ಉಡುಪಿ: ಜಿಲ್ಲಾದ್ಯಂತ ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಾಗುತ್ತಿದೆ. ಈ ಮಧ್ಯೆ ಹವಾಮಾನ ವೈಪರಿತ್ಯದಿಂದ ಪ್ರವಾಸಿಗರ ಸುರಕ್ಷತೆ ದೃಷ್ಟಿಯಿಂದ ಕೆಲವು ಪ್ರವಾಸೋದ್ಯಮ ಚಟುವಟಿಕೆಯನ್ನು ಜಿಲ್ಲಾಡಳಿತ ತಾತ್ಕಾಲಿಕವಾಗಿ ನಿರ್ಬಂಧಿಸಿದೆ.
ವಿಶೇಷವಾಗಿ ಬೇಸಗೆ ಹಿನ್ನೆಲೆಯಲ್ಲಿ ವಾಟರ್ ಸ್ಪೋರ್ಟ್ಸ್ ಇರುವ ಜಾಗಗಳಿಗೆ ಹೆಚ್ಚೆಚ್ಚು ಮಂದಿ ಭೇಟಿ ನೀಡಿದ್ದಾರೆ ಎಂದು ಪ್ರವಾಸೋದ್ಯಮ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.
ಜಿಲ್ಲೆಯ ಗುಡುಗು ಸಿಡಿಲು ಸಹಿತ ಗಾಳಿ ಮಳೆಯ ವಾತಾವರಣ ಇರುವುದರಿಂದ ಮೀನುಗಾರಿಕೆಗೆ ತೆರಳದಂತೆ ಈಗಾಗಲೇ ಜಿಲ್ಲಾಡಳಿತದಿಂದ ಮೀನುಗಾರರಿಗೆ ಸೂಚನೆ ನೀಡಲಾಗಿದೆ. ಇದೇ ವೇಳೆಯಲ್ಲಿ ವಾಟರ್ ಸ್ಪೋರ್ಟ್ಸ್ ಚಟುವಟಿಕೆಗಳಿಗೂ ನಿರ್ಬಂಧ ಹೇರಲಾಗಿದೆ.
ಗಾಳಿ ಮಳೆ ಹೆಚ್ಚಾಗುವ ಮುನ್ಸೂಚನೆ ಇರುವುದರಿಂದ ಜಿಲ್ಲೆಯ ವಿವಿಧ ಕಡೆಗಳಲ್ಲಿ ನಡೆಯುತ್ತಿರುವ ವಾಟರ್ ನ್ಪೋರ್ಟ್ಸ್ ಚಟುವಟಿಕೆಗಳಿಗೆ ತಾತ್ಕಾಲಿಕ ನಿರ್ಬಂಧ ವಿಧಿಸಲಾಗಿದೆ. ಹವಾಮಾನ ತಿಳಿಯಾದಂತೆ ಪುನರ್ ಆರಂಭಿಸಲು ಅವಕಾಶ ನೀಡುವ ಸಾಧ್ಯತೆಯಿದೆ. ಒಂದೊಮ್ಮೆ ಮುಂಗಾರು ನಿರೀಕ್ಷೆಗೂ ಮೊದಲೇ ಪ್ರವೇಶ ಮಾಡಿದರೆ ಸದ್ಯಕ್ಕೆ ವಾಟರ್ ಸ್ಪೋರ್ಟ್ಸ್ ಚಟುವಟಿಕೆಗಳಿಗೆ ಅವಕಾಶ ನೀಡುವ ಸಾಧ್ಯತೆ ಕಡಿಮೆಯಿದೆ. ಪ್ರವಾಸಿಗರ ಸುರಕ್ಷತೆಯ ದೃಷ್ಟಿಯಿಂದ ಜಿಲ್ಲಾಡಳಿತ ಈ ಕ್ರಮ ತೆಗೆದುಕೊಂಡಿದೆ ಎಂದು ಜಿಲ್ಲಾ ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ್ ಸಿ.ಯು. ತಿಳಿಸಿದ್ದಾರೆ.
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…
2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…