ಉಡುಪಿ

ಸಾವರ್ಕರ್ ಬರುತ್ತಿದ್ದಾರೆ ಉಡುಪಿಗೆ : ಕೂರ್ಮ ಬಳಗದ ವತಿಯಿಂದ ವೀರ ಸಾವರ್ಕರ್ ಕುರಿತಾಗಿ ವಿಚಾರಗೋಷ್ಠಿ- Vishwanews24

ಸಾವರ್ಕರ್ ಬರುತ್ತಿದ್ದಾರೆ ಉಡುಪಿಗೆ : ಕೂರ್ಮ ಬಳಗದ ವತಿಯಿಂದ ವೀರ ಸಾವರ್ಕರ್ ಕುರಿತಾಗಿ ವಿಚಾರಗೋಷ್ಠಿ- Vishwanews24

ಉಡುಪಿ: ಸ್ವಾಮಿ ವಿವೇಕಾನಂದರ ಜನ್ಮ ಜಯಂತಿ ಪ್ರಯುಕ್ತ ಕೂರ್ಮಾ ಬಳಗದ ವತಿಯಿಂದ ಸ್ವಾತಂತ್ರ್ಯ ವೀರ ಸಾವರ್ಕರ್ ಅವರ ಸಾಹಿತ್ಯಗಳ ಕುರಿತಾಗಿ ವಿಚಾರಗೋಷ್ಠಿ ಜನವರಿ 12 ರಂದು ನಗರದ ಪುರಭವನದಲ್ಲಿ ನಡೆಯಲಿದೆ ಎಂದು ಸಂಚಾಲಕರಾದ ಶ್ರೀಕಾಂತ್‌ ಶೆಟ್ಟಿ ಹೇಳಿದರು.

ಅವರು ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ರಾಷ್ಟ್ರೀಯ ವಿಚಾರಧಾರೆಗೆ ಪೂರಕವಾದ ಸಾಹಿತ್ಯ ಚಟುವಟಿಕೆಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಕುರ್ಮಾ ಬಳಗ ವಿಚಾರಗೋಷ್ಠಿಗಳನ್ನು ಆಯೋಜಿಸುತ್ತಾ ಬಂದಿರುತ್ತದೆ. Cultural unity recreation and motivational affiliates ಎನ್ನುವುದು ಈ ಹೆಸರಿನ ಹೂರಣವಾಗಿದೆ.

ಸಾಂಸ್ಕೃತಿಕ ವಿಭಿನ್ನತೆಯಿಂದ ವಿಶ್ವದ ಗಮನ ಸೆಳೆದಿರುವ ಭಾರತ, ಸ್ವಾತಂತ್ರ್ಯ ಪಡೆದ ಬಳಿಕ ನಮ್ಮ ನವ ನಾಯಕರ ಪ್ರಮಾದಗಳಿಂದಾಗಿ ಪಾಶ್ಚಾತ್ಯ ನೀತಿಗಳನ್ನೇ ಎರವಲು ಪಡೆದುಕೊಂಡು, ವಸಾಹತುಶಾಹಿಗಳು ಹಾಕಿದ ಅಡಿಗಲ್ಲಿನ ಮೇಲೆ ಕೃತಕವಾಗಿ ಕಟ್ಟಲ್ಪಟ್ಟಿದೆ. ಈ ದೇಶದ ನಿಜವಾದ ಅಂತಸತ್ವವಾಗಿರುವ ಸಾಂಸ್ಕೃತಿಕ ರಾಷ್ಟ್ರೀಯತೆಯನ್ನು ಮರು ಸ್ಥಾಪಿಸಿದರೆ ದೇಶ ಈಗ ಎದುರಿಸುತ್ತಿರುವ ಅನೇಕ ಸವಾಲುಗಳಿಗೆ ಪರಿಹಾರ ಲಭ್ಯವಿದೆ. ಈ ಹಿನ್ನೆಲೆಯಲ್ಲಿ ಶ್ರೀ ಅರವಿಂದೋ ವಿವೇಕಾನಂದ ಮತ್ತು ಸಾವರ್ಕರ್ ಅವರು ಪ್ರತಿಪಾದಿಸಿದ ರಾಷ್ಟ್ರೀಯತೆಯ ಪರಿಕಲ್ಪನೆಯ ಬಗ್ಗೆ ಚಿಂತನ ಮಂಥನ ನಡೆಯಬೇಕಿದೆ.

ದಿನಾಂಕ 12 ಜನವರಿ ಬುಧವಾರದಂದು ಸ್ವಾಮಿ ವಿವೇಕಾನಂದರ ಜನ್ಮ ಜಯಂತಿ ದೇಶಾದ್ಯಂತ ಆಚರಿಸಲಾಗುತ್ತಿದೆ. ಆ ಪ್ರಯುಕ್ತ ಉಡುಪಿಯಲ್ಲಿ ನಮ್ಮ ಸಂಸ್ಥೆಯು ಸ್ವಾತಂತ್ರ್ಯ ವೀರ ಸಾವರ್ಕರ್ ಅವರ ಸಾಹಿತ್ಯಗಳ ಕುರಿತಾಗಿ ವಿಚಾರಗೋಷ್ಠಿ ಆಯೋಜಿಸಿದ್ದು, ಈ ಕಾರ್ಯಕ್ರಮವು ದಿನಾಂಕ 12 ಜನವರಿ 2022 3:00 ಗಂಟೆಗೆ ಸರಿಯಾಗಿ ಉಡುಪಿಯ ಪುರಭವನದಲ್ಲಿ ನಡೆಯಲಿದೆ.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ವೀರ ಸಾವರ್ಕರ್ ಅವರ ಮೊಮ್ಮಗ, ಮೃತ್ಯುಂಜಯ ಪ್ರಕಾಶನ ಇದರ ಮುಖ್ಯಸ್ಥರಾಗಿರುವ ಸಾತ್ಯಕಿ ಸಾವರ್ಕರ್, ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ ಎಲ್ ಸಂತೋಷ್ ಮತ್ತು ಖ್ಯಾತ ಸಾಹಿತ್ಯ ವಿಮರ್ಶಕರಾಗಿರುವ ಸಂದೀಪ್ ಬಾಲಕೃಷ್ಣನ್ ಮೊದಲಾದವರು ಭಾಗವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಸಾವರ್ಕರ್ ಅವರ ಕೃತಿಗಳ ಬೃಹತ್ ಪ್ರದರ್ಶನ ಮತ್ತು ಮಾರಾಟ ಮೇಳ ಆಯೋಜಿಸಲಾಗಿದೆ. ಜೊತೆಗೆ ಸಾವರ್ಕರವರ ಸಾಹಿತ್ಯಕ್ಕೆ ಸಂಬಂಧಿಸಿದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ ಎಂದರು.

ಸುದ್ದಿಗೋಷ್ಠಿಯಲ್ಲಿ ಸಂವೇದನಾ ಫೌಂಡೇಶನ್‌ ಉಡುಪಿ ಇದರ ಪ್ರಕಾಶ್‌ ಮಲ್ಪೆ, ಸೂರಜ್‌ ಕಿದಿಯೂರು ಶಶಿಕಾಂತ್‌ ಶೆಟ್ಟಿ ಉಪಸ್ಥೀತರಿದ್ದರು.

Vishwa News 24

Recent Posts

ಪರಿಷತ್ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಬಸವರಾಜ ಹೊರಟ್ಟಿ -vishwanews24

ಪರಿಷತ್ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಬಸವರಾಜ ಹೊರಟ್ಟಿ ಬೆಂಗಳೂರು,  : ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ…

8 hours ago

ಕಾಪು: ಕಡಲ್ಕೊರೆತ ಪ್ರದೇಶಕ್ಕೆ ಸಚಿವ ಯು.ಟಿ. ಖಾದರ್ ಭೇಟಿ, ಪರಿಶೀಲನೆ -vishwanews24

ಕಾಪು: ಕಡಲ್ಕೊರೆತ ಪ್ರದೇಶಕ್ಕೆ ಸಚಿವ ಯು.ಟಿ. ಖಾದರ್ ಭೇಟಿ, ಪರಿಶೀಲನೆ ಕಾಪು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ…

8 hours ago

ಮುದರಂಗಡಿ : ಗ್ರಾಪಂ ಮಾಜಿ ಅಧ್ಯಕ್ಷ ಡೇವಿಡ್ ಡಿಸೋಜರನ್ನು ಗುಂಡಿಕ್ಕಿ ಹತ್ಯೆಗೈದ ದುಷ್ಕರ್ಮಿಗಳು -vishwanews24

ಮುದರಂಗಡಿ : ಗ್ರಾಪಂ ಮಾಜಿ ಅಧ್ಯಕ್ಷ ಡೇವಿಡ್ ಡಿಸೋಜರನ್ನು ಗುಂಡಿಕ್ಕಿ ಹತ್ಯೆಗೈದ ದುಷ್ಕರ್ಮಿಗಳು ಶಿರ್ವ: ಕಾಂಗ್ರೆಸ್ ಮುಖಂಡ, ಉದ್ಯಮಿ ಡೇವಿಡ್…

9 hours ago

ಕಾಪು ಪುರಸಭೆ ವ್ಯಾಪ್ತಿಯಲ್ಲಿ ನೂರಾರು ಬೀದಿನಾಯಿಗಳು-ಪ್ರತಿದಿನ ಹತ್ತಾರು ಪ್ರಕರಣಗಳು :vishwanews24

ಕಾಪು ಪುರಸಭೆ ವ್ಯಾಪ್ತಿಯಲ್ಲಿ ನೂರಾರು ಬೀದಿನಾಯಿಗಳು-ಪ್ರತಿದಿನ ಹತ್ತಾರು ಪ್ರಕರಣಗಳು ಕಾಪು: ಇಲ್ಲಿನ ಪುರಸಭಾ ವ್ಯಾಪ್ತಿಯಲ್ಲಿ ವಿಶೇಷವಾಗಿ ಕಾಪು ಪೇಟೆ ಹಾಗೂ…

11 hours ago

ಗ್ರಾಪಂ. ವ್ಯಾಪ್ತಿಯಲ್ಲಿ ಪಿಓಪಿ ಗಣೇಶ ಸ್ಥಾಪನೆಗಿಲ್ಲ ಅವಕಾಶ : ಸಚಿವ ಈಶ್ವರ್‌ ಖಂಡ್ರೆ ಸೂಚನೆ -vishwanews24

ಗ್ರಾಪಂ. ವ್ಯಾಪ್ತಿಯಲ್ಲಿ ಪಿಓಪಿ ಗಣೇಶ ಸ್ಥಾಪನೆಗಿಲ್ಲ ಅವಕಾಶ : ಸಚಿವ ಈಶ್ವರ್‌ ಖಂಡ್ರೆ ಸೂಚನೆ ಬೆಂಗಳೂರು: ಸೆ.14ರಂದು ರಾಜ್ಯಾದ್ಯಂತ ಆಚರಿಸಲಿರುವ…

1 day ago

ಮೂಡುಬಿದಿರೆ : ನಾಳೆ (ಆ. 7 ಹಾಗೂ 8 ರಂದು ) ದೇಶದ ಬೃಹತ್ ಉಚಿತ ಉದ್ಯೋಗ ಮೇಳ ಆಳ್ವಾಸ್ ಪ್ರಗತಿ-2026ಕ್ಕೆ  ಚಾಲನೆ -vishwanews24

ಮೂಡುಬಿದಿರೆ : ನಾಳೆ (ಆ. 7 ಹಾಗೂ 8 ರಂದು ) ದೇಶದ ಬೃಹತ್ ಉಚಿತ ಉದ್ಯೋಗ ಮೇಳ ಆಳ್ವಾಸ್…

1 day ago