Featured

ಉಡುಪಿ: ಸೌದಿಯಲ್ಲಿ ಬಂಧಿತರಾಗಿದ್ದ ಹರೀಶ್ ಬಂಗೇರಾ ಮರಳಿ ತಾಯ್ನಾಡಿಗೆ -Vishwanews24

ಉಡುಪಿ: ಸೌದಿಯಲ್ಲಿ ಬಂಧಿತರಾಗಿದ್ದ ಹರೀಶ್ ಬಂಗೇರಾ ಮರಳಿ ತಾಯ್ನಾಡಿಗೆ -Vishwanews24

ಫೇಸ್‌ಬುಕ್‌ನಲ್ಲಿ ಮೆಕ್ಕಾ ಹಾಗೂ ಸೌದಿ ದೊರೆಯ ಬಗ್ಗೆ ಅವಹೇಳನಕಾರಿಯಾಗಿ ಬರಹ ಪ್ರಕಟಿಸಿದ ಆರೋಪ..

ಉಡುಪಿ: ಫೇಸ್‌ಬುಕ್‌ನಲ್ಲಿ ಮೆಕ್ಕಾ ಹಾಗೂ ಸೌದಿ ದೊರೆಯ ಬಗ್ಗೆ ಅವಹೇಳನಕಾರಿಯಾಗಿ ಬರಹ ಪ್ರಕಟಿಸಿದ ಆರೋಪದಡಿಯಲ್ಲಿ ಸೌದಿ ಅರೇಬಿಯಾದಲ್ಲಿ ಬಂಧನಕ್ಕೊಳಗಾಗಿದ್ದ ಇಲ್ಲಿನ ಕೋಟೇಶ್ವರ ನಿವಾಸಿ ಹರೀಶ್ ಬಂಗೇರ ಒಂದು ವರ್ಷ ಏಳು ತಿಂಗಳ ಬಳಿಕ ಜೈಲಿನಿಂದ ಬಿಡುಗಡೆಯಾಗಿ ಆಗಸ್ಟ್ 18 ರಂದು ಹರೀಶ್ ಬಂಗೇರರವರು ಬೆಂಗಳೂರು ತಲುಪಲಿದ್ದಾರೆ ಎಂದು ಕೇಂದ್ರ ಕೃಷಿ ಹಾಗೂ ರೈತರ ಕಲ್ಯಾಣ ಸಚಿವೆ ಶೋಭಾ ಕರಂದ್ಲಾಜೆ ಅವರು ತಿಳಿಸಿದ್ದಾರೆ.

ಹರೀಶ್ ಬಂಗೇರರವರು ತಾಯ್ನಾಡಿಗೆ ಮರಳಲು ಪೂರೈಸಬೇಕಾಗಿದ್ದ ವಿಧಿ- ವಿಧಾನಗಳೆಲ್ಲವೂ ಪೂರ್ಣಗೊಂಡಿದ್ದು ಇದೇ ಆಗಸ್ಟ್ 17ರಂದು ಸೌದಿ ಅರೇಬಿಯಾದ ದಮಾಮ್ ವಿಮಾನ ನಿಲ್ದಾಣದಿಂದ ದೋಹಾ ಹೊರಟು ದೋಹಾ ಮೂಲಕ ಆಗಸ್ಟ್ 18 ರಂದು ಬೆಂಗಳೂರು ವಿಮಾನ ನಿಲ್ದಾಣಕ್ಕೆ ತಲುಪರಿದ್ದಾರೆ ಎಂದು ಸೌದಿ ಅರೇಬಿಯಾ ದ ರಿಯಾದ್ ನಲ್ಲಿರುವ ಭಾರತೀಯ ದೂತವಾಸದಿಂದ ಸಚಿವೆ ಶೋಭಾ ಕರಂದ್ಲಾಜೆ ಅವರಿಗೆ ಅಧಿಕೃತ ಮಾಹಿತಿ ಬಂದಿದೆ ಎಂದು ಸಚಿವರ ಕಚೇರಿ ಪ್ರಕಟಣೆ ತಿಳಿಸಿದೆ.

ಕೋಟೇಶ್ವರದ ಗೋಪಾಡಿ ಗ್ರಾಮದ ಹರೀಶ್‌ ಬಂಗೇರ ಅವರ ಹೆಸರಲ್ಲಿ ಫೇಸ್‌ ಬುಕ್‌ನಲ್ಲಿ ನಕಲಿ ಖಾತೆ ತೆರೆದು, ಸೌದಿ ಅರೇಬಿಯಾ ದೊರೆ ವಿರುದ್ಧ ಫೋಸ್ಟ್‌ ಮಾಡಲಾಗಿತ್ತು. ಈ ಪೋಸ್ಟ್‌ ಮಾಡಿದವರು ಬಂಗೇರ ಎಂದೇ ಭಾವಿಸಿದ್ದ ಸೌದಿ ಪೊಲೀಸರು ಬಂಗೇರ ಅವರನ್ನು ಬಂಧಿಸಿ ಜೈಲಿನಲ್ಲಿ ಇರಿಸಿದ್ದರು. ಈ ವೇಳೆ ಬಂಗೇರ ಪತ್ನಿ ಸುಮನ ಮಾಧ್ಯಮಗಳಿಗೆ‌ ಮಾಹಿತಿ‌ ನೀಡಿ ತನ್ನ ಪತಿಯನ್ನು ಷಡ್ಯಂತ್ರ ಮಾಡಿ ಈ‌ ಪ್ರಕರಣದಲ್ಲಿ‌ ಸಿಲುಕಿಸಲಾಗಿದೆ ಎಂದು ಆರೋಪಿಸಿದ್ದರಲ್ಲದೆ ನಿರಪರಾಧಿಯಾದ ಪತಿಯ ಬಿಡುಗಡೆಗೆ ಸಹಕರಿಸುವಂತೆ ಕಣ್ಣೀರಿಟ್ಟಿದ್ದರು.

ಹರೀಶ್ ಬಂಗೇರ ಅವರ ಹೆಸರಿನಲ್ಲಿ ನಕಲಿ ಫೇಸ್ ಬುಕ್ ಖಾತೆ ತೆಗೆದು ಅನಗತ್ಯ ಫೋಸ್ಟ್ ಮಾಡಿರುವ ಕುರಿತು ತನಿಖೆ ನಡೆಸುವಂತೆ ಅವರ ಪತ್ನಿ ನೀಡಿರುವ ದೂರನ್ನು ದಾಖಲಿಸಿಕೊಂಡು ತನಿಖೆ ನಡೆಸಿದ್ದ ಜಿಲ್ಲಾ ಪೊಲೀಸ್ ಇಲಾಖೆಯ ಸೈಬರ್ ಅಪರಾಧ ವಿಭಾಗ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂಡಬಿದರೆಯ ಇಬ್ಬರು ಆರೋಪಿಗಳನ್ನು ಬಂಧಿಸಿದ್ದರು.

ಪ್ರಕರಣದ ವಿಚಾರಣೆಯಲ್ಲಿ ಹರೀಶ್ ಬಂಗೇರ ಅವರ ನಕಲಿ ಖಾತೆ ತೆರೆದಿರುವ ಹಾಗೂ ಈ ಖಾತೆಗೂ ಬಂಗೇರ ಅವರಿಗೂ ಸಂಬಂಧ ಇಲ್ಲದೆ ಇರುವ ಅಂಶಗಳು ಬೆಳಕಿಗೆ ಬಂದಿತ್ತು. ತನಿಖೆಯಲ್ಲಿ ಕಂಡು ಬಂದಿದ್ದ ಅಂಶಗಳನ್ನು ರಾಯಭಾರಿ ಕಚೇರಿ ಮೂಲಕ ಸೌದಿ ಅರೇಬಿಯಾ ಸರ್ಕಾರಕ್ಕೂ ತಲುಪಿಸಲಾಗಿತ್ತು. ಈ ತನಿಖಾ ಅಂಶಗಳೇ ಬಂಗೇರ ಅವರ ಬಿಡುಗಡೆಯಲ್ಲಿ ಪ್ರಮುಖ ಪಾತ್ರ ವಹಿಸಿದೆ ಎನ್ನಲಾಗುತ್ತಿದೆ.

ಈ ಪ್ರಕರಣದ ಕುರಿತು ಅವರ ಕುಟುಂಬ ಸ್ನೇಹಿತ ಲೋಕೇಶ್ ಅಂಕದಕಟ್ಟೆ ಸಮಾನಮನಸ್ಕರೊಂದಿಗೆ ಬಿಡುಗಡೆಯ ಬಗ್ಗೆ ನಿರಂತರ ಪ್ರಯತ್ನವನ್ನು ಸಂಘಟಿಸಿದ್ದರು. ಸಾಮಾಜಿಕ ಕಾರ್ಯಕರ್ತ ಡಾ. ರವೀಂದ್ರ‌ನಾಥ್ ಶ್ಯಾನುಭಾಗ್, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಮಾಜಿ‌ ಸಚಿವ ಕೆ. ಜಯಪ್ರಕಾಶ್ ಹೆಗ್ಡೆ, ಶಾಸಕ ಹಾಲಾಡಿ‌ ಶ್ರೀನಿವಾಸ್‌ ಶೆಟ್ಟಿ‌ , ಹಿರಿಯ ಪೊಲೀಸ್ ಅಧಿಕಾರಿ ಕಮಲಪಂತ್ ಸೇರಿದಂತೆ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಹರೀಶ್ ಬಂಗೇರ ಬಿಡುಗಡೆಯ ಕುರಿತು ರಾಜ್ಯ ಹಾಗೂ ಕೇಂದ್ರ ಸರ್ಕಾರದ ಗಮನ ಸೆಳೆದಿದ್ದರು.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

4 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

4 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

4 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

4 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

4 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

4 days ago