Featured

ಉಡುಪಿ ಸ್ಕಾರ್ಫ್ ವಿವಾದ : ಇದರ ಹಿಂದೆ ಕ್ಯಾಂಪಸ್ ಫ್ರಂಟ್ , ಎ ಎಸ್ ಯು ಐ ಯಂತಹ ಸಂಘಟನೆಗಳ ಷಡ್ಯಂತ್ರ ಇದೆ : ರಘುಪತಿ ಭಟ್  – Vishwanews24

ಡಿ. 30 ಕಾಪುವಿನಲ್ಲಿ SDPI ಮೂರು ಸ್ಥಾನ ಗೆದ್ದಿದೆ  , ಡಿ. 31 ಕ್ಕೆ ಮಕ್ಕಳು ಹಿಜಾಬ್ ಧರಿಸುವುದಕ್ಕೆ ಅವಕಾಶ ಕೇಳಿದ್ದಾರೆ ..

ಸರ್ಕಾರ ಅವಕಾಶ ಕೊಟ್ಟರೆ ನಮ್ಮ ವಿರೋಧ ಇಲ್ಲ..

ಉಡುಪಿ: ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಹಿಜಬ್ ವಿವಾದ ವಿಚಾರವಾಗಿ ಮಾತನಾಡಿದ ಶಾಸಕ ರಘುಪತಿ ಭಟ್ ,ಇದರ ಹಿಂದೆ ಕ್ಯಾಂಪಸ್ ಫ್ರಂಟ್ , ಎಎಸ್ ಯುಐ ಯಂತಹ ಸಂಘಟನೆಗಳ ಕುಮ್ಮಕ್ಕು ಇದೆ ಎಂದು ಆರೋಪಿಸಿದ್ದಾರೆ.

ಈಗಾಗಲೇ ಈ ಸಂಬಂಧ ಮುಸ್ಲಿಂ ಮುಖಂಡರ ಜೊತೆಗೆ ಎರಡು ಬಾರಿ ಮಾತುಕತೆ ನಡೆದಿದೆ. ಖಾಜಿಯವರು,ಮದ್ರಸಾ ಪ್ರಮುಖರು ಸಭೆಯಲ್ಲಿ ಭಾಗವಹಿಸಿದ್ದಾರೆ. ಉಡುಪಿ ಜಿಲ್ಲೆಯ ಮುಖಂಡರಿಗೆ ಈ ವಿಚಾರ ಮನವರಿಕೆ ಮಾಡಲಾಗಿದೆ ಎಂದರು.

ಯಾವುದೇ ಸರ್ಕಾರಿ ಶಾಲೆಯಲ್ಲಿ ಹಿಜಾಬ್ ಧರಿಸಿ ಪಾಠ ಹೇಳುವುದಕ್ಕೆ ಅವಕಾಶ ಇಲ್ಲ ಎಂದ ಶಾಸಕರು, ಆರು ಮಕ್ಕಳಿಗೆ ಹಿಜಾಬ್ ಧರಿಸುವುದಕ್ಕೆ ಅವಕಾಶ ನೀಡಲು ಆಗುತ್ತಾ? ಆಗ ಉಳಿದ ಧರ್ಮದವರು ಕೇಸರಿ ಶಾಲಿಗೆ ಅವಕಾಶ ಕೇಳುತ್ತಾರೆ. ಶಾಲೆ ಶಿಕ್ಷಣ ಕೇಂದ್ರವಾಗದೆ ಧಾರ್ಮಿಕ ಸಂಘರ್ಷದ ಕೇಂದ್ರ ವಾಗುತ್ತದೆ.ಸರ್ಕಾರ ಉನ್ನತ ಮಟ್ಟದ ಸಮಿತಿ ರಚಿಸಿದೆ.ಸರ್ಕಾರ ಅವಕಾಶ ಕೊಟ್ಟರೆ ನಮ್ಮ ವಿರೋಧ ಇಲ್ಲ ಎಂದು ಹೇಳಿದ್ದಾರೆ.

ಅವರಿಗೆ ಅನ್ ಲೈನ್ ಕ್ಲಾಸ್ ಗೆ ಶಾಲಾ ಆಡಳಿತ ಮಂಡಳಿ ಅವಕಾಶ ನೀಡಿದೆ ಎಂದ ಶಾಸಕರು, ಡಿಸೆಂಬರ್ 30 ಕಾಪುವಿನಲ್ಲಿ ಎಸ್ ಡಿ ಪಿ ಐ ಮೂರು ಸ್ಥಾನ ಗೆದ್ದಿದೆ. ಅದಾಗಿ ,ಡಿ. 31 ಕ್ಕೆ ಮಕ್ಕಳು ಹಿಜಾಬ್ ಧರಿಸುವುದಕ್ಕೆ ಅವಕಾಶ ಕೇಳಿದ್ದಾರೆ.ಅಲ್ಲಿಯವರೆಗೆ ಮಕ್ಕಳಿಗೆ ಯಾವುದೇ ಸಮಸ್ಯೆ ಇರಲಿಲ್ಲ. ಇದರ ಹಿಂದೆ ಕೆಲವು ಸಂಘ ಟನೆಗಳ ಷಡ್ಯಂತ್ರ ಇದೆ ಎಂದು ಹೇಳಿದ್ದಾರೆ.

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

24 hours ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

2 days ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

2 days ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

2 days ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

2 days ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

2 days ago