ಉಡುಪಿ

ಸಾವರ್ಕರ್ ಬರುತ್ತಿದ್ದಾರೆ ಉಡುಪಿಗೆ : ಕೂರ್ಮ ಬಳಗದ ವತಿಯಿಂದ ವೀರ ಸಾವರ್ಕರ್ ಕುರಿತಾಗಿ ವಿಚಾರಗೋಷ್ಠಿ- Vishwanews24

ಸಾವರ್ಕರ್ ಬರುತ್ತಿದ್ದಾರೆ ಉಡುಪಿಗೆ : ಕೂರ್ಮ ಬಳಗದ ವತಿಯಿಂದ ವೀರ ಸಾವರ್ಕರ್ ಕುರಿತಾಗಿ ವಿಚಾರಗೋಷ್ಠಿ- Vishwanews24

ಉಡುಪಿ: ಸ್ವಾಮಿ ವಿವೇಕಾನಂದರ ಜನ್ಮ ಜಯಂತಿ ಪ್ರಯುಕ್ತ ಕೂರ್ಮಾ ಬಳಗದ ವತಿಯಿಂದ ಸ್ವಾತಂತ್ರ್ಯ ವೀರ ಸಾವರ್ಕರ್ ಅವರ ಸಾಹಿತ್ಯಗಳ ಕುರಿತಾಗಿ ವಿಚಾರಗೋಷ್ಠಿ ಜನವರಿ 12 ರಂದು ನಗರದ ಪುರಭವನದಲ್ಲಿ ನಡೆಯಲಿದೆ ಎಂದು ಸಂಚಾಲಕರಾದ ಶ್ರೀಕಾಂತ್‌ ಶೆಟ್ಟಿ ಹೇಳಿದರು.

ಅವರು ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ರಾಷ್ಟ್ರೀಯ ವಿಚಾರಧಾರೆಗೆ ಪೂರಕವಾದ ಸಾಹಿತ್ಯ ಚಟುವಟಿಕೆಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಕುರ್ಮಾ ಬಳಗ ವಿಚಾರಗೋಷ್ಠಿಗಳನ್ನು ಆಯೋಜಿಸುತ್ತಾ ಬಂದಿರುತ್ತದೆ. Cultural unity recreation and motivational affiliates ಎನ್ನುವುದು ಈ ಹೆಸರಿನ ಹೂರಣವಾಗಿದೆ.

ಸಾಂಸ್ಕೃತಿಕ ವಿಭಿನ್ನತೆಯಿಂದ ವಿಶ್ವದ ಗಮನ ಸೆಳೆದಿರುವ ಭಾರತ, ಸ್ವಾತಂತ್ರ್ಯ ಪಡೆದ ಬಳಿಕ ನಮ್ಮ ನವ ನಾಯಕರ ಪ್ರಮಾದಗಳಿಂದಾಗಿ ಪಾಶ್ಚಾತ್ಯ ನೀತಿಗಳನ್ನೇ ಎರವಲು ಪಡೆದುಕೊಂಡು, ವಸಾಹತುಶಾಹಿಗಳು ಹಾಕಿದ ಅಡಿಗಲ್ಲಿನ ಮೇಲೆ ಕೃತಕವಾಗಿ ಕಟ್ಟಲ್ಪಟ್ಟಿದೆ. ಈ ದೇಶದ ನಿಜವಾದ ಅಂತಸತ್ವವಾಗಿರುವ ಸಾಂಸ್ಕೃತಿಕ ರಾಷ್ಟ್ರೀಯತೆಯನ್ನು ಮರು ಸ್ಥಾಪಿಸಿದರೆ ದೇಶ ಈಗ ಎದುರಿಸುತ್ತಿರುವ ಅನೇಕ ಸವಾಲುಗಳಿಗೆ ಪರಿಹಾರ ಲಭ್ಯವಿದೆ. ಈ ಹಿನ್ನೆಲೆಯಲ್ಲಿ ಶ್ರೀ ಅರವಿಂದೋ ವಿವೇಕಾನಂದ ಮತ್ತು ಸಾವರ್ಕರ್ ಅವರು ಪ್ರತಿಪಾದಿಸಿದ ರಾಷ್ಟ್ರೀಯತೆಯ ಪರಿಕಲ್ಪನೆಯ ಬಗ್ಗೆ ಚಿಂತನ ಮಂಥನ ನಡೆಯಬೇಕಿದೆ.

ದಿನಾಂಕ 12 ಜನವರಿ ಬುಧವಾರದಂದು ಸ್ವಾಮಿ ವಿವೇಕಾನಂದರ ಜನ್ಮ ಜಯಂತಿ ದೇಶಾದ್ಯಂತ ಆಚರಿಸಲಾಗುತ್ತಿದೆ. ಆ ಪ್ರಯುಕ್ತ ಉಡುಪಿಯಲ್ಲಿ ನಮ್ಮ ಸಂಸ್ಥೆಯು ಸ್ವಾತಂತ್ರ್ಯ ವೀರ ಸಾವರ್ಕರ್ ಅವರ ಸಾಹಿತ್ಯಗಳ ಕುರಿತಾಗಿ ವಿಚಾರಗೋಷ್ಠಿ ಆಯೋಜಿಸಿದ್ದು, ಈ ಕಾರ್ಯಕ್ರಮವು ದಿನಾಂಕ 12 ಜನವರಿ 2022 3:00 ಗಂಟೆಗೆ ಸರಿಯಾಗಿ ಉಡುಪಿಯ ಪುರಭವನದಲ್ಲಿ ನಡೆಯಲಿದೆ.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ವೀರ ಸಾವರ್ಕರ್ ಅವರ ಮೊಮ್ಮಗ, ಮೃತ್ಯುಂಜಯ ಪ್ರಕಾಶನ ಇದರ ಮುಖ್ಯಸ್ಥರಾಗಿರುವ ಸಾತ್ಯಕಿ ಸಾವರ್ಕರ್, ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ ಎಲ್ ಸಂತೋಷ್ ಮತ್ತು ಖ್ಯಾತ ಸಾಹಿತ್ಯ ವಿಮರ್ಶಕರಾಗಿರುವ ಸಂದೀಪ್ ಬಾಲಕೃಷ್ಣನ್ ಮೊದಲಾದವರು ಭಾಗವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಸಾವರ್ಕರ್ ಅವರ ಕೃತಿಗಳ ಬೃಹತ್ ಪ್ರದರ್ಶನ ಮತ್ತು ಮಾರಾಟ ಮೇಳ ಆಯೋಜಿಸಲಾಗಿದೆ. ಜೊತೆಗೆ ಸಾವರ್ಕರವರ ಸಾಹಿತ್ಯಕ್ಕೆ ಸಂಬಂಧಿಸಿದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ ಎಂದರು.

ಸುದ್ದಿಗೋಷ್ಠಿಯಲ್ಲಿ ಸಂವೇದನಾ ಫೌಂಡೇಶನ್‌ ಉಡುಪಿ ಇದರ ಪ್ರಕಾಶ್‌ ಮಲ್ಪೆ, ಸೂರಜ್‌ ಕಿದಿಯೂರು ಶಶಿಕಾಂತ್‌ ಶೆಟ್ಟಿ ಉಪಸ್ಥೀತರಿದ್ದರು.

Vishwa News 24

Recent Posts

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು – vishwanews24

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…

3 days ago

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ – vishwanews24

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…

3 days ago

ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌ – vishwanews24

ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌ ಕಾರವಾರ: ಉತ್ತರ ಕನ್ನಡ  ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…

3 days ago

ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್‌ – vishwanews24

ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್‌ ಬೆಂಗಳೂರು: ವಿಧಾನ ಪರಿಷತ್‌ ಚುನಾವಣೆಯಲ್ಲಿ ನಮ್ಮ…

3 days ago

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ – vishwanews24

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ  ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…

3 days ago

ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ – ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು – vishwanews24

ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…

3 days ago