Featured

ಉಡುಪಿ: ಸೌದಿಯಲ್ಲಿ ಬಂಧಿತರಾಗಿದ್ದ ಹರೀಶ್ ಬಂಗೇರಾ ಮರಳಿ ತಾಯ್ನಾಡಿಗೆ -Vishwanews24

ಉಡುಪಿ: ಸೌದಿಯಲ್ಲಿ ಬಂಧಿತರಾಗಿದ್ದ ಹರೀಶ್ ಬಂಗೇರಾ ಮರಳಿ ತಾಯ್ನಾಡಿಗೆ -Vishwanews24

ಫೇಸ್‌ಬುಕ್‌ನಲ್ಲಿ ಮೆಕ್ಕಾ ಹಾಗೂ ಸೌದಿ ದೊರೆಯ ಬಗ್ಗೆ ಅವಹೇಳನಕಾರಿಯಾಗಿ ಬರಹ ಪ್ರಕಟಿಸಿದ ಆರೋಪ..

ಉಡುಪಿ: ಫೇಸ್‌ಬುಕ್‌ನಲ್ಲಿ ಮೆಕ್ಕಾ ಹಾಗೂ ಸೌದಿ ದೊರೆಯ ಬಗ್ಗೆ ಅವಹೇಳನಕಾರಿಯಾಗಿ ಬರಹ ಪ್ರಕಟಿಸಿದ ಆರೋಪದಡಿಯಲ್ಲಿ ಸೌದಿ ಅರೇಬಿಯಾದಲ್ಲಿ ಬಂಧನಕ್ಕೊಳಗಾಗಿದ್ದ ಇಲ್ಲಿನ ಕೋಟೇಶ್ವರ ನಿವಾಸಿ ಹರೀಶ್ ಬಂಗೇರ ಒಂದು ವರ್ಷ ಏಳು ತಿಂಗಳ ಬಳಿಕ ಜೈಲಿನಿಂದ ಬಿಡುಗಡೆಯಾಗಿ ಆಗಸ್ಟ್ 18 ರಂದು ಹರೀಶ್ ಬಂಗೇರರವರು ಬೆಂಗಳೂರು ತಲುಪಲಿದ್ದಾರೆ ಎಂದು ಕೇಂದ್ರ ಕೃಷಿ ಹಾಗೂ ರೈತರ ಕಲ್ಯಾಣ ಸಚಿವೆ ಶೋಭಾ ಕರಂದ್ಲಾಜೆ ಅವರು ತಿಳಿಸಿದ್ದಾರೆ.

ಹರೀಶ್ ಬಂಗೇರರವರು ತಾಯ್ನಾಡಿಗೆ ಮರಳಲು ಪೂರೈಸಬೇಕಾಗಿದ್ದ ವಿಧಿ- ವಿಧಾನಗಳೆಲ್ಲವೂ ಪೂರ್ಣಗೊಂಡಿದ್ದು ಇದೇ ಆಗಸ್ಟ್ 17ರಂದು ಸೌದಿ ಅರೇಬಿಯಾದ ದಮಾಮ್ ವಿಮಾನ ನಿಲ್ದಾಣದಿಂದ ದೋಹಾ ಹೊರಟು ದೋಹಾ ಮೂಲಕ ಆಗಸ್ಟ್ 18 ರಂದು ಬೆಂಗಳೂರು ವಿಮಾನ ನಿಲ್ದಾಣಕ್ಕೆ ತಲುಪರಿದ್ದಾರೆ ಎಂದು ಸೌದಿ ಅರೇಬಿಯಾ ದ ರಿಯಾದ್ ನಲ್ಲಿರುವ ಭಾರತೀಯ ದೂತವಾಸದಿಂದ ಸಚಿವೆ ಶೋಭಾ ಕರಂದ್ಲಾಜೆ ಅವರಿಗೆ ಅಧಿಕೃತ ಮಾಹಿತಿ ಬಂದಿದೆ ಎಂದು ಸಚಿವರ ಕಚೇರಿ ಪ್ರಕಟಣೆ ತಿಳಿಸಿದೆ.

ಕೋಟೇಶ್ವರದ ಗೋಪಾಡಿ ಗ್ರಾಮದ ಹರೀಶ್‌ ಬಂಗೇರ ಅವರ ಹೆಸರಲ್ಲಿ ಫೇಸ್‌ ಬುಕ್‌ನಲ್ಲಿ ನಕಲಿ ಖಾತೆ ತೆರೆದು, ಸೌದಿ ಅರೇಬಿಯಾ ದೊರೆ ವಿರುದ್ಧ ಫೋಸ್ಟ್‌ ಮಾಡಲಾಗಿತ್ತು. ಈ ಪೋಸ್ಟ್‌ ಮಾಡಿದವರು ಬಂಗೇರ ಎಂದೇ ಭಾವಿಸಿದ್ದ ಸೌದಿ ಪೊಲೀಸರು ಬಂಗೇರ ಅವರನ್ನು ಬಂಧಿಸಿ ಜೈಲಿನಲ್ಲಿ ಇರಿಸಿದ್ದರು. ಈ ವೇಳೆ ಬಂಗೇರ ಪತ್ನಿ ಸುಮನ ಮಾಧ್ಯಮಗಳಿಗೆ‌ ಮಾಹಿತಿ‌ ನೀಡಿ ತನ್ನ ಪತಿಯನ್ನು ಷಡ್ಯಂತ್ರ ಮಾಡಿ ಈ‌ ಪ್ರಕರಣದಲ್ಲಿ‌ ಸಿಲುಕಿಸಲಾಗಿದೆ ಎಂದು ಆರೋಪಿಸಿದ್ದರಲ್ಲದೆ ನಿರಪರಾಧಿಯಾದ ಪತಿಯ ಬಿಡುಗಡೆಗೆ ಸಹಕರಿಸುವಂತೆ ಕಣ್ಣೀರಿಟ್ಟಿದ್ದರು.

ಹರೀಶ್ ಬಂಗೇರ ಅವರ ಹೆಸರಿನಲ್ಲಿ ನಕಲಿ ಫೇಸ್ ಬುಕ್ ಖಾತೆ ತೆಗೆದು ಅನಗತ್ಯ ಫೋಸ್ಟ್ ಮಾಡಿರುವ ಕುರಿತು ತನಿಖೆ ನಡೆಸುವಂತೆ ಅವರ ಪತ್ನಿ ನೀಡಿರುವ ದೂರನ್ನು ದಾಖಲಿಸಿಕೊಂಡು ತನಿಖೆ ನಡೆಸಿದ್ದ ಜಿಲ್ಲಾ ಪೊಲೀಸ್ ಇಲಾಖೆಯ ಸೈಬರ್ ಅಪರಾಧ ವಿಭಾಗ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂಡಬಿದರೆಯ ಇಬ್ಬರು ಆರೋಪಿಗಳನ್ನು ಬಂಧಿಸಿದ್ದರು.

ಪ್ರಕರಣದ ವಿಚಾರಣೆಯಲ್ಲಿ ಹರೀಶ್ ಬಂಗೇರ ಅವರ ನಕಲಿ ಖಾತೆ ತೆರೆದಿರುವ ಹಾಗೂ ಈ ಖಾತೆಗೂ ಬಂಗೇರ ಅವರಿಗೂ ಸಂಬಂಧ ಇಲ್ಲದೆ ಇರುವ ಅಂಶಗಳು ಬೆಳಕಿಗೆ ಬಂದಿತ್ತು. ತನಿಖೆಯಲ್ಲಿ ಕಂಡು ಬಂದಿದ್ದ ಅಂಶಗಳನ್ನು ರಾಯಭಾರಿ ಕಚೇರಿ ಮೂಲಕ ಸೌದಿ ಅರೇಬಿಯಾ ಸರ್ಕಾರಕ್ಕೂ ತಲುಪಿಸಲಾಗಿತ್ತು. ಈ ತನಿಖಾ ಅಂಶಗಳೇ ಬಂಗೇರ ಅವರ ಬಿಡುಗಡೆಯಲ್ಲಿ ಪ್ರಮುಖ ಪಾತ್ರ ವಹಿಸಿದೆ ಎನ್ನಲಾಗುತ್ತಿದೆ.

ಈ ಪ್ರಕರಣದ ಕುರಿತು ಅವರ ಕುಟುಂಬ ಸ್ನೇಹಿತ ಲೋಕೇಶ್ ಅಂಕದಕಟ್ಟೆ ಸಮಾನಮನಸ್ಕರೊಂದಿಗೆ ಬಿಡುಗಡೆಯ ಬಗ್ಗೆ ನಿರಂತರ ಪ್ರಯತ್ನವನ್ನು ಸಂಘಟಿಸಿದ್ದರು. ಸಾಮಾಜಿಕ ಕಾರ್ಯಕರ್ತ ಡಾ. ರವೀಂದ್ರ‌ನಾಥ್ ಶ್ಯಾನುಭಾಗ್, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಮಾಜಿ‌ ಸಚಿವ ಕೆ. ಜಯಪ್ರಕಾಶ್ ಹೆಗ್ಡೆ, ಶಾಸಕ ಹಾಲಾಡಿ‌ ಶ್ರೀನಿವಾಸ್‌ ಶೆಟ್ಟಿ‌ , ಹಿರಿಯ ಪೊಲೀಸ್ ಅಧಿಕಾರಿ ಕಮಲಪಂತ್ ಸೇರಿದಂತೆ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಹರೀಶ್ ಬಂಗೇರ ಬಿಡುಗಡೆಯ ಕುರಿತು ರಾಜ್ಯ ಹಾಗೂ ಕೇಂದ್ರ ಸರ್ಕಾರದ ಗಮನ ಸೆಳೆದಿದ್ದರು.

Vishwa News 24

Recent Posts

ಅರೆಂಜ್‌ ಅಲರ್ಟ್‌ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ -vishwanews24

ಅರೆಂಜ್‌ ಅಲರ್ಟ್‌ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ ಮಂಗಳೂರು :…

2 hours ago

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ – vishwanews24

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್​ ಬಳಕೆಯ ಆಧಾರದ ಮೇಲೆ ಜುಲೈ…

8 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ – vishwanews24

 ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…

8 hours ago

ಸತೀಶ್ ಕಡತನಮಲೆ 6 ವರ್ಷ ಬಿಜೆಪಿ ಪಕ್ಷದಿಂದ ಉಚ್ಛಾಟನೆ  – vishwanews24

ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾ‌ನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ  ಬೆಂಗಳೂರು: ರಾಜ್ಯ ರೈತ…

10 hours ago

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿ – vishwanews24

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…

10 hours ago

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ – vishwanews24

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…

10 hours ago