Featured

ಉಡುಪಿ: ಹಾಡಹಗಲೇ ವ್ಯಕ್ತಿಯನ್ನು ಚೂರಿಯಿಂದ ಇರಿದು ಹತ್ಯೆ – vishwanews24

ಉಡುಪಿ: ಹಾಡಹಗಲೇ ವ್ಯಕ್ತಿಯನ್ನು ಚೂರಿಯಿಂದ ಇರಿದು ಹತ್ಯೆ

ಉಡುಪಿ: ನಗರದ ಹಳೆ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ಬಳಿಯ ಕಾಂಪ್ಲೆಕ್ಸ್ ಒಂದರಲ್ಲಿ ವ್ಯಕ್ತಿಯನ್ನು ಚೂರಿಯಿಂದ ಇರಿದು ಹಾಡುಹಾಗಲೇ ಹತ್ಯೆಗೈದ ಘಟನೆ ನಡೆದಿದೆ.

ಉಡುಪಿ ಹಳೆ ಕೆಎಸ್ ಆರ್ ಟಿಸಿ ಬಳಿಯ ಕೃಷ್ಣ ಕೃಪಾ ಬಿಲ್ಡಿಂಗ್ ನ ನೆಲ ಅಂತಸ್ತಿನ ಕೊಠಡಿಯಲ್ಲಿ ಇಂದು ಬೆಳಿಗ್ಗೆ ನಡೆದಿದೆ. ಕೊರಂಗ್ರಪಾಡಿಯ ಪ್ರಶಾಂತ್ ಶೆಟ್ಟಿ 32 ಕೊಲೆಯಾದ ವ್ಯಕ್ತಿ, ಈತನ ಸ್ನೇಹಿತ ವಿಜಯನಗರ ಜಿಲ್ಲೆಯ ಹೂವಿನಹಡಗಲಿಯ ನಿವಾಸಿ ಈರಣ್ಣ ಯಾನೆ ದಿನೇಶ್ ಎಂಬಾತ ಕೊಲೆ ಮಾಡಿದ ಆರೋಪಿ, ಕಂಠಪೂರ್ತಿ ಕುಡಿದು ಇಬ್ಬರು ಜಗಳ ಮಾಡಿಕೊಂಡಿದ್ದು, ಗಲಾಟೆ ವಿಕೋಪಕ್ಕೆ ತಿರುಗುತ್ತಿದ್ದಂತೆ ಆರೋಪಿ ಈರಣ್ಣ ಹರಿತವಾದ ಚೂರಿಯಿಂದ ಪ್ರಶಾಂತ್ ನ ಕತ್ತು ಸೀಳಿದ್ದಾನೆ. ಗಂಭೀರವಾಗಿ ಗಾಯಗೊಂಡ ಪ್ರಶಾಂತ್ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾನೆ. ಕತ್ತು ಸೀಳಿದ ಬಳಿಕ ಆರೋಪಿಯು ಖುದ್ದು ಪೊಲೀಸರಿಗೆ ಕರೆ ಮಾಡಿ, ಸ್ನೇಹಿತನನ್ನು ಕೊಲೆ ಮಾಡಿರುವುದಾಗಿ ಮಾಹಿತಿ ನೀಡಿದ್ದಾನೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ಠಾಣೆಗೆ ಕರೆದೊಯ್ದಿದ್ದಾರೆ. ಘಟನಾ ಸ್ಥಳಕ್ಕೆ ಎಸ್ಪಿ ಡಾ. ಅರುಣ್ ಕೆ., ಎಎಸ್ಪಿ ಸಿದ್ದಲಿಂಗಪ್ಪ ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಬೆರಳಚ್ಚು ತಜ್ಞರು ಸ್ಥಳಕ್ಕೆ ಭೇಟಿ ಸಾಕ್ಷ್ಯಧಾರಗಳನ್ನು ಸಂಗ್ರಹಿಸಿದ್ದಾರೆ. ಮೇಲ್ನೋಟಕ್ಕೆ ಕ್ಷುಲ್ಲಕ ಕಾರಣಕ್ಕಾಗಿ ಕೊಲೆ ನಡೆದಿದೆ ಅಂತಾ ಕಂಡುಬಂದರೂ ಕೂಡ ಕೊಲೆಗೆ ಬೇರೆ ಏನಾದರೂ ಕಾರಣ ಇದೆಯೇ ಎಂಬುವುದನ್ನ ತನಿಖೆಯ ತಿಳಿದುಬರಬೇಕಿದೆ.

Vishwa News 24

Recent Posts

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ – vishwanews24

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್‌…

1 hour ago

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ ಪ್ರಕ್ರಿಯೆಗೆ ಚಾಲನೆ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ – vishwanews24

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…

1 hour ago

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ – vishwanews24

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…

2 hours ago

ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ – vishwanews24

 ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…

2 hours ago

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ–ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ – vishwanews24

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…

2 hours ago

ಕುದುರೆಮುಖ ಆಫ್ ರೋಡಿಂಗ್ ಚಟುವಟಿಕೆ ವಿರುದ್ಧ ತೀವ್ರ ಆಕ್ರೋಶ – vishwanews24

ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…

4 hours ago