ ರೂ.29ರಂತೆ ವೆಚ್ಚ ಭರಿಸಿ ರಾಜ್ಯಕ್ಕೆ ನೀಡುತ್ತಿದ್ದು, ರಾಜ್ಯದ ಪಾಲು ಕೇವಲ ರೂ.3 ಮಾತ್ರ. ಕೇಂದ್ರದ ಯೋಜನೆಯನ್ನು ತನ್ನದೆಂದು ಬಿಂಬಿಸಿ, ಕಾಂಗ್ರೆಸ್ ಕೇವಲ ಸುಳ್ಳು ಭರವಸೆ ನೀಡುತ್ತಿದೆ.

ಈಗಾಗಲೇ ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ ಎಸ್.ಸಿ., ಎಸ್.ಟಿ. ಸಮುದಾಯಗಳಿಗೆ ಸರಾಸರಿ ಬಳಕೆಯಾಗುವ 75 ಯುನಿಟ್ ಉಚಿತ ವಿದ್ಯುತ್ ನೀಡುತ್ತಿದ್ದು, ವಿದ್ಯುತ್ ಸರಬರಾಜು ಆತ್ಯುತ್ತಮ ಸ್ಥಿತಿಯಲ್ಲಿದೆ. ಆದರೆ ತನ್ನ ಆಡಳಿತಾವಧಿಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅಸಮರ್ಪಕ ವಿದ್ಯುತ್ ಪೂರೈಕೆಯಿಂದ ಮೇಣದ ಬತ್ತಿ ಉರಿಸಿ, ಟಾರ್ಚ್ ಬೆಳಕಿನಲ್ಲಿ ಬಜೆಟ್ ಮಂಡಿಸಿರುವುದನ್ನು ಮರೆತ ಕಾಂಗ್ರೆಸ್ ಉಚಿತ ವಿದ್ಯುತ್ ಎಂದು ಬೊಗಳೆ ಬಿಟ್ಟಿರುವುದು ಸುಳ್ಳು ಗ್ಯಾರಂಟಿ ಎಂದು ಅವರು ತಿಳಿಸಿದ್ದಾರೆ.

ಕಾಂಗ್ರೆಸ್ಸಿನ ಇನ್ನಿತರ ಸುಳ್ಳು ಗ್ಯಾರಂಟಿಗಳನ್ನು ಊಹಿಸಲೂ ಅಸಾಧ್ಯ ಎಂಬುದನ್ನು ರಾಜ್ಯದ ಜನತೆ ಚೆನ್ನಾಗಿಯೇ ಅರಿತಿದ್ದಾರೆ. ರಾಜ್ಯದ ಇತಿಹಾಸದಲ್ಲೇ ಅತೀ ಹೆಚ್ಚು ಸಾಲ ಮಾಡಿದ ಮುಖ್ಯಮಂತ್ರಿ ಎಂದರೆ ಕಾಂಗ್ರೆಸ್ ಆಡಳಿತದ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಎಂಬುದು ಜಗಜ್ಜಾಹೀರಾಗಿದೆ. ಈ ನಿಟ್ಟಿನಲ್ಲಿ ರಾಜ್ಯದ ಜನತೆಯ ದಾರಿ ತಪ್ಪಿಸುವ, ರಾಜ್ಯವನ್ನು ಸಾಲದ ಶೂಲಕ್ಕೇರಿಸುವ ಕಾಂಗ್ರೆಸ್ಸಿನ ಸುಳ್ಳು ಭರವಸೆಗಳ ಪೊಳ್ಳು ಗ್ಯಾರಂಟಿ ಕಾರ್ಡ್ ಎಂಬ ಪ್ರಹಸನಕ್ಕೆ ಮತದಾರರು ಮನ್ನಣೆ ನೀಡಲಾರರು. ಕಾಂಗ್ರೆಸ್ಸಿಗೆ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಹೀನಾಯ ಸೋಲು ಮಾತ್ರ ನೈಜ ಗ್ಯಾರಂಟಿ ಎಂದು ಕುಯಿಲಾಡಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಉಡುಪಿ : ರೈಲ್ವೆ ನಿಲ್ದಾಣದಲ್ಲಿ ಆತ್ಮಹತ್ಯೆಗೆ ಯತ್ನಿಸುತ್ತಿದ್ದ ಯುವಕನ ರಕ್ಷಿಸಿದ ರೈಲ್ವೇ ಆರ್. ಪಿ .ಎಫ್ ಪಡೆ – vishwanews24

ಉಡುಪಿ : ರೈಲ್ವೆ ನಿಲ್ದಾಣದಲ್ಲಿ ಆತ್ಮಹತ್ಯೆಗೆ ಯತ್ನಿಸುತ್ತಿದ್ದ ಯುವಕನ ರಕ್ಷಿಸಿದ ರೈಲ್ವೇ ಆರ್. ಪಿ .ಎಫ್ ಪಡೆ ಉಡುಪಿ: ಇಂದ್ರಾಳಿ…

12 hours ago

ಆದಿಚುಂಚನಗಿರಿ ಮಠದ ಗುರುಭೈರವೈಕ್ಯ ಮಂದಿರ ಉದ್ಘಾಟಿಸಿದ ಪ್ರಧಾನಿ ಮೋದಿ – vishwanews24

ಆದಿಚುಂಚನಗಿರಿ ಮಠದ ಗುರುಭೈರವೈಕ್ಯ ಮಂದಿರ ಉದ್ಘಾಟಿಸಿದ ಪ್ರಧಾನಿ ಮೋದಿ ಮಂಡ್ಯ: ಆದಿಚುಂಚನಗಿರಿ ಮಠದಲ್ಲಿ ದ್ರಾವಿಡ-ಹೊಯ್ಸಳ ಶೈಲಿಯ ಶಿಲ್ಪಕಲೆಯಿಂದ ನಿರ್ಮಿಸಿರುವ ಶ್ರೀಗುರು…

12 hours ago

ಮಂಗಳೂರು : ಅಡುಗೆ ಅನಿಲ ಬೆಲೆ ಏರಿಕೆ ಖಂಡಿಸಿ ಕೇಂದ್ರದ ವಿರುದ್ಧ  ಕಾಂಗ್ರೆಸ್ ಪ್ರತಿಭಟನೆ – vishwanews24

ಮಂಗಳೂರು : ಅಡುಗೆ ಅನಿಲ ಬೆಲೆ ಏರಿಕೆ ಖಂಡಿಸಿ ಕೇಂದ್ರದ ವಿರುದ್ಧ  ಕಾಂಗ್ರೆಸ್ ಪ್ರತಿಭಟನೆ ಕೇಂದ್ರ ಸರಕರದ ಅಸ್ಪಷ್ಟ ವಿದೇಶಾಂಗ…

13 hours ago

ಕೊಂಕಣ ರೈಲ್ವೆ: ಬೈಂದೂರಿನಲ್ಲಿ ಕ್ರಾಸಿಂಗ್ ಸ್ಟೇಶನ್ ನಿರ್ಮಾಣಕ್ಕೆ ಪ್ರಸ್ತಾವನೆ – vishwanews24

ಕೊಂಕಣ ರೈಲ್ವೆ: ಬೈಂದೂರಿನಲ್ಲಿ ಕ್ರಾಸಿಂಗ್ ಸ್ಟೇಶನ್ ನಿರ್ಮಾಣಕ್ಕೆ ಪ್ರಸ್ತಾವನೆ ಉಡುಪಿ : ಕರ್ನಾಟಕ ಕರಾವಳಿಯ ಮೂರು ಜಿಲ್ಲೆಗಳನ್ನು -ಉತ್ತರ ಕನ್ನಡ,…

13 hours ago

ರಾಷ್ಟ್ರೀಯ ಪುರಸ್ಕಾರಕ್ಕೆ ಆಯ್ಕೆ: ಬೆಳ್ಳೆ ಗ್ರಾ.ಪಂ.ಗೆ ಕೇಂದ್ರ ತಂಡ ಭೇಟಿ -vishwanews24

ರಾಷ್ಟ್ರೀಯ ಪುರಸ್ಕಾರಕ್ಕೆ ಆಯ್ಕೆ: ಬೆಳ್ಳೆ ಗ್ರಾ.ಪಂ.ಗೆ ಕೇಂದ್ರ ತಂಡ ಭೇಟಿ ಶಿರ್ವ : ಆತ್ಮ ನಿರ್ಭರ ಭಾರತ ರಾಷ್ಟ್ರೀಯ ಪ್ರಶಸ್ತಿಗೆ…

13 hours ago

ಬಿಹಾರದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಪ್ರಮಾಣವಚನ ಸ್ವೀಕಾರ -vishwanews24

ಬಿಹಾರದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಪ್ರಮಾಣವಚನ ಸ್ವೀಕಾರ ಪಾಟ್ನಾ: ಬಿಹಾರದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿ ನಾಯಕ…

13 hours ago