ಉಡುಪಿ: ವಸತಿ ಸಮುಚ್ಚಯದ ಬಳಿ ಸ್ಕೂಟರ್ ನಿಲ್ಲಿಸಿ ಡೆಲಿವರಿ ಬಾಯ್ ಪಾರ್ಸೆಲ್ ಕೊಟ್ಟು ಹಿಂತಿರುಗುವಷ್ಟರಲ್ಲಿ ಕಳ್ಳನೋರ್ವ ಸ್ಕೂಟರ್ ಸಮೇತ ಅದರಲ್ಲಿದ್ದ ಪಾರ್ಸೆಲ್ ವಸ್ತುಗಳನ್ನು ಹೊತ್ತೊಯ್ದ ಘಟನೆ ನಗರದ ವಿದ್ಯೋದಯ ಹೈಸ್ಕೂಲ್ ಬಳಿ ಜ.31ರ ಸೋಮವಾರ ನಡೆದಿದೆ.
ಅಂಬಲಪಾಡಿಯಲ್ಲಿರುವ ಇ-ಕಾರ್ಟ್ ಸಂಸ್ಥೆಯಲ್ಲಿ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದ ಕೊಳಲಗಿರಿಯ ಗಣೇಶ (21) ತಮ್ಮ ಹೋಂಡಾ ಡಿಯೋ ಸ್ಕೂಟರ್ ನ್ನು ವಿದ್ಯೋದಯ ಹೈಸ್ಕೂಲ್ ಬಳಿ ಇರುವ ಸಾಯಿರಾಧಾ ಗೋಕುಲಧಾಮ ಅಪಾರ್ಟ್ಮೆಂಟ್ನ ಎದುರುಗಡೆ ನಿಲ್ಲಿಸಿ ಪಾರ್ಸೆಲ್ ಕೊಟ್ಟು ವಾಪಾಸು10:05 ಗಂಟೆಗೆ ಬಂದು ನೋಡಿದಾಗ ಅದರಲ್ಲಿದ್ದ ಸೊತ್ತುಗಳ ಸಮೇತ ಸ್ಕೂಟರ್ ಕಾಣೆಯಾಗಿತ್ತು. ಎಲ್ಲಾ ಕಡೆ ಹುಡುಕಿ ಪತ್ತೆಯಾಗದೆ ಇದ್ದಾಗ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿದ್ದಾರೆ.
ಇದನ್ನೂ ಓದಿ :
ಸ್ಕೂಟರ್ ನಲ್ಲಿ Infinix Hot -10 play ಕಂಪೆನಿಯ ರೂ. 8,299/- ಮೌಲ್ಯದ ಮೊಬೈಲ್, Pigeon ಕಂಪೆನಿಯ ರೂ. 2,191/- ಮೌಲ್ಯದ ಮಿಕ್ಸರ್ ಗ್ರೈಂಡರ್ ಹಾಗೂ ಇನ್ನಿತರ ಸಣ್ಣಪುಟ್ಟ ಪಾರ್ಸೆಲ್ ಒಟ್ಟು ಮೌಲ್ಯ 20,000/- ಆಗಬಹುದು. 80,000 ಮೌಲ್ಯದ ಸ್ಕೂಟರ್ ಕಳ್ಳತನವಾಗಿದೆ ಎಂದು ದೂರು ನೀಡಿದ್ದಾರೆ.
ಇನ್ನು ಗಣೇಶ ಅವರ ಸ್ಕೂಟರ್ ನ್ನು ಕಳ್ಳನೋರ್ವ ಎಗರಿಸಿರುವ ದೃಶ್ಯಾವಾಳಿ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಇದನ್ನೂ ಓದಿ :
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…