Judge and gavel in courtroom
ಉಡುಪಿ: ಕರಾವಳಿ ಮತ್ತು ಮಲೆನಾಡಿನಲ್ಲಿ ಸಂಚಲನ ಮೂಡಿಸಿದ್ದ ಹೆಬ್ರಿ ಸಮೀಪದ ಬೆಳಂಜೆ ತೆಂಕೋಲದಲ್ಲಿ 12 ವರ್ಷಗಳ ಹಿಂದೆ ನಡೆದ ಭಾಗೀರಥಿ (32) ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಾಸಿಕ್ಯೂಷನ್ ಆರೋಪವನ್ನು ಸಾಬೀತುಪಡಿಸಲು ವಿಫಲವಾಗಿರುವ ಹಿನ್ನಲೆಯಲ್ಲಿ, ನಗರದ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಆರೋಪಿಗಳನ್ನು ಖುಲಾಸೆಗೊಳಿಸಿ ಆದೇಶ ಹೊರಡಿಸಿದೆ.
ಹೊಸನಗರ ತಾಲೂಕು ಹಿಲಕುಂಜಿಯ ಭಾಗೀರಥಿ ಅವರು ಹಾಸನ ಸರಕಾರಿ ವೈದ್ಯಕೀಯ ಕಾಲೇಜಿನ ಅಸೋಸಿಯೇಟ್ ಪ್ರೊಪೆಸರ್ ಆಗಿದ್ದ ಡಾ.ಸುರೇಶ್ ಪ್ರಭು ಅವರನ್ನು 1999ರ ಎಪ್ರಿಲ್ನಲ್ಲಿ ವಿವಾಹವಾಗಿದ್ದು, ಅವರು 2010ರ ಜ.6ರಂದು ಹೆಬ್ರಿಯಲ್ಲಿ ನಿಗೂಢವಾಗಿ ಸಾವನ್ನಪ್ಪಿದ್ದರು. ಪತ್ನಿ ವಿಷದ ಹಾವು ಕಚ್ಚಿ ಸಾವನ್ನಪ್ಪಿದ್ದಾರೆಂದು ಡಾ.ಪ್ರಭು ಹೆಬ್ರಿ ಠಾಣೆಗೆ ದೂರು ನೀಡಿದ್ದರು
ಎಬಿಡಿ ಜೊತೆ ಕಾಂತಾರ ಸ್ಟಾರ್ ರಿಷಬ್ ಶೆಟ್ಟಿ – Vishwanews24
ಈ ಸಾವಿನ ಬಗ್ಗೆ ಅನುಮಾನ ಇದ್ದ ಕಾರಣ ಮೃತ ಭಾಗೀರಥಿಯ ಸಹೋದರ ಅಂದಿನ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿಯಾಗಿ ಸೂಕ್ತ ತನಿಖೆಗೆ ಆಗ್ರಹಿಸಿದ್ದರು. ಅದರಂತೆ ಮುಖ್ಯಮಂತ್ರಿಗಳು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರಿಗೆ ತನಿಖೆ ಮಾಡುವಂತೆ ಆದೇಶಿಸಿದ್ದರು. ಎಸ್ಪಿಯವರು ಡಿಸಿಐಬಿ ಇನ್ಸ್ಪೆಕ್ಟರ್ ಗಣೇಶ್ ಹೆಗ್ಡೆ ಅವರನ್ನು ತನಿಖಾಧಿಕಾರಿ ಯಾಗಿ ನೇಮಿಸಿ, ತನಿಖೆ ನಡೆಸುವಂತೆ ಸೂಚಿಸಿದ್ದರು.
ಅದರಂತೆ ತನಿಖೆ ನಡೆಸಿದ ಹೆಗ್ಡೆ ಅವರು ಸುರೇಶ್ ಪ್ರಭು ಹಾಗೂ ಇತರ 6 ಮಂದಿಯ ವಿರುದ್ದ ಪ್ರಕರಣ ದಾಖಲಿಸಿ 57 ಸಾಕ್ಷಿಗಳನ್ನು ಹೊಂದಿರುವ ಚಾರ್ಜ್ಶೀಟ್ನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ಅದರಲ್ಲಿ ಉಲ್ಲೇಖಿಸಿದಂತೆ ಹಾಸನದ ವೈದ್ಯ ಡಾ ಸುರೇಶ್ ಪ್ರಭು ಹಾಗೂ ಮೃತ ಭಾಗೀರಥಿ ಪತಿ-ಪತ್ನಿಯಾಗಿದ್ದು, ದಾಂಪತ್ಯದಲ್ಲಿ ಹೊಂದಾಣಿಕೆ ಇಲ್ಲದೇ ಆಕೆಗೆ ವಿಚ್ಚೇದನ ನೀಡಲು ಬಯಸಿದ್ದ. ಆದರೆ ಭಾಗೀರಥಿ ಇದಕ್ಕೆ ಒಪ್ಪದಿದ್ದರಿಂದ ಅಸಮಾಧಾನಗೊಂಡ ಆರೋಪಿ, ಭಾಗೀರಥಿಯನ್ನು ಸಾಯಿಸಲು ನಿರ್ಧರಿಸಿದ್ದ. ತನ್ನ ಸ್ನೇಹಿತ ಆರನೇ ಆರೋಪಿ ಮಂಜ ಯಾನೆ ಮಂಜುನಾಥ್ ನೆರವಿನಿಂದ ಭಾಗೀರಥಿಗೆ ನಾಗರಹಾವಿನ ವಿಷವನ್ನು ಇಂಜೆಕ್ಷನ್ ಮೂಲಕ ಚುಚ್ಚಿ ಕೊಲೆ ಮಾಡುವ ಯೋಜನೆ ರೂಪಿಸಿ ಇತರರ ನೆರವಿನಿಂದ ಅದನ್ನು ಕಾರ್ಯರೂಪಕ್ಕೆ ತಂದಿದ್ದ. ತನ್ನ ಮಾರುತಿ 800 ಕಾರಿನಲ್ಲಿ ಪತ್ನಿ ಭಾಗೀರಥಿಯನ್ನು ಧರ್ಮಸ್ಥಳಕ್ಕೆ ಕರೆತರುವ ನೆಪದಲ್ಲಿ ತನ್ನ ಸ್ನೇಹಿತರ ನೆರವಿನಿಂದ ಮೊದಲೇ ಯೋಜಿಸಿಕೊಂಡಿದ್ದಂತೆ ಶಿವಮೊಗ್ಗದಿಂದ ತೀರ್ಥಹಳ್ಳಿ-ಆಗುಂಬೆ-ಸೋಮೇಶ್ವರ ಮಾರ್ಗ ವಾಗಿ ಕರೆದುಕೊಂಡು ಬಂದು, ಅಲ್ಲಿಂದ ಮಡಾಮಕ್ಕಿ ರಸ್ತೆಯ ನಿರ್ಜನ ಸ್ಥಳದಲ್ಲಿ ಹಾವಿನ ವಿಷ ತುಂಬಿದ್ದ ಇಂಜೆಕ್ಷನ್ ಚುಚ್ಚಿ ಕೊಲೆ ಮಾಡಿ, ಆಕೆ ಯಾವುದೋ ವಿಷದ ಹಾವು ಕಚ್ಚಿ ಸತ್ತಿದ್ದಾಳೆ ಎಂದು ನಂಬಿಸುವ ಪ್ರಯತ್ನ ನಡೆಸಿದ್ದ. ಅಲ್ಲದೇ ಈ ಬಗ್ಗೆ ಹೆಬ್ರಿ ಠಾಣೆಯಲ್ಲಿ ದೂರು ಸಹ ದಾಖಲಿಸಿದ್ದ ಎಂದು ದೋಷಾರೋಪ ಪಟ್ಟಿಯಲ್ಲಿ ವಿವರಿಸಲಾಗಿತ್ತು. ಆರೋಪಿಗಳ ಪರವಾಗಿ ಉಡುಪಿಯ ನ್ಯಾಯವಾದಿ ಎಂ.ಶಾಂತಾರಾಮ ಶೆಟ್ಟಿ ವಾದಿಸಿದ್ದರು.
ಉಡುಪಿ : ರೈಲ್ವೆ ನಿಲ್ದಾಣದಲ್ಲಿ ಆತ್ಮಹತ್ಯೆಗೆ ಯತ್ನಿಸುತ್ತಿದ್ದ ಯುವಕನ ರಕ್ಷಿಸಿದ ರೈಲ್ವೇ ಆರ್. ಪಿ .ಎಫ್ ಪಡೆ ಉಡುಪಿ: ಇಂದ್ರಾಳಿ…
ಆದಿಚುಂಚನಗಿರಿ ಮಠದ ಗುರುಭೈರವೈಕ್ಯ ಮಂದಿರ ಉದ್ಘಾಟಿಸಿದ ಪ್ರಧಾನಿ ಮೋದಿ ಮಂಡ್ಯ: ಆದಿಚುಂಚನಗಿರಿ ಮಠದಲ್ಲಿ ದ್ರಾವಿಡ-ಹೊಯ್ಸಳ ಶೈಲಿಯ ಶಿಲ್ಪಕಲೆಯಿಂದ ನಿರ್ಮಿಸಿರುವ ಶ್ರೀಗುರು…
ಮಂಗಳೂರು : ಅಡುಗೆ ಅನಿಲ ಬೆಲೆ ಏರಿಕೆ ಖಂಡಿಸಿ ಕೇಂದ್ರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ ಕೇಂದ್ರ ಸರಕರದ ಅಸ್ಪಷ್ಟ ವಿದೇಶಾಂಗ…
ಕೊಂಕಣ ರೈಲ್ವೆ: ಬೈಂದೂರಿನಲ್ಲಿ ಕ್ರಾಸಿಂಗ್ ಸ್ಟೇಶನ್ ನಿರ್ಮಾಣಕ್ಕೆ ಪ್ರಸ್ತಾವನೆ ಉಡುಪಿ : ಕರ್ನಾಟಕ ಕರಾವಳಿಯ ಮೂರು ಜಿಲ್ಲೆಗಳನ್ನು -ಉತ್ತರ ಕನ್ನಡ,…
ರಾಷ್ಟ್ರೀಯ ಪುರಸ್ಕಾರಕ್ಕೆ ಆಯ್ಕೆ: ಬೆಳ್ಳೆ ಗ್ರಾ.ಪಂ.ಗೆ ಕೇಂದ್ರ ತಂಡ ಭೇಟಿ ಶಿರ್ವ : ಆತ್ಮ ನಿರ್ಭರ ಭಾರತ ರಾಷ್ಟ್ರೀಯ ಪ್ರಶಸ್ತಿಗೆ…
ಬಿಹಾರದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಪ್ರಮಾಣವಚನ ಸ್ವೀಕಾರ ಪಾಟ್ನಾ: ಬಿಹಾರದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿ ನಾಯಕ…