ಉಡುಪಿ : ಹೆಚ್ಚಿನ ಲಾಭಾಂಶದ ಆಸೆ ತೋರಿಸಿ, ಶೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿಸುವ ಮೂಲಕ ಮೂಡುಬೆಳ್ಳೆಯ ಯುವಕನೋರ್ವ ಆನ್ಲೈನ್ನಲ್ಲಿ 49ಲಕ್ಷ ರೂ. ಹಣವನ್ನು ಕಳೆದುಕೊಂಡಿದ್ದಾರೆ.
ಮೂಡುಬೆಳ್ಳೆಯ ಫ್ರಾನ್ಸಿಸ್ ಕಾಸ್ತಲಿನೋ ಇವರ ಮಗನ ಮೊಬೈಲ್ ನಂಬರ್ನ್ನು ಯಾರೋ ಅಪರಿಚತರು ಸ್ಟಾಕ್ಮಾರ್ಕೆಟ್ ನೇವಿಗೇಷನ್ ಎಂಬ ವಾಟ್ಸಪ್ ಗ್ರೂಪ್ಗೆ ಸೇರಿಸಿದ್ದು, ಇದರ ಮೂಲಕ ಶೇರು ಮಾರುಕಟ್ಟೆ ಹಾಗೂ ಅದರಿಂದ ಸಿಗುವ ಲಾಭಾಂಶಗಳ ಬಗ್ಗೆ ಆಸೆ ತೋರಿಸಿ ಹಣವನ್ನು ಹೂಡಿಕೆ ಮಾಡುವಂತೆ ಅಮಿಷ ಒಡ್ಡಿದ್ದರು.
ಅವರ ಬಲೆಗೆ ಬಿದ್ದ ಯುವಕ, ಅಪರಿಚಿತರು ಸೂಚಿಸಿದ ಬ್ಯಾಂಕ್ ಖಾತೆಗಳಿಗೆ ಕಳೆದ ಡಿ.30ರಿಂದ ತಂದೆಯ 17 ಲಕ್ಷ ರೂ., ತಾಯಿಯ 10.50 ಲಕ್ಷ ರೂ. ತಮ್ಮದೇ ಖಾತೆಯಿಂದ 21.50 ಲಕ್ಷ ರೂ.ಗಳನ್ನು ವಿವಿಧ ಬ್ಯಾಂಕ್ ಖಾತೆಗಳಿಗೆ ವರ್ಗಾವಣೆ ಮಾಡಿದ್ದು, ಒಟ್ಟಾರೆಯಾಗಿ 49 ಲಕ್ಷ ರೂ.ಗಳನ್ನು ಹೂಡಿಕೆ ಮಾಡಿದ್ದರು.
ಆದರೆ ನಂತರ ಹೂಡಿಕೆ ಮಾಡಿದ ಹಣವನ್ನು ವಾಪಾಸು ಪಡೆಯಲು ಪ್ರಯತ್ನಿಸಿದಾಗ ಪುನಹ ಹಣ ಹೂಡಿಕೆ ಮಾಡುವಂತೆ ಒತ್ತಾಯಿಸಲಾಗಿತ್ತು. ಆಗ ಹೂಡಿಕೆ ಮಾಡಿದ ಹಣ ಹಾಗೂ ಲಾಭಾಂಶಕ್ಕಾಗಿ ಕೇಳಿದಾಗ ಹಣ ನೀಡದೇ ನಂಬಿಸಿ, ವಂಚಿಸಿ ದ್ದಾಗಿ, ಮೋಸದಿಂದ ನಷ್ಟ ಉಂಟು ಮಾಡಿರುವುದಾಗಿ ಉಡುಪಿ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…