ಉಡುಪಿ: ನನಗೆ ಸಾಮಾಜಿಕ ಜಾಲತಾಣದಲ್ಲಿ ಬೆದರಿಕೆ ಹಾಕಿದವರು ಷಂಡರು ಎಂದು ನಗರದ ಸರ್ಕಾರಿ ಮಹಿಳಾ ಪಿಯು ಕಾಲೇಜು ಉಪಾಧ್ಯಕ್ಷ ಯಶ್ಪಾಲ್ ಸುವರ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಿಡಿಗೇಡಿಗಳು ಸಾಮಾಜಿಕ ಜಾಲತಾಣದಲ್ಲಿ ಬಹಿರಂಗವಾಗಿ ಬೆದರಿಕೆ ಹಾಕಿರುವ ವಿಚಾರವಾಗಿ ಮಾತನಾಡಿದ ಅವರು, ಹಿಂದುತ್ವದ ವಿಚಾರದಲ್ಲಿ ಕೆಲಸ ಮಾಡುವಾಗ ಬೆದರಿಕೆಗಳು ಸಾಮಾನ್ಯ. ಧಮ್ಕಿ ಕೊಟ್ಟವನಿಗೆ ನನ್ನ ವ್ಯಾಲ್ಯೂಯೇಷನ್ ಎಷ್ಟು ಅಂತ ಗೊತ್ತಿಲ್ಲ. ಒಬ್ಬ ಮನುಷ್ಯನ ಬೆಲೆ ಎಷ್ಟು ಅಂತ ಗೊತ್ತಿದ್ದರೆ ಆತ ಬೆಲೆ ಕಟ್ಟುತ್ತಿರಲಿಲ್ಲ. ಧಮ್ಕಿ ಬಂತು ಅಂತ ನನ್ನ ಕೆಲಸದ ಶೈಲಿ ರಾಷ್ಟ್ರೀಯತೆ ಹಿಂದುತ್ವದ ಹೋರಾಟದಿಂದ ಹಿಂದೆ ಸರಿಯುವುದಿಲ್ಲ ಎಂದು ಕಿಡಿಕಾರಿದರು.
ಕಿಡಿಗೇಡಿಗಳು ಅವರ ತಲೆ ತೆಗೆಯುವುದಾಗಿ ಬೆದರಿಕೆ ಹಾಕಿದ್ದಲ್ಲದೇ, ತಲೆಗೆ 10 ಲಕ್ಷ ರೂಪಾಯಿ ಘೋಷಿಸಿರುವ ವಿಚಾರವಾಗಿ ಪ್ರತಿಕ್ರಿಯೆ ನೀಡಿ, ಸಾಮಾಜಿಕ ಜಾಲತಾಣದಲ್ಲಿ ಬೆದರಿಕೆ ಹಾಕಿದವರು ಷಂಡರು. ತಾಕತ್ ಇದ್ದರೆ ಅವರು ಎದುರು ಬಂದು ಮಾತಾಡಲಿ. ನನ್ನ ಜೀವನದಲ್ಲಿ ಇಂತದ್ದು ತುಂಬಾ ನೋಡಿದ್ದೇನೆ. ನಾನು ದೇಶದ್ರೋಹಿ ಚಟುವಟಿಕೆ ಮಾಡಿಲ್ಲ, ಅನ್ಯಾಯ ಮಾಡಿಲ್ಲ. ನನಗೆ ದೋ ನಂಬರ್ ಬ್ಯುಸಿನೆಸ್ ಇಲ್ಲ ನಾನು ಯಾರದೋ ಅನ್ನದ ಬಟ್ಟಲಿಗೆ ಕೈಹಾಕಿ ತಿಂದಿಲ್ಲ ಎಂದು ಸಿಡಿದರು.
ಶಾಲೆಯ ಶಿಸ್ತು ಮತ್ತು ಕೋರ್ಟ್ ಆದೇಶ ಪಾಲಿಸಲು ನಾವು ಹಿಜಬ್ನ ವಿರುದ್ಧವೇ ನಿಲ್ಲುತ್ತೇವೆ. ಈ ವರ್ಷ ಕೂಡ 40ಕ್ಕೂ ಹೆಚ್ಚು ಮುಸ್ಲಿಮ್ ವಿದ್ಯಾರ್ಥಿನಿಯರನ್ನು ನಾವು ಅಡ್ಮಿಶನ್ ಮಾಡಿಸಿಕೊಂಡಿದ್ದೇವೆ. ನಾವು ಹಿಜಬ್ ತೆಗೆದು ಕ್ಲಾಸಿಗೆ ಬರುತ್ತೇವೆ ಎಂದು ಬರೆದುಕೊಟ್ಟಿದ್ದಾರೆ ಎಂದು ತಿಳಿಸಿದರು.
ಕಿಡಿಗೇಡಿಗಳು ಪ್ರಮೋದ್ ಮುತಾಲಿಕ್ ಅವರಿಗೂ ಬೆದರಿಕೆ ಹಾಕಿದ್ದಾರೆ. ನಾನು ಅವರ ಜೊತೆ ಮಾತನಾಡಿಲ್ಲ, ಮಾತನಾಡುತ್ತೇನೆ. ನನ್ನ ಸಿದ್ಧಾಂತ ದೇಶದ ವಿಚಾರದ ಹೋರಾಟ ಮಾಡುತ್ತೇನೆ. ನಾನು ಭಯಪಡುವ ಪ್ರಶ್ನೆಯೇ ಇಲ್ಲ. ಟೀಕೆ ಬೆದರಿಕೆ ಸಾಮಾಜಿಕ ಚಟುವಟಿಕೆಯ ಒಂದು ಅವಿಭಾಜ್ಯ ಅಂಗ ಎಂದರು.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…