ಉಡುಪಿ: ನನಗೆ ಸಾಮಾಜಿಕ ಜಾಲತಾಣದಲ್ಲಿ ಬೆದರಿಕೆ ಹಾಕಿದವರು ಷಂಡರು ಎಂದು ನಗರದ ಸರ್ಕಾರಿ ಮಹಿಳಾ ಪಿಯು ಕಾಲೇಜು ಉಪಾಧ್ಯಕ್ಷ ಯಶ್ಪಾಲ್ ಸುವರ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಿಡಿಗೇಡಿಗಳು ಸಾಮಾಜಿಕ ಜಾಲತಾಣದಲ್ಲಿ ಬಹಿರಂಗವಾಗಿ ಬೆದರಿಕೆ ಹಾಕಿರುವ ವಿಚಾರವಾಗಿ ಮಾತನಾಡಿದ ಅವರು, ಹಿಂದುತ್ವದ ವಿಚಾರದಲ್ಲಿ ಕೆಲಸ ಮಾಡುವಾಗ ಬೆದರಿಕೆಗಳು ಸಾಮಾನ್ಯ. ಧಮ್ಕಿ ಕೊಟ್ಟವನಿಗೆ ನನ್ನ ವ್ಯಾಲ್ಯೂಯೇಷನ್ ಎಷ್ಟು ಅಂತ ಗೊತ್ತಿಲ್ಲ. ಒಬ್ಬ ಮನುಷ್ಯನ ಬೆಲೆ ಎಷ್ಟು ಅಂತ ಗೊತ್ತಿದ್ದರೆ ಆತ ಬೆಲೆ ಕಟ್ಟುತ್ತಿರಲಿಲ್ಲ. ಧಮ್ಕಿ ಬಂತು ಅಂತ ನನ್ನ ಕೆಲಸದ ಶೈಲಿ ರಾಷ್ಟ್ರೀಯತೆ ಹಿಂದುತ್ವದ ಹೋರಾಟದಿಂದ ಹಿಂದೆ ಸರಿಯುವುದಿಲ್ಲ ಎಂದು ಕಿಡಿಕಾರಿದರು.
ಕಿಡಿಗೇಡಿಗಳು ಅವರ ತಲೆ ತೆಗೆಯುವುದಾಗಿ ಬೆದರಿಕೆ ಹಾಕಿದ್ದಲ್ಲದೇ, ತಲೆಗೆ 10 ಲಕ್ಷ ರೂಪಾಯಿ ಘೋಷಿಸಿರುವ ವಿಚಾರವಾಗಿ ಪ್ರತಿಕ್ರಿಯೆ ನೀಡಿ, ಸಾಮಾಜಿಕ ಜಾಲತಾಣದಲ್ಲಿ ಬೆದರಿಕೆ ಹಾಕಿದವರು ಷಂಡರು. ತಾಕತ್ ಇದ್ದರೆ ಅವರು ಎದುರು ಬಂದು ಮಾತಾಡಲಿ. ನನ್ನ ಜೀವನದಲ್ಲಿ ಇಂತದ್ದು ತುಂಬಾ ನೋಡಿದ್ದೇನೆ. ನಾನು ದೇಶದ್ರೋಹಿ ಚಟುವಟಿಕೆ ಮಾಡಿಲ್ಲ, ಅನ್ಯಾಯ ಮಾಡಿಲ್ಲ. ನನಗೆ ದೋ ನಂಬರ್ ಬ್ಯುಸಿನೆಸ್ ಇಲ್ಲ ನಾನು ಯಾರದೋ ಅನ್ನದ ಬಟ್ಟಲಿಗೆ ಕೈಹಾಕಿ ತಿಂದಿಲ್ಲ ಎಂದು ಸಿಡಿದರು.
ಶಾಲೆಯ ಶಿಸ್ತು ಮತ್ತು ಕೋರ್ಟ್ ಆದೇಶ ಪಾಲಿಸಲು ನಾವು ಹಿಜಬ್ನ ವಿರುದ್ಧವೇ ನಿಲ್ಲುತ್ತೇವೆ. ಈ ವರ್ಷ ಕೂಡ 40ಕ್ಕೂ ಹೆಚ್ಚು ಮುಸ್ಲಿಮ್ ವಿದ್ಯಾರ್ಥಿನಿಯರನ್ನು ನಾವು ಅಡ್ಮಿಶನ್ ಮಾಡಿಸಿಕೊಂಡಿದ್ದೇವೆ. ನಾವು ಹಿಜಬ್ ತೆಗೆದು ಕ್ಲಾಸಿಗೆ ಬರುತ್ತೇವೆ ಎಂದು ಬರೆದುಕೊಟ್ಟಿದ್ದಾರೆ ಎಂದು ತಿಳಿಸಿದರು.
ಕಿಡಿಗೇಡಿಗಳು ಪ್ರಮೋದ್ ಮುತಾಲಿಕ್ ಅವರಿಗೂ ಬೆದರಿಕೆ ಹಾಕಿದ್ದಾರೆ. ನಾನು ಅವರ ಜೊತೆ ಮಾತನಾಡಿಲ್ಲ, ಮಾತನಾಡುತ್ತೇನೆ. ನನ್ನ ಸಿದ್ಧಾಂತ ದೇಶದ ವಿಚಾರದ ಹೋರಾಟ ಮಾಡುತ್ತೇನೆ. ನಾನು ಭಯಪಡುವ ಪ್ರಶ್ನೆಯೇ ಇಲ್ಲ. ಟೀಕೆ ಬೆದರಿಕೆ ಸಾಮಾಜಿಕ ಚಟುವಟಿಕೆಯ ಒಂದು ಅವಿಭಾಜ್ಯ ಅಂಗ ಎಂದರು.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…