Featured

ಉಡುಪಿ : ಹಿಂದೂ ಸಂಪ್ರದಾಯದಂತೆ ಹಸಮಣೆಯೇರಿದ ಕುಂದಾಪುರದ ಯುವಕ, ಜರ್ಮನಿಯ ಯುವತಿ – vishwanews24

ಹಿಂದೂ ಸಂಪ್ರದಾಯದಂತೆ ಹಸಮಣೆಯೇರಿದ ಕುಂದಾಪುರದ ಯುವಕ, ಜರ್ಮನಿಯ ಯುವತಿ

ಕುಂದಾಪುರ : ಕುಂದಾಪುರ ತಾಲೂಕಿನ ಆಜ್ರಿ ಮೂಲದ ಯುವಕ ಮತ್ತು ಜರ್ಮನಿಯ ಯುವತಿಯ ವಿವಾಹವೂ ಹಿಂದೂ ಸಂಪ್ರದಾಯದಂತೆ ಜ.1ರಂದು ನೆರವೇರಿತು.

ಕುಂದಾಪುರ ತಾಲೂಕಿನ ಸಿದ್ದಾಪುರ ಸಮೀಪದ ಚಿತ್ತೇರಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಇವರು ಹಸೆಮಸೆ ಏರಿದ್ದು ಎರಡೂ ಕುಟುಂಬಗಳ ಹಿರಿಯರು ಮದುವೆಗೆ ಸಾಕ್ಷಿಯಾದರು.

ಕುಂದಾಪುರ ತಾಲೂಕಿನ ಗ್ರಾಮೀಣ ಭಾಗವಾದ ಆಜ್ರಿಯ ಕರಿಮನೆ ಸುವರ್ಣ ಮತ್ತು ಪಂಜು ಪೂಜಾರಿ ದಂಪತಿಯ ಪುತ್ರ ಚಂದನ್ ಹಾಗೂ ಜರ್ಮನಿಯ ಪೆಟ್ರ ಶ್ರೂಆರ್ ಮತ್ತು ಪೀಟರ್ ಶ್ರೂಆರ್ ಮುನಿಸ್ತರ್ ಯುನಿಕಬ್ ದಂಪತಿಯ ಪುತ್ರಿ ಕಾರಿನ್ ದಾಂಪತ್ಯ ಜೀವನಕ್ಕೆ ಕಾಲಿರಿಸಿದ ನವ ಜೋಡಿ.

ಚಂದನ್ ಅವರು ಜರ್ಮನಿಯಲ್ಲಿ ಕಂಪೆನಿಯೊಂದರಲ್ಲಿ ಉದ್ಯೋಗಿಯಾಗಿದ್ದು, ಶಿಕ್ಷಕಿಯಾಗಿರುವ ಕಾರಿನ್ ಅವರನ್ನು ಪ್ರೀತಿಸುತ್ತಿದ್ದರು. ಇಬ್ಬರು ತಮ್ಮ ಪ್ರೇಮದ ಬಗ್ಗೆ ತಮ್ಮ ಕುಟುಂಬಿಕರೊಂದಿಗೆ ಮಾತುಕತೆ ಮಾಡಿದ್ದು ಎರಡು ಕುಟುಂಬಗಳು ಪರಸ್ಪರ ಚರ್ಚಿಸಿ ಮದುವೆಗೆ ಸಮ್ಮತಿಸಿದ್ದರು. ಅದರಂತೆ ಇವರ ವಿವಾಹ ನೆರವೇರಿದ್ದು, ಎರಡು ಕಡೆಯ ಬಂಧು-ಮಿತ್ರರು, ಹಿತೈಷಿಗಳು ಪಾಲ್ಗೊಂಡು ನವಜೋಡಿಗಳಿಗೆ ಶುಭಹಾರೈಸಿದರು.

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

3 days ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

3 days ago