ಉಡುಪಿ: ವಸತಿ ಸಮುಚ್ಚಯದ ಬಳಿ ಸ್ಕೂಟರ್ ನಿಲ್ಲಿಸಿ ಡೆಲಿವರಿ ಬಾಯ್ ಪಾರ್ಸೆಲ್ ಕೊಟ್ಟು ಹಿಂತಿರುಗುವಷ್ಟರಲ್ಲಿ ಕಳ್ಳನೋರ್ವ ಸ್ಕೂಟರ್ ಸಮೇತ ಅದರಲ್ಲಿದ್ದ ಪಾರ್ಸೆಲ್ ವಸ್ತುಗಳನ್ನು ಹೊತ್ತೊಯ್ದ ಘಟನೆ ನಗರದ ವಿದ್ಯೋದಯ ಹೈಸ್ಕೂಲ್ ಬಳಿ ಜ.31ರ ಸೋಮವಾರ ನಡೆದಿದೆ.
ಅಂಬಲಪಾಡಿಯಲ್ಲಿರುವ ಇ-ಕಾರ್ಟ್ ಸಂಸ್ಥೆಯಲ್ಲಿ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದ ಕೊಳಲಗಿರಿಯ ಗಣೇಶ (21) ತಮ್ಮ ಹೋಂಡಾ ಡಿಯೋ ಸ್ಕೂಟರ್ ನ್ನು ವಿದ್ಯೋದಯ ಹೈಸ್ಕೂಲ್ ಬಳಿ ಇರುವ ಸಾಯಿರಾಧಾ ಗೋಕುಲಧಾಮ ಅಪಾರ್ಟ್ಮೆಂಟ್ನ ಎದುರುಗಡೆ ನಿಲ್ಲಿಸಿ ಪಾರ್ಸೆಲ್ ಕೊಟ್ಟು ವಾಪಾಸು10:05 ಗಂಟೆಗೆ ಬಂದು ನೋಡಿದಾಗ ಅದರಲ್ಲಿದ್ದ ಸೊತ್ತುಗಳ ಸಮೇತ ಸ್ಕೂಟರ್ ಕಾಣೆಯಾಗಿತ್ತು. ಎಲ್ಲಾ ಕಡೆ ಹುಡುಕಿ ಪತ್ತೆಯಾಗದೆ ಇದ್ದಾಗ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿದ್ದಾರೆ.
ಇದನ್ನೂ ಓದಿ :
ಸ್ಕೂಟರ್ ನಲ್ಲಿ Infinix Hot -10 play ಕಂಪೆನಿಯ ರೂ. 8,299/- ಮೌಲ್ಯದ ಮೊಬೈಲ್, Pigeon ಕಂಪೆನಿಯ ರೂ. 2,191/- ಮೌಲ್ಯದ ಮಿಕ್ಸರ್ ಗ್ರೈಂಡರ್ ಹಾಗೂ ಇನ್ನಿತರ ಸಣ್ಣಪುಟ್ಟ ಪಾರ್ಸೆಲ್ ಒಟ್ಟು ಮೌಲ್ಯ 20,000/- ಆಗಬಹುದು. 80,000 ಮೌಲ್ಯದ ಸ್ಕೂಟರ್ ಕಳ್ಳತನವಾಗಿದೆ ಎಂದು ದೂರು ನೀಡಿದ್ದಾರೆ.
ಇನ್ನು ಗಣೇಶ ಅವರ ಸ್ಕೂಟರ್ ನ್ನು ಕಳ್ಳನೋರ್ವ ಎಗರಿಸಿರುವ ದೃಶ್ಯಾವಾಳಿ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಇದನ್ನೂ ಓದಿ :
ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ ಕಡಬ: ಚಿನ್ನಾಭರಣದ ತೂಕವನ್ನು ಕೃತಕವಾಗಿ ಹೆಚ್ಚಿಸಿ…
ಮಹಾರಾಷ್ಟ್ರ : ಮಳೆ ಅಬ್ಬರ - ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ…
ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ ಶಿವಮೊಗ್ಗ: ನವಜಾತ ಹೆಣ್ಣು ಶಿಶುವೊಂದನ್ನು ಬಸ್ ನಿಲ್ದಾಣದಲ್ಲಿ ಅನಾಥವಾಗಿ…
ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ ಪಡುಬಿದ್ರಿ: ಉಡುಪಿ…
ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇರಾ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…