Featured

ಉಡುಪಿ: ಹಾವಿನ ವಿಷ ಚುಚ್ಚಿ ಪತ್ನಿಯ ಹತ್ಯೆ ಪ್ರಕರಣ: ಆರೋಪ ಸಾಬೀತುಪಡಿಸಲು ವಿಫಲ – ಪತಿ ಸಹಿತ ಆರೋಪಿಗಳ ಖುಲಾಸೆ – Vishwanews24

ಉಡುಪಿ: ಹಾವಿನ ವಿಷ ಚುಚ್ಚಿ ಪತ್ನಿಯ ಹತ್ಯೆ ಪ್ರಕರಣ: ಆರೋಪ ಸಾಬೀತುಪಡಿಸಲು ವಿಫಲ – ಪತಿ ಸಹಿತ ಆರೋಪಿಗಳ ಖುಲಾಸೆ

ಉಡುಪಿ: ಕರಾವಳಿ ಮತ್ತು ಮಲೆನಾಡಿನಲ್ಲಿ ಸಂಚಲನ ಮೂಡಿಸಿದ್ದ ಹೆಬ್ರಿ ಸಮೀಪದ ಬೆಳಂಜೆ ತೆಂಕೋಲದಲ್ಲಿ 12 ವರ್ಷಗಳ ಹಿಂದೆ ನಡೆದ ಭಾಗೀರಥಿ (32) ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಾಸಿಕ್ಯೂಷನ್ ಆರೋಪವನ್ನು ಸಾಬೀತುಪಡಿಸಲು ವಿಫಲವಾಗಿರುವ ಹಿನ್ನಲೆಯಲ್ಲಿ, ನಗರದ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಆರೋಪಿಗಳನ್ನು ಖುಲಾಸೆಗೊಳಿಸಿ ಆದೇಶ ಹೊರಡಿಸಿದೆ.

ಹೊಸನಗರ ತಾಲೂಕು ಹಿಲಕುಂಜಿಯ ಭಾಗೀರಥಿ ಅವರು ಹಾಸನ ಸರಕಾರಿ ವೈದ್ಯಕೀಯ ಕಾಲೇಜಿನ ಅಸೋಸಿಯೇಟ್ ಪ್ರೊಪೆಸರ್ ಆಗಿದ್ದ ಡಾ.ಸುರೇಶ್ ಪ್ರಭು ಅವರನ್ನು 1999ರ ಎಪ್ರಿಲ್‌ನಲ್ಲಿ ವಿವಾಹವಾಗಿದ್ದು, ಅವರು 2010ರ ಜ.6ರಂದು ಹೆಬ್ರಿಯಲ್ಲಿ ನಿಗೂಢವಾಗಿ ಸಾವನ್ನಪ್ಪಿದ್ದರು. ಪತ್ನಿ ವಿಷದ ಹಾವು ಕಚ್ಚಿ ಸಾವನ್ನಪ್ಪಿದ್ದಾರೆಂದು ಡಾ.ಪ್ರಭು ಹೆಬ್ರಿ ಠಾಣೆಗೆ ದೂರು ನೀಡಿದ್ದರು

ಎಬಿಡಿ ಜೊತೆ ಕಾಂತಾರ ಸ್ಟಾರ್ ರಿಷಬ್‌ ಶೆಟ್ಟಿ – Vishwanews24

ಈ ಸಾವಿನ ಬಗ್ಗೆ ಅನುಮಾನ ಇದ್ದ ಕಾರಣ ಮೃತ ಭಾಗೀರಥಿಯ ಸಹೋದರ ಅಂದಿನ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿಯಾಗಿ ಸೂಕ್ತ ತನಿಖೆಗೆ ಆಗ್ರಹಿಸಿದ್ದರು. ಅದರಂತೆ ಮುಖ್ಯಮಂತ್ರಿಗಳು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರಿಗೆ ತನಿಖೆ ಮಾಡುವಂತೆ ಆದೇಶಿಸಿದ್ದರು. ಎಸ್ಪಿಯವರು ಡಿಸಿಐಬಿ ಇನ್‌ಸ್ಪೆಕ್ಟರ್ ಗಣೇಶ್ ಹೆಗ್ಡೆ ಅವರನ್ನು ತನಿಖಾಧಿಕಾರಿ ಯಾಗಿ ನೇಮಿಸಿ, ತನಿಖೆ ನಡೆಸುವಂತೆ ಸೂಚಿಸಿದ್ದರು.

ಅದರಂತೆ ತನಿಖೆ ನಡೆಸಿದ ಹೆಗ್ಡೆ ಅವರು ಸುರೇಶ್ ಪ್ರಭು ಹಾಗೂ ಇತರ 6 ಮಂದಿಯ ವಿರುದ್ದ ಪ್ರಕರಣ ದಾಖಲಿಸಿ 57 ಸಾಕ್ಷಿಗಳನ್ನು ಹೊಂದಿರುವ ಚಾರ್ಜ್‌ಶೀಟ್‌ನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ಅದರಲ್ಲಿ ಉಲ್ಲೇಖಿಸಿದಂತೆ ಹಾಸನದ ವೈದ್ಯ ಡಾ ಸುರೇಶ್ ಪ್ರಭು ಹಾಗೂ ಮೃತ ಭಾಗೀರಥಿ ಪತಿ-ಪತ್ನಿಯಾಗಿದ್ದು, ದಾಂಪತ್ಯದಲ್ಲಿ ಹೊಂದಾಣಿಕೆ ಇಲ್ಲದೇ ಆಕೆಗೆ ವಿಚ್ಚೇದನ ನೀಡಲು ಬಯಸಿದ್ದ. ಆದರೆ ಭಾಗೀರಥಿ ಇದಕ್ಕೆ ಒಪ್ಪದಿದ್ದರಿಂದ ಅಸಮಾಧಾನಗೊಂಡ ಆರೋಪಿ, ಭಾಗೀರಥಿಯನ್ನು ಸಾಯಿಸಲು ನಿರ್ಧರಿಸಿದ್ದ. ತನ್ನ ಸ್ನೇಹಿತ ಆರನೇ ಆರೋಪಿ ಮಂಜ ಯಾನೆ ಮಂಜುನಾಥ್ ನೆರವಿನಿಂದ ಭಾಗೀರಥಿಗೆ ನಾಗರಹಾವಿನ ವಿಷವನ್ನು ಇಂಜೆಕ್ಷನ್ ಮೂಲಕ ಚುಚ್ಚಿ ಕೊಲೆ ಮಾಡುವ ಯೋಜನೆ ರೂಪಿಸಿ ಇತರರ ನೆರವಿನಿಂದ ಅದನ್ನು ಕಾರ್ಯರೂಪಕ್ಕೆ ತಂದಿದ್ದ. ತನ್ನ ಮಾರುತಿ 800 ಕಾರಿನಲ್ಲಿ ಪತ್ನಿ ಭಾಗೀರಥಿಯನ್ನು ಧರ್ಮಸ್ಥಳಕ್ಕೆ ಕರೆತರುವ ನೆಪದಲ್ಲಿ ತನ್ನ ಸ್ನೇಹಿತರ ನೆರವಿನಿಂದ ಮೊದಲೇ ಯೋಜಿಸಿಕೊಂಡಿದ್ದಂತೆ ಶಿವಮೊಗ್ಗದಿಂದ ತೀರ್ಥಹಳ್ಳಿ-ಆಗುಂಬೆ-ಸೋಮೇಶ್ವರ ಮಾರ್ಗ ವಾಗಿ ಕರೆದುಕೊಂಡು ಬಂದು, ಅಲ್ಲಿಂದ ಮಡಾಮಕ್ಕಿ ರಸ್ತೆಯ ನಿರ್ಜನ ಸ್ಥಳದಲ್ಲಿ ಹಾವಿನ ವಿಷ ತುಂಬಿದ್ದ ಇಂಜೆಕ್ಷನ್ ಚುಚ್ಚಿ ಕೊಲೆ ಮಾಡಿ, ಆಕೆ ಯಾವುದೋ ವಿಷದ ಹಾವು ಕಚ್ಚಿ ಸತ್ತಿದ್ದಾಳೆ ಎಂದು ನಂಬಿಸುವ ಪ್ರಯತ್ನ ನಡೆಸಿದ್ದ. ಅಲ್ಲದೇ ಈ ಬಗ್ಗೆ ಹೆಬ್ರಿ ಠಾಣೆಯಲ್ಲಿ ದೂರು ಸಹ ದಾಖಲಿಸಿದ್ದ ಎಂದು ದೋಷಾರೋಪ ಪಟ್ಟಿಯಲ್ಲಿ ವಿವರಿಸಲಾಗಿತ್ತು. ಆರೋಪಿಗಳ ಪರವಾಗಿ ಉಡುಪಿಯ ನ್ಯಾಯವಾದಿ ಎಂ.ಶಾಂತಾರಾಮ ಶೆಟ್ಟಿ ವಾದಿಸಿದ್ದರು.

ಬೈಂದೂರು: ಬೈಕ್‌ ಸ್ಕಿಡ್‌ ಆಗಿ ಗಂಭೀರ ಗಾಯಗೊಂಡಿದ್ದ ಪತ್ರಿಕಾ ವಿತರಕ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು – Vishwanews24

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

1 day ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

1 day ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago