Featured

ಉಡುಪಿ: ಹಿಂದೂ ರಾಷ್ಟ್ರ ಎಂದು ಹಾಕಿರುವ ಬ್ಯಾನರ್ ತೆರವಿಗೆ ಎಸ್ ಡಿಪಿಐ ಒತ್ತಾಯ -Vishwanews24

ಉಡುಪಿ: ಹಿಂದೂ ರಾಷ್ಟ್ರ ಎಂದು ಹಾಕಿರುವ ಬ್ಯಾನರ್ ತೆರವಿಗೆ ಎಸ್ ಡಿಪಿಐ ಒತ್ತಾಯ

ಉಡುಪಿಯ ಉಸಿರುಗಟ್ಟುವ ವಾತಾವರಣ ತಿಳಿಗೊಳಿಸಿ..

ಉಡುಪಿ : ಬ್ರಹ್ಮಗಿರಿ ಸರ್ಕಲ್ ಹಿಂದೂ ರಾಷ್ಟ್ರ ಬ್ಯಾನರ್ ವಿಚಾರಕ್ಕೆ ಸಂಬಂಧಿಸಿದಂತೆ, ಉಡುಪಿ ಜಿಲ್ಲಾ ಎಸ್ ಡಿ ಪಿ ಐ ಸುದ್ದಿಗೋಷ್ಠಿ ನಡೆಸಿದೆ. ವಿವಾದ, ಸಮಸ್ಯೆ, ದ್ವೇಷ ಇಲ್ಲದ ರಾಜ್ಯವಾಗಿತ್ತು. ಆದರೆ, ದುರದೃಷ್ಟವಶಾತ್ ಯುಪಿ, ಎಂಪಿ, ರಾಜಸ್ತಾನದ ರೀತಿಯ ಘಟನೆಗಳು ಇಲ್ಲಿ ಆರಂಭವಾಗಿದೆ ಎಂದು ಎಸ್ ಡಿ ಪಿಐ ಉಪಾಧ್ಯಕ್ಷ ಶಾಹಿದ್ ಅಲಿ ಹೇಳಿದ್ದಾರೆ.

ಕರ್ನಾಟಕದಲ್ಲೂ ಉತ್ತರ ಭಾರತ ಮಾದರಿಯ ಘಟನೆ ಆರಂಭವಾಗಿದೆ. ಬುಲ್ಡೋಜರ್, ಹಿಜಾಬ್ ದ್ವೇಷ ಸೃಷ್ಟಿ ಉಡುಪಿಯಲ್ಲೇ ಆರಂಭವಾಯ್ತು. ಬ್ರಹ್ಮಗಿರಿಯಲ್ಲಿ ಜೈ ಹಿಂದೂ ರಾಷ್ಟ್ರದ ಬ್ಯಾನರ್ ಹಾಕಿದ್ದಾರೆ.

ಜನಪ್ರತಿನಿಧಿಗಳು ಸಂವಿಧಾನದಂತೆ ನಡೆಯುತ್ತೇವೆ ಹೇಳುತ್ತಾರೆ. ಹಿಂದೂ ರಾಷ್ಟ್ರದ ಆರ್ ಎಸ್ ಎಸ್ ಪರಿಕಲ್ಪನೆಯಾಗಿದೆ. ಹಿಂದೂ ಮತ ಪಡೆಯಲು, ಬೇರೆಯವರಿಂದ ಬೇರ್ಪಡಿಸಲು ಈ ಷಡ್ಯಂತ್ರವಾಗಿದೆ.

ಹಿಂದೂ ರಾಷ್ಟ್ರ ಕೇವಲ ಹಿಂದೂ ಮತ ಪಡೆಯುವ ಪರಿಕಲ್ಪನೆಯಾಗಿದೆ. ಎಂಟು ವರ್ಷದಿಂದ ಈ ಸರ್ಕಾರದ ಆಡಳಿತವನ್ನು ಹಿಂದೂಗಳು ನೋಡಿದ್ದಾರೆ.

ಉದ್ಯೋಗ ಇಲ್ಲದೆ ಹಿಂದೂ ಯುವಕರು ಅತ್ಮಹತ್ಯೆ ಮಾಡಿಕೊಳ್ತಿದ್ದಾರೆ. ಹಿಂದೂಗಳು ಕಷ್ಟದಲ್ಲಿದ್ದಾರೆ, ಹಾಗಾದ್ರೆ ಇದು ಯಾರ ರಾಷ್ಟ್ರ?

ಇದು ಮನುಸ್ನೃತಿ ರಾಷ್ಟ್ರ…ಬ್ರಾಹ್ಮಣ ರು ತಮ್ಮ ಕಪಿಮುಷ್ಟಿಯಲ್ಲಿ ಭಾರತ ಇಡಲು ಯತ್ನಿಸುತ್ತಿದ್ದಾರೆ.

ಶಾಂತಿಭಂಗ ಮಾಡುವ, ಜನರನ್ನು ಉದ್ರೇಕಿಸಲು ಜನರ ಮತ ಗಳಿಸಲು ಈ ಷಡ್ಯಂತ್ರವಾಗಿದೆ. ಮುಸಲ್ಮಾನರು ತಲೆ ಕೆಡಿಸಿಕೊಳ್ಳಬೇಡಿ, ಪೊಲೀಸ್ ಇಲಾಖೆ ಮೇಲೆ ವಿಶ್ವಾಸವಿದೆ. ವಿವಾದಿತ ಬ್ಯಾನರ್ ತೆರವು ಮಾಡಿ. ಪೊಲೀಸರು ಜನರ ಭರವಸೆ ಹುಸಿ ಮಾಡಬೇಡಿ. ಉಡುಪಿಯ ಉಸಿರುಗಟ್ಟುವ ವಾತಾವರಣ ತಿಳಿಗೊಳಿಸಿ ಎಂದರು.

ಕೆಲವೇ ದಿನಗಳಲ್ಲಿ ಡಿಸಿ ಕಚೇರಿ ಮುಂದೆ ಪ್ರತಿಭಟನೆ ಮಾಡ್ತೇವೆ ಎಂದರು. ಹಿಂದೂ ರಾಷ್ಟ್ರ ಎಂದು ಹಾಕಿರುವ ಬ್ಯಾನರ್ ತೆರವಿಗೆ ಎಸ್ ಡಿಪಿಐ ಒತ್ತಾಯ ಮಾಡಿದೆ.

 

 

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

8 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

9 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

9 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

12 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

12 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

12 hours ago