ಉಡುಪಿ : ಹಲಾಲ್ ಬೋರ್ಡ್ ತೂಗು ಹಾಕಿ ವ್ಯಾಪಾರ ನಡೆಸುವ ಹಿಂದೂ ಹೊಟೇಲ್ ಗಳನ್ನು ಬಹಿಷ್ಕರಿಸಬೇಕು ಎಂಬುದಾಗಿ ಉಡುಪಿ ಜಿಲ್ಲಾ ಬಿಜೆಪಿ ಮುಖಂಡರು ಕರೆ ನೀಡಿದ್ದು, ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಇದಕ್ಕೆ ಸಂಬಂಧಿಸಿದ ಪೋಸ್ಟರ್ ಗಳು ವೈರಲ್ ಆಗುತ್ತಿದೆ.
ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯ್ಲಾಡಿ ಸುರೇಶ್ ನಾಯಕ್ ಅವರು ಈ ಕುರಿತ ಪೋಸ್ಟರ್ ನ್ನು ತಮ್ಮ ಫೇಸ್ಬುಕ್ ಖಾತೆಯಲ್ಲಿ ಹಾಕಿಕೊಂಡಿದ್ದು, ಹಲಾಲ್ ಬೋರ್ಡ್ ನೇತು ಹಾಕಿರುವ ಹಿಂದೂ ಹೊಟೇಲುಗಳಲ್ಲಿ ನಮಗೆ ವ್ಯಾಪಾರ ಬೇಡ, ಅಂತಹ ಹೊಟೇಲ್ ಗಳನ್ನು ಬಹಿಷ್ಕರಿಸೋಣ ಎಂಬುದಾಗಿ ಪೋಸ್ಟರ್ ನಲ್ಲಿ ಬರೆಯಲಾಗಿದೆ.
ಇನ್ನೋರ್ವ ಬಿಜೆಪಿ ಮುಖಂಡ ಉದಯ್ ಕುಮಾರ್ ಶೆಟ್ಟಿ, ಹಲಾಲ್ ಮುದ್ರೆಯಿರುವ ಮಾಂಸಗಳನ್ನು ಹಿಂದೂಗಳು ತಿನ್ನಬಾರದು ಎಂದಿದ್ದಾರೆ. ಹಲಾಲ್ ಎಂಬುವುದೊಂದು ಇತರ ಸಮುದಾಯದವರಿಂದ ಉದ್ಯೋಗ ಕಿತ್ತುಕೊಳ್ಳುವ ಪಿತೂರಿಯಾಗಿದೆ ಎಂಬುದಾಗಿ ಅವರು ಟ್ವೀಟ್ ಮಾಡಿದ್ದಾರೆ. ಮುಸ್ಲಿಮರ ಹೋಟೆಲ್ಗಳಲ್ಲಿ ಹಲಾಲ್ ಇರುವುದು ಅವರ ಸಂಪ್ರದಾಯ, ಆದರೆ ಕೆಲವು ಹಿಂದುಗಳ ಹೋಟೆಲ್ಗಳಲ್ಲಿಯು ಹಲಾಲ್ ಬೋರ್ಡ್ ಹಾಕಿ ವ್ಯಾಪಾರ ಮಾಡುತ್ತಾರೆ. ಅಂತಹ ಬೋರ್ಡ್ ಗಳಿರುವ ಹೋಟೆಲ್ಗಳನ್ನು ಹಿಂದು ಬಾಂಧವರು ಬಹಿಷ್ಕರಿಸಿ.ಹಲಾಲ್ ಬೋರ್ಡ್ ಇರುವ ಹಿಂದೂ ಹೊಟೇಲ್ ಗಳಲ್ಲಿ ಆಹಾರ ಸೇವನೆ ನಿಷೇಧಿಸಬೇಕು ಎಂದವರು ಉಲ್ಲೇಖಿಸಿದ್ದಾರೆ.
ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ ಕಡಬ: ಚಿನ್ನಾಭರಣದ ತೂಕವನ್ನು ಕೃತಕವಾಗಿ ಹೆಚ್ಚಿಸಿ…
ಮಹಾರಾಷ್ಟ್ರ : ಮಳೆ ಅಬ್ಬರ - ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ…
ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ ಶಿವಮೊಗ್ಗ: ನವಜಾತ ಹೆಣ್ಣು ಶಿಶುವೊಂದನ್ನು ಬಸ್ ನಿಲ್ದಾಣದಲ್ಲಿ ಅನಾಥವಾಗಿ…
ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ ಪಡುಬಿದ್ರಿ: ಉಡುಪಿ…
ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇರಾ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…