Featured

ಉಡುಪಿ: ಹಿಂದೂ ರಾಷ್ಟ್ರ ಮಾಡುವುದಾಗಿ ಬ್ಯಾನರ್ ಹಾಕಿದ ವ್ಯಕ್ತಿಗಳ ಮೇಲೆ ದೇಶದ್ರೋಹ ಪ್ರಕರಣ ದಾಖಲಿಸಿ : ಅಮೃತ್ ಶೆಣೈ – Vishwanews24

ಉಡುಪಿ: ಹಿಂದೂ ರಾಷ್ಟ್ರ ಮಾಡುವುದಾಗಿ ಬ್ಯಾನರ್ ಹಾಕಿದ ವ್ಯಕ್ತಿಗಳ ಮೇಲೆ ದೇಶದ್ರೋಹ

ಪ್ರಕರಣ ದಾಖಲಿಸಿ : ಅಮೃತ್ ಶೆಣೈ

ಉಡುಪಿ: ಉಡುಪಿಯಲ್ಲಿ ಹಿಂದೂ ರಾಷ್ಟ್ರ ಮಾಡುವುದಾಗಿ ಬ್ಯಾನರ್ ಹಾಕಿದ ವ್ಯಕ್ತಿಗಳ ಮೇಲೆ ಪೊಲೀಸರು ದೇಶದ್ರೋಹದ ಪ್ರಕರಣ ದಾಖಲಿಸಿ ಬಂಧಿಸಬೇಕು ಎಂದು ಸಹಬಾಳ್ವೆ ಉಡುಪಿ ಇದರ ಅಧ್ಯಕ್ಷರಾದ ಅಮೃತ್ ಶೆಣೈ ಅವರು ಆಗ್ರಹಿಸಿದ್ದಾರೆ.

ಕೆಲವೊಂದು ಹಿಂದೂ ಸಂಘಟನೆಗಳು ಭಾರತವನ್ನು ಹಿಂದೂ ರಾಷ್ಟ್ರ ಮಾಡಬೇಕು ಎನ್ನುವ ಬಗ್ಗೆ ನಿರಂತರ ಹೇಳಿಕೆಗಳನ್ನು ಪ್ರಚೋದನೆ ನೀಡುವ ಕೆಲಸವನ್ನು ಹಾದಿ ಬೀದಿಯಲ್ಲಿ ನೀಡುತ್ತಾ ಇದ್ದಾರೆ. ಆದರೆ ಯಾವುದೇ ಮುಸ್ಲಿಂ ನಾಯಕರು ಅಥವಾ ಸಂಘಟನೆಗಳು ಈ ದೇಶವನ್ನು ಮುಸ್ಲಿಂ ರಾಷ್ಟ್ರ ಮಾಡಬೇಕು ಎನ್ನುವ ಹೇಳಿಕೆಯನ್ನು ನೀಡಿದ್ದು ಇಲ್ಲ. ಆದರೆ ಈ ಹಿಂದೂ ಸಂಘಟನೆಗಳು ಮುಸ್ಲಿಂ ನಾಯಕರು, ಸಂಘಟನೆ ಹಾಗೂ ಹೆಚ್ಚು ಸಂಖ್ಯೆಯಲ್ಲಿ ಮುಸ್ಲಿಂ ಪ್ರಾಬಲ್ಯ ಇರುವ ರಾಜಕೀಯ ಪಕ್ಷಗಳ ಮೇಲೆ ಮುಸ್ಲಿಂ ರಾಷ್ಟ್ರ ಮಾಡುವ ಹುನ್ನಾರ ಮಾಡಿದ್ದಾರೆ ಎನ್ನುವ ಆರೋಪಗಳನ್ನು ಮಾಡುತ್ತಾರೆ. ಇಂತಹ ಸಂವಿಧಾನಬಾಹಿರ ಹೇಳಿಕೆ ನೀಡುವ ವ್ಯಕ್ತಿಗಳನ್ನು ತಕ್ಷಣ ಜೈಲಿಗೆ ಹಾಕಬೇಕು ಯಾಕಂದರೆ ನಾವು ಇರುವುದು ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಎನ್ನುವುದನ್ನು ಯಾರೂ ಕೂಡ ಮರೆಯುವಂತಿಲ್ಲ.

ಉಡುಪಿ ಜಿಲ್ಲಾ ನೂತನ ಎಸ್ ಪಿ ಆಗಿ ಅಕ್ಷಯ್ ಮಚ್ಚೇಂದ್ರ – Vishwanews24

ಕೋಮು ಸೌಹಾರ್ದತೆಗೆ ಹೆಸರಾದ ಉಡುಪಿಯಲ್ಲಿ ಯಾರೋ ಕೆಲವೊಂದು ವ್ಯಕ್ತಿಗಳು ಇದನ್ನು ಹಿಂದೂ ರಾಷ್ಟ್ರ ಮಾಡುವುದಾಗಿ ಬಹಿರಂಗವಾಗಿ ಬ್ಯಾನರ್ ಹಾಕಿರುವುದು ನಮ್ಮ ಸರ್ವ ಧರ್ಮದ ನೆಲೆಬೀಡಿದ ಭಾರತದಲ್ಲಿ ಇದ್ದು ಮಾಡಿದ ದೊಡ್ಡ ದೇಶ ದ್ರೋಹದ ಕೃತ್ಯವಾಗಿದೆ. ಈ ಬ್ಯಾನರ್ ಅಳವಡಿಸಲು ಅವಕಾಶ ನೀಡಿದ ನಗರಸಭೆಯ ಅಧಿಕಾರಿಗಳು ಅದರಲ್ಲಿ ಇರುವ ವಿಷಯ ಏನು ಎನ್ನುವುದನ್ನು ತಿಳಿದು ಪರವಾನಿಗೆ ನೀಡಿಲ್ಲ ಆದ್ದರಿಂದ ಅವರ ಮೇಲೆ ಕೂಡ ಪ್ರಕರಣ ದಾಖಲಿಸಬೇಕು. ಬ್ಯಾನರ್ ನಲ್ಲಿ ಹೆಸರಿರುವ ವ್ಯಕ್ತಿಗಳನ್ನು ಕೂಡಲೇ ಪೊಲೀಸರು ಕರೆದು ವಿಚಾರಣೆ ನಡೆಸಿ ಅವರ ಮೇಲೆ ದೇಶದ್ರೋಹದ ಪ್ರಕರಣವನ್ನು ದಾಖಲಿಸಿ ಬಂಧಿಸಬೇಕು.

ಇಂದು ಸಾಮಾಜಿಕ ಜಾಲತಾಣದಲ್ಲಿ ಏನೋ ಬರೆದಿದ್ದಾರೆ ಎಂಬ ನೆಪವೊಡ್ಡಿ ಅವರ ಮೇಲೆ ದೇಶದ್ರೋಹದ ಪ್ರಕರಣ ದಾಖಲಿಸಿ ಬಂಧಿಸಿದ ಹಲವಾರು ಉದಾಹರಣೆಗಳಿವೆ. ಆದರೆ ಅವರ ಮೇಲೆ ಹಾಕಿದ ಆರೋಪಗಳನ್ನು ಸಾಬೀತು ಮಾಡುವಲ್ಲಿ ಇಲಾಖೆ ವಿಫಲವಾಗಿದೆ. ಇದೇ ವೇಳೆ ನಿಜವಾದ ದೇಶದ್ರೋಹ ಮಾಡುವ ವ್ಯಕ್ತಿಗಳು ಇಂತಹ ಬ್ಯಾನರ್ ಹಾಕಿದವರು. ಅವರು ಸಮಾಜದಲ್ಲಿ ಬಹಿರಂಗವಾಗಿ ತಿರುಗಾಟ ಮಾಡುತ್ತಾರೆ ಅಂತಹವರನ್ನು ಕೂಡಲೇ ಬಂಧಿಸುವಂತೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬೆಂಗಳೂರು : ಮದರಸಾಗಳಲ್ಲಿ ಇನ್ಮುಂದೆ ರಾಷ್ಟ್ರಗೀತೆ ಕಡ್ಡಾಯ : ಶೀಘ್ರವೇ ಸರ್ಕಾರದ ಆದೇಶ – Vishwanews24

 

Vishwa News 24

View Comments

  • ಒಬ್ಬ ಪ್ರಾಮಾಣಿಕ ವ್ಯಕ್ತಿಗೆ ಸಹಾಯ ಮಾಡಲು ನಿಮ್ಮಿಂದ ಆಗುವುದಿಲ್ಲ ಮಾರ್ರೆ ಒಂದು ವಾದದಿಂದ ಹೇಳಿ ಹೇಳಿ ಸಾಕಾಗಿ ಹೋಗಿದೆ

Recent Posts

ಕಾರ್ಕಳ : ಯಕ್ಷರಂಗಾಯಣದ ಹೆಸರನ್ನು ಬದಲಾಯಿಸಿರುವುದು ಅತ್ಯಂತ ಬೇಜವಾಬ್ದಾರಿ ಹಾಗೂ ಏಕಪಕ್ಷೀಯ ನಿರ್ಧಾರ : ಸುನಿಲ್‌ ಕುಮಾರ್‌ ಆಕ್ರೋಶ -vishwanews24

ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್‌ ಕುಮಾರ್‌ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…

2 hours ago

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ -vishwanews24

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…

3 hours ago

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ -vishwanews24

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…

3 hours ago

ಮೂಡುಬಿದಿರೆ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ;  ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು  -vishwanews24

ಮೂಡುಬಿದಿರೆ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ;  ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು  ಮೂಡುಬಿದಿರೆ : ಚಲಿಸುತ್ತಿದ್ದ ಕಾರಿನ ಫಾಗ್ ಲೈಟ್‌ನಿಂದ ಅಕಸ್ಮಾತ್ತಾಗಿ ಬೆಂಕಿ…

5 hours ago

ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ ಕೊಡುತ್ತಾರೆ, ಕೊಡದೆ ಎಲ್ಲಿ ಹೋಗುತ್ತಾರೆ : ಪ್ರಿಯಾಂಕ ಖರ್ಗೆ -vishwanews24

ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ ಕೊಡುತ್ತಾರೆ, ಕೊಡದೆ ಎಲ್ಲಿ ಹೋಗುತ್ತಾರೆ : ಪ್ರಿಯಾಂಕ ಖರ್ಗೆ ಬೆಂಗಳೂರು: ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ…

6 hours ago

ಉಡುಪಿ : ಬಾಲಕಿ ನಾಪತ್ತೆ -vishwanews24

ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…

19 hours ago