ಉಡುಪಿ: ಇಲ್ಲಿನ ಬೋರ್ಡಿಂಗ್ ಹಾಸ್ಟೆಲ್ನಿಂದ ಕಾಣೆಯಾಗಿದ್ದ 13 ವರ್ಷದ ಬಾಲಕನನ್ನು ಮಂಗಳೂರು ವಿಭಾಗದ ಮುಖ್ಯ ಟಿಟಿಇ (ಹೆಡ್ ಟಿಟಿಇ) ರಾಘವೇಂದ್ರ ಶೆಟ್ಟಿ ಅವರು ಮಂಗಳೂರು ಎಕ್ಸ್ಪ್ರೆಸ್ ರೈಲಿನಲ್ಲಿ ಗುರುವಾರ ಸುರಕ್ಷಿತವಾಗಿ ರಕ್ಷಿಸಿದ್ದಾರೆ.
ಕೋಚ್ S3 ನಲ್ಲಿ ಬಾಲಕ ಒಬ್ಬನೇ ಪ್ರಯಾಣಿಸುತ್ತಿದ್ದಾಗ, ಟಿಕೆಟ್ ತಪಾಸಣೆ ವೇಳೆ ರಾಘವೇಂದ್ರ ಶೆಟ್ಟಿ ಅವರಿಗೆ ಬಾಲಕನ ಪ್ರತಿಕ್ರಿಯೆಯಲ್ಲಿ ವ್ಯತ್ಯಾಸ ಕಂಡುಬಂದಿದೆ. ಆತನ ಬ್ಯಾಗ್ ಪರಿಶೀಲಿಸಿದಾಗ, ಶಾಲೆಯ ಐಡಿ ಕಾರ್ಡ್ ದೊರೆತಿದೆ. ತಕ್ಷಣವೇ ಅವರು ಶಾಲಾ ಅಧಿಕಾರಿಗಳನ್ನು ಸಂಪರ್ಕಿಸಿದರು. ಆಗ, ಬಾಲಕ ಹಾಸ್ಟೆಲ್ನಿಂದ ಓಡಿಹೋಗಿರುವುದು ದೃಢಪಟ್ಟಿದೆ. ಆತನ ತಾಯಿಗೆ ಮಗ ಸುರಕ್ಷಿತವಾಗಿರುವ ಬಗ್ಗೆ ಮಾಹಿತಿ ನೀಡಲಾಯಿತು. ಆತ ತಾಯಿಯೊಂದಿಗೆ ವಾಸಿಸುತ್ತಿದ್ದು, ಆಕೆ ಮನೆಗೆಲಸ ಮಾಡಿ ಮಗನನ್ನು ಓದಿಸುತ್ತಿದ್ದರು.
ಉಡುಪಿ ನಿಲ್ದಾಣದಲ್ಲಿ ಬಾಲಕನನ್ನು ರೈಲ್ವೆ ಸಂರಕ್ಷಣಾ ಪಡೆ (ಆರ್ಪಿಎಫ್)ಗೆ ಹಸ್ತಾಂತರಿಸಲಾಯಿತು. ಪೊಲೀಸರು ಬಾಲಕ ಸುರಕ್ಷಿತವಾಗಿ ಮನೆ ಸೇರುವ ವರೆಗೆ ಆತನನ್ನು ಉಡುಪಿಯ ಮಕ್ಕಳ ಪಾಲನಾ ಕೇಂದ್ರದಲ್ಲಿ ಇರಿಸಿದರು.
ರಾಘವೇಂದ್ರ ಶೆಟ್ಟಿ ಅವರ ಕ್ಷಿಪ್ರ ಮತ್ತು ಕರ್ತವ್ಯಪ್ರಜ್ಞೆಯನ್ನು ಶ್ಲಾಘಿಸಿ, ಕೊಂಕಣ ರೈಲ್ವೆಯ ಸಿಡಿಎಂ ಸಂತೋಷ್ ಕುಮಾರ್ ಝಾ ಅವರು 5,000 ರೂ. ನಗದು ಬಹುಮಾನ ನೀಡಿ ಗೌರವಿಸಿದ್ದಾರೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…