Featured

ಉಡುಪಿ : ಸ್ವಚ್ಛತಾ ಕಾರ್ಯಕರ್ತನ ಮೇಲೆ ಇಬ್ಬರು ಯುವತಿಯರು ಸೇರಿ ಮೂವರಿಂದ ಹಲ್ಲೆ – Vishwanews24

ಉಡುಪಿ : ಸ್ವಚ್ಛತಾ ಕಾರ್ಯಕರ್ತನ ಮೇಲೆ ಇಬ್ಬರು ಯುವತಿಯರು ಸೇರಿ ಮೂವರಿಂದ ಹಲ್ಲೆ – Vishwanews24

ಉಡುಪಿ, : ಸ್ವಚ್ಛತಾ ಕಾರ್ಮಿಕರೊಬ್ಬರ ಮೇಲೆ ಇಬ್ಬರು ಯುವತಿಯರು ಸೇರಿದಂತೆ ಮೂವರು ಹಲ್ಲೆ ನಡೆಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿದ ಘಟನೆ ಉಡುಪಿಯ ಅಂಬಲಪಾಡಿಯಲ್ಲಿ ನಡೆದಿದೆ.

ಅಂಬಲಪಾಡಿಯ ಅಪಾರ್ಟ್‌ಮೆಂಟ್‌ ಬಳಿ ಈ ಘಟನೆ ನಡೆದಿದೆ.

ಸ್ವಚ್ಛತಾ ಕಾರ್ಯಕರ್ತ ಸುರೇಶ್‌ ಅವರು ನೀಡಿದ ದೂರಿನ ಪ್ರಕಾರ, “ಸುರೇಶ್‌ ಅವರು ಉಡುಪಿ ನಗರಸಭೆಯ ವ್ಯಾಪ್ತಿಯ ಸ್ವಚ್ಛತಾ ಕೆಲಸ ಮಾಡುತ್ತಿದ್ದು, ಎಪ್ರಿಲ್‌ 22ರಂದು ಅಂಬಲಪಾಡಿಯ ಅಪಾರ್ಟ್ಮೆಂಟ್‌ವೊಂದರ ಬಳಿ ಕಸ ವಿಲೇವಾರಿ ವಾಹನದ ಮೂಲಕ ತೆರಳುತ್ತಿದ್ದರು. ಈ ವೇಳೆ ಬೈಕ್‌‌ನಲ್ಲಿ ಬಂದ ಮೂವರು ( ಇಬ್ಬರು ಯುವತಿಯರು ಹಾಗೂ ಓರ್ವ ಯುವಕ) ಕಸ ವಿಲೇವಾರಿ ವಾಹನವನ್ನು ತಡೆದು ನಿಲ್ಲಿಸಿ ಸುರೇಶ್‌ ಅವರ ಮೇಲೆ ಹಲ್ಲೆ ನಡೆಸಿದ್ದು ಅಲ್ಲದೇ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ” ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಸುರೇಶ್‌ ಅವರ ದೂರಿನ ಆಧಾರದ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮಾಜಿ ಸಚಿವ ಆರ್ ವಿ ದೇಶಪಾಂಡೆಗೆ ಕೊರೋನಾ ಪಾಸಿಟಿವ್ -Vishwanews24

Vishwa News 24

Recent Posts

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ – vishwanews24

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್…

3 hours ago

ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು ಹೊರತು ಕೇಸರಿ ಶಾಲಿಗೆ ಅವಕಾಶ ಇಲ್ಲ : ಸಿಎಂ ಸ್ಪಷ್ಟನೆ – vishwanews24

ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…

5 hours ago

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ತಮಿಳುನಾಡು ಸರ್ಕಾರ ಆದೇಶ – vishwanews24

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ :  ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…

5 hours ago

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ – vishwanews24

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…

5 hours ago

ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ – vishwanews24

ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ ನವದೆಹಲಿ: ದೇಶೀಯ ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆಯನ್ನು ನಿಯಂತ್ರಿಸಲು ಮತ್ತು…

5 hours ago

ಹಿಜಬ್‌ಗೆ ಅವಕಾಶ :ಪ್ರಣಾಳಿಕೆಯಲ್ಲಿ ಸಮಾನತೆಯ ಮಾತು ಕೊಟ್ಟಿದ್ವಿ , ಯಾವುದೇ ಕಾರಣಕ್ಕೂ ಆದೇಶ ವಾಪಸ್ ಪಡೆಯಲ್ಲ : ಮಧು ಬಂಗಾರಪ್ಪ – vishwanews24

ಹಿಜಬ್ ಬಗ್ಗೆ ಮಾತಾಡುವ ಬಿಜೆಪಿಯವರು  ನೀಟ್ ಬಗ್ಗೆ ಮಾತಾಡಲಿ : ಮಧು ಬಂಗಾರಪ್ಪ ಆಕ್ರೋಶ ಬೆಂಗಳೂರು: ಹಿಜಬ್ ಬಗ್ಗೆ ಮಾತಾಡುವ…

5 hours ago