ಉಡುಪಿ: ಸ್ವರ್ಗ ಲೋಕಕ್ಕೆ ಹೋಗಬೇಕಾದರೆ ಸಂಸ್ಕೃತ ಕಲಿಯಬೇಕು ಎಂದು ಪರ್ಯಾಯ ಪುತ್ತಿಗೆ ಸುಗುಣೇಂದ್ರ ತೀರ್ಥ ಸ್ವಾಮೀಜಿ ಹೇಳಿದ್ದು ಈಗ ಚರ್ಚೆಗೆ ಗ್ರಾಸವಾಗಿದೆ.
ಶ್ರೀ ಕೃಷ್ಣ ಮಠದಲ್ಲಿ ಜನ್ಮಾಷ್ಟಮಿ ಮಾಸೋತ್ಸವ ಸಮಾರೋಪದ ವೇಳೆ ಸಂಸ್ಕೃತ ಭಾಷೆಯಲ್ಲಿ ಮಾತನಾಡಿದ ಅವರು, ಸಂಸ್ಕೃತ ಪವಿತ್ರ ಶ್ರೇಷ್ಠ ವಿಶ್ವಭಾಷೆಯಾಗಿದೆ. ದೇವರ ಎಲ್ಲಾ ಶ್ಲೋಕಗಳು, ಪೂಜೆಗಳು ಸಂಸ್ಕೃತ ಭಾಷೆಯಲ್ಲಿ ನಡೆಯುತ್ತದೆ. ಒಂದು ತಿಂಗಳುಗಳ ಕಾಲ ನಡೆದ ಶ್ರೀ ಕೃಷ್ಣ ಮಹಾಸ್ವೋತ್ಸವವನ್ನು ದೇವರಿಗೆ ಅರ್ಪಣೆ ಮಾಡಿದ್ದೇವೆ. ಶ್ರೀಕೃಷ್ಣನ ಮಹೋತ್ಸವದ ಸಂದರ್ಭವಾದ ಕಾರಣ ನಾನು ದೇವ ಭಾಷೆ ಸಂಸ್ಕೃತದಲ್ಲಿ ಮಾತನಾಡಿದ್ದೇನೆ ಎಂದು ಅವರು ತಿಳಿಸಿದ್ದಾರೆ.
ಎಲ್ಲಾ ಭಾಷೆಗಳ ತಾಯಿ ಸಂಸ್ಕೃತ. ತುಳು, ಕನ್ನಡ, ಮಲಯಾಳಂ, ಹಿಂದಿ, ತಮಿಳು ಹಾಗೂ ತೆಲುಗು ಭಾಷೆಗಳು ಹುಟ್ಟಿಕೊಂಡಿರುವುದೇ ಸಂಸ್ಕೃತದಿಂದ. ಕೇವಲ ಭಾರತೀಯ ಭಾಷೆಗಳಿಗೆ ಮಾತ್ರ ಸಂಸ್ಕೃತ ಮೂಲವಲ್ಲ. ಆಂಗ್ಲ ಭಾಷೆಗಳಿಗೂ ಮೂಲ ಸಂಸ್ಕೃತವೇ ಆಗಿದೆ. ಪಿತಾದಿಂದ ಫಾದರ್, ಮಾತಾದಿಂದ ಮದರ್ ಹುಟ್ಟಿಕೊಂಡಿದೆ. ಸಮಗ್ರವು ಸಂಸ್ಕೃತ ಭಾಷೆಯಿಂದ ಹುಟ್ಟಿಕೊಂಡಿದೆ ಎಂದು ಅವರು ಪ್ರತಿಪಾದಿಸಿದ್ದಾರೆ.
ಸಂಸ್ಕೃತ ಭಾಷೆಯನ್ನು ಹೊರತುಪಡಿಸಿ ಇತರ ಭಾಷೆಗಳು ಪ್ರಾದೇಶಿಕ ಭಾಷೆಗಳಾಗಿವೆ. ಕರ್ನಾಟಕದಲ್ಲಿ ಕನ್ನಡ, ದೇಶದಲ್ಲಿ ಹಿಂದಿ, ವಿದೇಶದಲ್ಲಿ ಇಂಗ್ಲಿಷ್ ಅಂತಾರಾಷ್ಟ್ರೀಯ ಭಾಷೆ ಹಾಗೂ ಸಂಸ್ಕೃತ ಅಂತರ್ಲೋಕದ ಭಾಷೆ. ದೇವಲೋಕದಲ್ಲಿ ವ್ಯವಹರಿಸುವುದು ಸಂಸ್ಕೃತ ಭಾಷೆಯಲ್ಲಿ. ಸಂಸ್ಕೃತ ದೇವ ಭಾಷೆ. ಸಂಸ್ಕೃತ ಭಾಷೆ ತಿಳಿಯದಿದ್ದರೆ ದೇವಲೋಕಕ್ಕೆ ವೀಸಾ ಸಿಗುವುದಿಲ್ಲ ಎಂದು ಅವರು ಹೇಳಿದ್ದಾರೆ. ಸ್ವಾಮೀಜಿಗಳ ಭಾಷಣದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪರ ವಿರೋಧ ಚರ್ಚೆಗಳಾಗುತ್ತಿವೆ.
ಆರ್ಎಸ್ಎಸ್ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…
ಬೆಳ್ತಂಗಡಿ: ಎಸ್ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…
ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…
ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ ಚೆನ್ನೈ: ಸಿಎಂ ಸಿ.…
ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ ಉಡುಪಿ :…
"ಹಿಂದೂ ಧರ್ಮವೂ ನೋಂದಣಿಯಾಗಿಲ್ಲ ಎಂಬ ಮೋಹನ್ ಭಾಗವತ್ ಅವರ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಪ್ರತಿಕ್ರಿಯೆ ಬೆಂಗಳೂರು: ಆರೆಸ್ಸೆಸ್ ಮುಖ್ಯಸ್ಥ ಮೋಹನ್…