Featured

ಉಡುಪಿ: ಸೌಜನ್ಯ ನ್ಯಾಯಕ್ಕಾಗಿ ಹೋರಾಟ ಸಮಿತಿಯಿಂದ ಆ.24ರಂದು 25,000ಕ್ಕೂ ಅಧಿಕ ದೇವಸ್ಥಾನಗಳಲ್ಲಿ ಏಕಕಾಲದಲ್ಲಿ ಪೂಜೆ – vishwanews24

ಉಡುಪಿ: ಸೌಜನ್ಯ ನ್ಯಾಯಕ್ಕಾಗಿ ಹೋರಾಟ ಸಮಿತಿಯಿಂದ ಆ.24ರಂದು 25,000ಕ್ಕೂ ಅಧಿಕ ದೇವಸ್ಥಾನಗಳಲ್ಲಿ ಏಕಕಾಲದಲ್ಲಿ ಪೂಜೆ

ಉಡುಪಿ: ಸೌಜನ್ಯಳನ್ನು ಅತ್ಯಾಚಾರ ಮಾಡಿ ಕೊಲೆ ಮಾಡಿದವರಿಗೆ, ಸಹಕಾರ ಮಾಡಿದವರಿಗೆ ಶಿಕ್ಷೆಯಾಗಬೇಕು ಹಾಗೂ ಅಲ್ಲಿ ಸತ್ತಂತಹ ಎಲ್ಲಾ ಆತ್ಮಗಳ ಮುಕ್ತಿಗಾಗಿ ಮತ್ತು ನ್ಯಾಯಕ್ಕಾಗಿ ಸೌಜನ್ಯ ಹೋರಾಟ ಸಮಿತಿಯಿಂದ ಆ.24ರಂದು ರಾಜ್ಯದ ಸುಮಾರು 25,000ಕ್ಕೂ ಅಧಿಕ -ದೇವಸ್ಥಾನಗಳಲ್ಲಿ ಏಕಕಾಲದಲ್ಲಿ ದೇವರಿಗೆ ಮೊರೆ ಹಾಗೂ ಪೂಜೆ ಸಲ್ಲಿಸಲಾಗುವುದು ಎಂದು ಸಮಿತಿಯ ಕೆ.ದಿನೇಶ್ ಗಾಣಿಗ ತಿಳಿಸಿದ್ದಾರೆ.

ಶುಕ್ರವಾರ ಸುದ್ದಿಗೋಷ್ಠಿ ನಡೆಸಿದ ಅವರು, ಧರ್ಮಸ್ಥಳ ಮತ್ತು ಉಜಿರೆಯಲ್ಲಿ 2002ರಿಂದ 2012ರವರೆಗೆ 452 ಅಸಹಜ ಸಾವು ಪ್ರಕರಣಗಳು ಸಂಭವಿಸಿದ್ದು, ಇದರಲ್ಲಿ ಧರ್ಮಸ್ಥಳ ಗ್ರಾಮ ಪಂಚಾಯಿತಿ ಹೇಳಿರುವ 262 ಅಸಹಜ ಸಾವುಗಳ ಶವಗಳನ್ನು ಹೂತಿರುವ ಬಗ್ಗೆ ದಾಖಲೆ ದೊರೆತಿದೆ.2012ರಲ್ಲಿ ಆನೆ ಮಾವುತ ನಾರಾಯಣ ಮತ್ತು ಯಮುನಾ ಅವರ ಕೊಲೆ, ದರೋಡೆ ನಡೆದಿತ್ತು. ಇಲ್ಲೂ ಕೂಡಾ ಆರೋಪಿಗಳು ಸಿಕ್ಕಿಲ್ಲ. ಇದಾಗಿ 20 ದಿನದಲ್ಲೇ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ನಡೆದಿತ್ತು. ಈ ಪ್ರಕರಣವೂ ಇದೇ ದಾರಿಯನ್ನು ಹಿಡಿದಿದೆ. ಇವೆಲ್ಲಾ ಪ್ರಕರಣಗಳು ಧರ್ಮಸ್ಥಳ ಗ್ರಾಮದ ಆಸುಪಾಸಿನಲ್ಲಿ ನಡೆಯುತ್ತಿದ್ದರೂ ಕೂಡಾ ಯಾವ ಪ್ರಕರಣದಲ್ಲೂ ಆರೋಪಿಗಳು ಸಿಗುತ್ತಿಲ್ಲ.

ಈ ಹಿಂದೆ ನಡೆದ ವೇದವಲ್ಲಿ, ಪದ್ಮಲತಾ, ನಾರಾಯಣ ಮತ್ತು ಯಮುನಾ, ಸೌಜನ್ಯ ಕೊಲೆ ನಡೆದಾಗ ಮಾತನಾಡದ, ಅಕ್ವಿಟಲ್ ಕಮಿಟಿ ರಚಿಸುವದರ ಬಗ್ಗೆ ಮೌನವಾದ ಬಿಜೆಪಿ ಶಾಸಕರು ಈಗ ಯಾಕೆ ಹೋರಾಟ ನಡೆಸುತ್ತಿದ್ದಾರೆ ? ಯಾರನ್ನು ಉಳಿಸುವ ಸಲುವಾಗಿ ಹೋರಾಟ ನಡೆಸುತ್ತಿದ್ದಾರೆ ಎಂಬುದು ಜನ ಸಾಮಾನ್ಯರಿಗೆ ತಿಳಿದಿದೆ. ನಾವು ನ್ಯಾಯಾದಾನ ಕೇಳಿ ಹೈಕೋರ್ಟ್, ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದೇವೆ, ಮುಂದಿನ ದಿನಗಳಲ್ಲಿ ಜಿಲ್ಲೆಯಲ್ಲಿ ಚರ್ಚೆ, ಸಂವಾದಗಳನ್ನು ಕೂಡಾ ನಡೆಸುತ್ತೇವೆ ಎಂದು ಅವರು ತಿಳಿಸಿದರು.

ಸಮಿತಿಯ ತಮ್ಮಣ್ಣ ಶೆಟ್ಟಿ , ಸಚಿನ್ ಶ್ರೀಯಾನ್ ಹಾಗೂ ಅಂಬಿಕಾ ಪ್ರಭು ಉಪಸ್ಥಿತರಿದ್ದರು.

Vishwa News 24

Recent Posts

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

18 hours ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

18 hours ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

19 hours ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

19 hours ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

21 hours ago

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ – vishwanews24

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…

21 hours ago