ಉಡುಪಿ: ಸ್ವಂತ ಮನೆ ಇಲ್ಲ ಎಂಬ ಕಾರಣಕ್ಕೆ ನೊಂದು ಮಹಿಳೆಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮಣಿಪಾಲದ ಫ್ಲ್ಯಾಟ್ವೊಂದರಲ್ಲಿ ಮನೆ ಕೆಲಸ ಮಾಡುತ್ತಿದ್ದ ಕೊಡಗು ಮೂಲದ ಗೌರಿ (70) ಆತ್ಮಹತ್ಯೆ ಮಾಡಿಕೊಂಡವರು. ಇವರು ಫೆ.13ರ ಸಂಜೆ ಸುಮಾರು 4 ಗಂಟೆಗೆ ತಾವು ಕೆಲಸ ಮಾಡುವ ಮನೆಯಿಂದ ಹೋಗಿ ಫೆ.14ರಂದು ಬೆಳಗ್ಗೆ 8.30ರ ಸುಮಾರಿಗೆ ಮನೆಗೆ ಬಂದಿದ್ದರು.
ಮೃತರ ನಾಲ್ಕು ಮಕ್ಕಳಲ್ಲಿ ಮೊದಲನೇ ಮಗ ಮತ್ತು ಎರಡನೇ ಮಗಳು ರಾಜಮ್ಮ ಹಾಗೂ ಅವರ ಗಂಡ ಈಗಾಗಲೇ ಮರಣ ಹೊಂದಿದ್ದು, ಮೃತರಿಗೆ ಯಾವುದೇ ಸ್ವಂತ ಮನೆ ಇಲ್ಲದ ಕಾರಣ ಜೀವನದಲ್ಲಿ ಜುಗುಪ್ಸೆಗೊಂಡಿದ್ದರು. ಫೆ. 14ರಂದು ಅವರು ಕೆಲಸ ಮಾಡುವ ಮನೆಯ ಮೇಲಿನ ಟೇರಸ್ನ ಕಬ್ಬಣದ ಕೊಂಡಿಗೆ ನೈಲನ್ ಸೀರೆ ಕಟ್ಟಿ ಕುತ್ತಿಗೆಗೆ ನೇಣು ಬಿಗಿದುಕೊಂಡಿದ್ದು ಅನಂತರ ಸೀರೆ ತುಂಡಾಗಿ ಕಟ್ಟಡದಿಂದ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ. ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…