ಉಡುಪಿ : ಸ್ಟಾಕ್ ಮಾರ್ಕೆಟ್ನಲ್ಲಿ ಹೆಚ್ಚಿನ ಲಾಭಾಂಶದ ಆಮಿಷ : ಲಕ್ಷಾಂತರ ರೂ. ವಂಚನೆ – vishwanews24
ಉಡುಪಿ : ಸ್ಟಾಕ್ ಮಾರ್ಕೆಟ್ನಲ್ಲಿ ಹೆಚ್ಚಿನ ಲಾಭಾಂಶದ ಆಮಿಷ : ಲಕ್ಷಾಂತರ ರೂ. ವಂಚನೆ
ಉಡುಪಿ: ಸ್ಟಾಕ್ ಮಾರ್ಕೆಟ್ನಲ್ಲಿ ಹೆಚ್ಚಿನ ಲಾಭಾಂಶದ ಆಮಿಷವೊಡ್ಡಿ, ನಿವೃತ್ತ ಉದ್ಯೋಗಿಯೊಬ್ಬರಿಗೆ ಲಕ್ಷಾಂತರ ರೂಪಾಯಿ ವಂಚಿಸಿದ ಘಟನೆ ಉಡುಪಿಯಲ್ಲಿ ಬೆಳಕಿಗೆ ಬಂದಿದೆ.
ಎಂಐಟಿ ಸಂಸ್ಥೆಯ ನಿವೃತ್ತ ಉದ್ಯೋಗಿ ಉಮಾನಂದ ಕೆ.ವಿ. ಅವರು ಈ ವಂಚನೆಗೆ ಒಳಗಾದವರು. ವಂಚಕನೊಬ್ಬ ವಾಟ್ಸಾಪ್ ಮೂಲಕ ಉಮಾನಂದ ಅವರನ್ನು ಸಂಪರ್ಕಿಸಿ, ಸ್ಟಾಕ್ ಮಾರ್ಕೆಟ್ನಲ್ಲಿ ಹೂಡಿಕೆ ಮಾಡಿದರೆ ಅಧಿಕ ಲಾಭಾಂಶ ಗಳಿಸಬಹುದು ಎಂದು ನಂಬಿಸಿದ್ದಾನೆ. ವಂಚಕರ ಮಾತುಗಳನ್ನು ನಂಬಿದ ಉಮಾನಂದ ಅವರು, ಕಳೆದ ನವೆಂಬರ್ 6 ರಿಂದ ಡಿಸೆಂಬರ್ 31ರ ಅವಧಿಯಲ್ಲಿ ಆರೋಪಿಗಳು ಸೂಚಿಸಿದ ವಿವಿಧ ಬ್ಯಾಂಕ್ ಖಾತೆಗಳಿಗೆ ಒಟ್ಟು 30,32,000 ರೂ. ಹಣವನ್ನು ಹೂಡಿಕೆ ಮಾಡಿದ್ದಾರೆ. ಆದರೆ, ಆರೋಪಿಗಳು ಹೂಡಿಕೆ ಮಾಡಿದ ಹಣವನ್ನು ಅಥವಾ ಯಾವುದೇ ಲಾಭಾಂಶವನ್ನು ಹಿಂತಿರುಗಿಸದೆ ವಂಚಿಸಿದ್ದಾರೆ. ಈ ಸಂಬಂಧ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
