Featured

ಉಡುಪಿ: ಸ್ಟಾಕ್ ಮಾರ್ಕೆಟ್ ಹೂಡಿಕೆ ನೆಪ ; ವೃದ್ಧರಿಗೆ 49 ಲಕ್ಷ ರೂ. ವಂಚನೆ – vishwanews24

ಉಡುಪಿ: ಸ್ಟಾಕ್ ಮಾರ್ಕೆಟ್ ಹೂಡಿಕೆ ನೆಪ ; 49 ಲಕ್ಷ ರೂ. ವಂಚನೆ

ಉಡುಪಿ, : ಸ್ಟಾಕ್ ಮಾರ್ಕೆಟ್ ನಲ್ಲಿ ಹೂಡಿಕೆ ಮಾಡಿದಲ್ಲಿ ಅತ್ಯಧಿಕ ಲಾಭ ಗಳಿಸಬಹುದು ಎಂದು ನಂಬಿಸಿ ವೃದ್ಧರೊಬ್ಬರಿಗೆ 49 ಲಕ್ಷ ರೂ. ವಂಚನೆ ಮಾಡಿದ ಬಗ್ಗೆ ಉಡುಪಿ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಉಡುಪಿಯ ಮೂಡುಬೆಳ್ಳೆ ನಿವಾಸಿ ಫ್ರಾನ್ಸಿಸ್ ಕ್ಯಾಸ್ಟಲಿನೋ (72) ಆನ್‌ಲೈನ್ ಸ್ಟಾಕ್ ಮಾರ್ಕೆಟ್ ಹೆಸರಲ್ಲಿ ವಂಚನೆಗೊಳಗಾದ ವೃದ್ಧ.

ವಂಚಕರು ಕ್ಯಾಸ್ಟೆಲಿನೊ ಅವರ ಮಗನ ಮೊಬೈಲ್ ಸಂಖ್ಯೆಯನ್ನು ಬಳಸಿಕೊಂಡು “ಸ್ಟಾಕ್ ಮಾರ್ಕೆಟ್ ನ್ಯಾವಿಗೇಶನ್” ಹೆಸರಿನ ವಾಟ್ಸಾಪ್ ಗುಂಪಿಗೆ ಸೇರಿಸಿದ್ದಾರೆ. ಗುಂಪಿನ ಸದಸ್ಯರು ಷೇರು ಮಾರುಕಟ್ಟೆ ಹೂಡಿಕೆಗಳ ಬಗ್ಗೆ ಆಕರ್ಷಕ ಮಾಹಿತಿಯನ್ನು ಒದಗಿಸುವುದರೊಂದಿಗೆ, ಗಮನಾರ್ಹ ಆದಾಯ ನೀಡುವುದಾಗಿ ಭರವಸೆ ನೀಡಿದರು. ಕ್ಯಾಸ್ಟೆಲಿನೊ ಮತ್ತು ಅವನ ಮಗನ ವಿಶ್ವಾಸವನ್ನು ಗಳಿಸಿದ ವಂಚಕರು ಸ್ಟಾಕ್ ಮಾರ್ಕೆಟ್ ನಲ್ಲಿ ದೊಡ್ಡ ಮೊತ್ತದ ಹಣವನ್ನು ಹೂಡಿಕೆ ಮಾಡುವಂತೆ ಸಲಹೆ ನೀಡುತ್ತಾರೆ.

ವಂಚಕರ ಸಲಹೆಯಂತೆ ಕ್ಯಾಸ್ಟೆಲಿನೊ ಅವರ ಖಾತೆಯಿಂದ 12 ಲಕ್ಷ ರೂ., ಅವರ ಪತ್ನಿ 10.5 ಲಕ್ಷ ರೂ., ಮತ್ತು ಅವರ ಮಗ 21.5 ಲಕ್ಷ ರೂ. ಹಣವನ್ನು ವಂಚಕರು ಸೂಚಿಸಿದ ಬ್ಯಾಂಕ್ ಖಾತೆಗಳಿಗೆ 2024ರ ಡಿಸೆಂಬರ್ 30 ರಂದು ವರ್ಗಾಯಿಸಿದ್ದಾರೆ. ಒಟ್ಟಾರೆಯಾಗಿ ಕ್ಯಾಸ್ಟೆಲಿನೊ ಅವರ ಕುಟುಂಬವು 49 ಲಕ್ಷ ರೂ. ಹಣವನ್ನು ಹೂಡಿಕೆ ಮಾಡಿರುತ್ತದೆ.

ಬಳಿಕ ದೂರುದಾರರು ರಿಟರ್ನ್ಸ್ ಅಥವಾ ಹೂಡಿಕೆ ಮೊತ್ತವನ್ನು ಹಿಂಪಡೆಯಲು ಪ್ರಯತ್ನಿಸಿದ್ದಾರೆ. ಈ ವೇಳೆ ವಂಚಕರು ಮತ್ತಷ್ಟು ಹಣವನ್ನು ಹೂಡಿಕೆ ಮಾಡುವಂತೆ ಒತ್ತಾಯಿಸಿದ್ದಾರೆ. ದೂರುದಾರರು ಹಲವು ಬಾರಿ ಹೂಡಿಕೆ ಹಣವನ್ನು ಹಿಂಪಡೆಯಲು ಯತ್ನಿಸಿದರೂ, ರಿಟರ್ನ್ಸ್ ಅಥವಾ ಅಸಲು ಮೊತ್ತವನ್ನು ಹಿಂಪಡೆಯಲು ಸಾಧ್ಯವಾಗಲಿಲ್ಲ.

ಇನ್ನು ಈ ಬಗ್ಗೆ ಉಡುಪಿ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Vishwa News 24

Recent Posts

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

23 hours ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

23 hours ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

24 hours ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

1 day ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

1 day ago

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ – vishwanews24

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…

1 day ago