ಉಡುಪಿ, : ರಾಜ್ಯದಲ್ಲಿ ಸ್ವಾತಂತ್ರದ ಅಮೃತ ಮಹೋತ್ರವ ಪ್ರಯುಕ್ತ ಕನ್ನಡ ಮತ್ತು ಸಂಸ್ಕೃತಿ ಇಲಾಖೆವತಿಯಿಂದ ವರ್ಷ ಪೂರ್ತಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದ್ದು, ಇದಕ್ಕಾಗಿ ಕಾರ್ಯಕ್ರಮಗಳ ಪಟ್ಟಿ ರೂಪಿಸುತ್ತಿದ್ದು, ಇದರಲ್ಲಿ ಕೋಟ ಶಿವರಾಮ ಕಾರಂತ ಥೀಂ ಪಾರ್ಕ್ ನಲ್ಲಿ ಸಹ ರಾಜ್ಯಮಟ್ಟದ ಕಾರ್ಯಕ್ರಮ ಆಯೋಜಿಸಲಾಗುವುದು ಎಂದು ರಾಜ್ಯದ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನೀಲ್ ಕುಮಾರ್ ಹೇಳಿದರು.
ಅವರು ಇಂದು ಕೋಟದಲ್ಲಿನ ಶಿವರಾಮ ಕಾರಂತ ಥೀಂ ಪಾರ್ಕ್ ಗೆ ಭೇಟಿ ನೀಡಿ,ಶಿವರಾಮ ಕಾರಂತರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಮಾತನಾಡಿದರು.
ಶಿವರಾಮ ಕಾರಂತರದ್ದು ಚಲನಶೀಲ ವ್ಯಕ್ತಿತ್ವ, ಸಾಹಿತ್ಯದ ಎಲ್ಲಾ ಕ್ಷೇತ್ರಗಳಲ್ಲಿ ಅವರು ನಾಡಿಗೆ ನೀಡಿರುವ ಕೊಡುಗೆ ಅಪಾರವಾದುದು ಅವರ ವ್ಯಕ್ತಿತ್ವ, ಚಿಂತನೆ,ಜೀವನ ಚೆರಿತ್ರೆ ಮುಂದಿನ ಪೀಳಿಗೆಗೆ ಸಾರುವ ಉದ್ದೇಶದಿಂದ ನಿರ್ಮಾಣಗೊಂಡಿರುವ, ಥೀಂ ಪಾರ್ಕ್ ನ ಅಭಿವೃದ್ದಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆವತಿಯಿಂದ ಎಲ್ಲಾ ರೀತಿಯ ನೆರವು ನೀಡಲಾಗುವುದು ಎಂದು ಸಚಿವ ಸುನೀಲ್ ಕುಮಾರ್ ಹೇಳಿದರು.
ಕಾರ್ಯಕ್ರಮದಲ್ಲಿ ರಾಜ್ಯದ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ, ರಾಜ್ಯ ಆಹಾರ ನಿಗಮದ ಉಪಾಧ್ಯಕ್ಷ ಕಿರಣ್ ಕೊಡ್ಗಿ, ಕೋಟತಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ಅಶ್ವಿನಿ,ಕೋಟ ಗ್ರಾಮ ಪಂಚಾಯತ್ ಅಧ್ಯಕ್ಷ ಅಜಿತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕುಮಾರ್ ಬೆಕ್ಕೇರಿ, ಕಾರಂತ ಥೀಂ ಪಾರ್ಕ್ ನ ವಿಶೇಷ ಕರ್ತವ್ಯಾಧಿಕಾರಿ ಪೂರ್ಣಿಮಾ ಮತ್ತಿತರರು ಉಪಸ್ಥಿತರಿದ್ದರು.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…