ಉಡುಪಿ : ಬ್ರಹ್ಮಗಿರಿ ಸರ್ಕಲ್ ಹಿಂದೂ ರಾಷ್ಟ್ರ ಬ್ಯಾನರ್ ವಿಚಾರಕ್ಕೆ ಸಂಬಂಧಿಸಿದಂತೆ, ಉಡುಪಿ ಜಿಲ್ಲಾ ಎಸ್ ಡಿ ಪಿ ಐ ಸುದ್ದಿಗೋಷ್ಠಿ ನಡೆಸಿದೆ. ವಿವಾದ, ಸಮಸ್ಯೆ, ದ್ವೇಷ ಇಲ್ಲದ ರಾಜ್ಯವಾಗಿತ್ತು. ಆದರೆ, ದುರದೃಷ್ಟವಶಾತ್ ಯುಪಿ, ಎಂಪಿ, ರಾಜಸ್ತಾನದ ರೀತಿಯ ಘಟನೆಗಳು ಇಲ್ಲಿ ಆರಂಭವಾಗಿದೆ ಎಂದು ಎಸ್ ಡಿ ಪಿಐ ಉಪಾಧ್ಯಕ್ಷ ಶಾಹಿದ್ ಅಲಿ ಹೇಳಿದ್ದಾರೆ.
ಕರ್ನಾಟಕದಲ್ಲೂ ಉತ್ತರ ಭಾರತ ಮಾದರಿಯ ಘಟನೆ ಆರಂಭವಾಗಿದೆ. ಬುಲ್ಡೋಜರ್, ಹಿಜಾಬ್ ದ್ವೇಷ ಸೃಷ್ಟಿ ಉಡುಪಿಯಲ್ಲೇ ಆರಂಭವಾಯ್ತು. ಬ್ರಹ್ಮಗಿರಿಯಲ್ಲಿ ಜೈ ಹಿಂದೂ ರಾಷ್ಟ್ರದ ಬ್ಯಾನರ್ ಹಾಕಿದ್ದಾರೆ.
ಜನಪ್ರತಿನಿಧಿಗಳು ಸಂವಿಧಾನದಂತೆ ನಡೆಯುತ್ತೇವೆ ಹೇಳುತ್ತಾರೆ. ಹಿಂದೂ ರಾಷ್ಟ್ರದ ಆರ್ ಎಸ್ ಎಸ್ ಪರಿಕಲ್ಪನೆಯಾಗಿದೆ. ಹಿಂದೂ ಮತ ಪಡೆಯಲು, ಬೇರೆಯವರಿಂದ ಬೇರ್ಪಡಿಸಲು ಈ ಷಡ್ಯಂತ್ರವಾಗಿದೆ.
ಹಿಂದೂ ರಾಷ್ಟ್ರ ಕೇವಲ ಹಿಂದೂ ಮತ ಪಡೆಯುವ ಪರಿಕಲ್ಪನೆಯಾಗಿದೆ. ಎಂಟು ವರ್ಷದಿಂದ ಈ ಸರ್ಕಾರದ ಆಡಳಿತವನ್ನು ಹಿಂದೂಗಳು ನೋಡಿದ್ದಾರೆ.
ಉದ್ಯೋಗ ಇಲ್ಲದೆ ಹಿಂದೂ ಯುವಕರು ಅತ್ಮಹತ್ಯೆ ಮಾಡಿಕೊಳ್ತಿದ್ದಾರೆ. ಹಿಂದೂಗಳು ಕಷ್ಟದಲ್ಲಿದ್ದಾರೆ, ಹಾಗಾದ್ರೆ ಇದು ಯಾರ ರಾಷ್ಟ್ರ?
ಇದು ಮನುಸ್ನೃತಿ ರಾಷ್ಟ್ರ…ಬ್ರಾಹ್ಮಣ ರು ತಮ್ಮ ಕಪಿಮುಷ್ಟಿಯಲ್ಲಿ ಭಾರತ ಇಡಲು ಯತ್ನಿಸುತ್ತಿದ್ದಾರೆ.
ಶಾಂತಿಭಂಗ ಮಾಡುವ, ಜನರನ್ನು ಉದ್ರೇಕಿಸಲು ಜನರ ಮತ ಗಳಿಸಲು ಈ ಷಡ್ಯಂತ್ರವಾಗಿದೆ. ಮುಸಲ್ಮಾನರು ತಲೆ ಕೆಡಿಸಿಕೊಳ್ಳಬೇಡಿ, ಪೊಲೀಸ್ ಇಲಾಖೆ ಮೇಲೆ ವಿಶ್ವಾಸವಿದೆ. ವಿವಾದಿತ ಬ್ಯಾನರ್ ತೆರವು ಮಾಡಿ. ಪೊಲೀಸರು ಜನರ ಭರವಸೆ ಹುಸಿ ಮಾಡಬೇಡಿ. ಉಡುಪಿಯ ಉಸಿರುಗಟ್ಟುವ ವಾತಾವರಣ ತಿಳಿಗೊಳಿಸಿ ಎಂದರು.
ಕೆಲವೇ ದಿನಗಳಲ್ಲಿ ಡಿಸಿ ಕಚೇರಿ ಮುಂದೆ ಪ್ರತಿಭಟನೆ ಮಾಡ್ತೇವೆ ಎಂದರು. ಹಿಂದೂ ರಾಷ್ಟ್ರ ಎಂದು ಹಾಕಿರುವ ಬ್ಯಾನರ್ ತೆರವಿಗೆ ಎಸ್ ಡಿಪಿಐ ಒತ್ತಾಯ ಮಾಡಿದೆ.
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…