Featured

ಉಡುಪಿ:  ಹಿಂದೂ ಸಮಾಜಕ್ಕೆ ಅವಮಾನಿಸುವ ಮೂಲಕ ವಿಪಕ್ಷಗಳ ಹಿಂದೂ ವಿರೋಧಿ ನಿಲುವು ಬಹಿರಂಗ : ಯಶ್ಪಾಲ್ ಸುವರ್ಣ ಆಕ್ರೋಶ – Vishwanews24

ಉಡುಪಿ:  ಹಿಂದೂ ಸಮಾಜಕ್ಕೆ ಅವಮಾನಿಸುವ ಮೂಲಕ ವಿಪಕ್ಷಗಳ ಹಿಂದೂ ವಿರೋಧಿ ನಿಲುವು ಬಹಿರಂಗ : ಯಶ್ಪಾಲ್ ಸುವರ್ಣ ಆಕ್ರೋಶ

ಉಡುಪಿ: ತಮಿಳುನಾಡು ಮುಖ್ಯಮಂತ್ರಿ ಪುತ್ರ, ಸಚಿವ ಉದಯನಿಧಿ ಸ್ಟಾಲಿನ್ ಭಾರತದ ಸಾಮಾಜಿಕ ವ್ಯವಸ್ಥೆಯ ಹೆಮ್ಮೆಯ ಪ್ರತೀಕವಾದ ಸನಾತನ ಧರ್ಮದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿ ಸಮಸ್ತ ಹಿಂದೂ ಸಮಾಜಕ್ಕೆ ಅವಮಾನಿಸುವ ಮೂಲಕ ಐ ಎನ್ ಡಿ ಎ ವಿಪಕ್ಷಗಳ ಒಕ್ಕೂಟದ ಹಿಂದೂ ವಿರೋಧಿ ನಿಲುವು ಬಹಿರಂಗವಾಗಿದೆ, ತನ್ನ ಓಟ್ ಬ್ಯಾಂಕ್ ರಾಜಕೀಯಕ್ಕಾಗಿ ನಿರ್ದಿಷ್ಟ ಸಮುದಾಯದ ಓಲೈಕೆಗಾಗಿ ಹಿಂದೂ ದ್ವೇಷಿ ಹೇಳಿಕೆಯ ಮೂಲಕ ಸನಾತನ ಧರ್ಮ ಅಪಮಾನಿಸಲು ಮುಂದಾಗಿದ್ದಾರೆ ಎಂದು ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಹಿಂದೆ ಬ್ರಿಟಿಷರು, ಮುಸ್ಲಿಂ ಮತಾಂಧ ರಾಜರು ಮತಾಂತರ, ದಬ್ಬಾಳಿಕೆಯ ಮೂಲಕ ಸನಾತನ ಧರ್ಮದ ನಿರ್ಮೂಲನೆಗೆ ವಿಫಲ ಪ್ರಯತ್ನಕ್ಕೆ ಮುಂದಾಗಿದ್ದರು, ಇದೀಗ ಅದೇ ಮನಸ್ಥಿತಿಯಲ್ಲಿ ಉದಯ ನಿಧಿ ಈ ಹೇಳಿಕೆಯ ಮೂಲಕ ಮಹಮ್ಮದ್ ಘೋರಿ, ಘಜನಿ ವಂಶದ ಪರಂಪರೆಯನ್ನು ಮುಂದುವರಿಸುವ ಕಾಯಕದಲ್ಲಿ ತೊಡಗಿದ್ದಾರೆ.

ಸನಾತನ ಧರ್ಮ ಕೇವಲ ಒಂದು ಧರ್ಮವಾಗಿರದೇ ಭಾರತದ ಜನರ ಜೀವನ ಪದ್ಧತಿಯಾಗಿದ್ದು, ಕೇವಲ ಅಲ್ಪ ಸಂಖ್ಯಾತ ಓಲೈಕೆ, ಕ್ರೈಸ್ತ ಮತಾಂತರ ಸಂಸ್ಥೆಗಳ ಹಿಡನ್ ಅಜೆಂಡಾದ ಟೂಲ್ ಕಿಟ್ ಭಾಗವಾಗಿ ಉದಯನಿಧಿ ಬಹು ಸಂಖ್ಯಾತ ಹಿಂದೂ ದ್ವೇಷಿ ನಿಲುವು ತಾಳಿ ಓರ್ವ ಜವಾಬ್ದಾರಿ ಸಚಿವನಾಗಿ ಸಂವಿಧಾನದ ಆಶಯಗಳನ್ನು ಗಾಳಿಗೆ ತೂರಿದ್ದಾರೆ.

ಉದಯನಿಧಿ ಹೇಳಿಕೆಗೆ ಐ ಎನ್ ಡಿ ಎ ಒಕ್ಕೂಟದ ಕಾಂಗ್ರೆಸ್ ಸಹಿತ ವಿವಿಧ ಪಕ್ಷಗಳು ದಿವ್ಯ ಮೌನ ತಾಳುವ ಮೂಲಕ ಪರೋಕ್ಷವಾಗಿ ತಮ್ಮ ಸಹಮತ ಸೂಚಿಸಿ ಹಿಂದೂ ವಿರೋಧಿ ಹೇಳಿಕೆಗೆ ಸಮ್ಮತಿ ಸೂಚಿಸಿದೆ. ವಿಪಕ್ಷ ನಾಯಕರು ತಮ್ಮ ನಿಲುವನ್ನು ಕೂಡಲೇ ಸ್ಪಷ್ಟ ಪಡಿಸಬೇಕು, ತಮಿಳುನಾಡು ಸರ್ಕಾರ ಹಿಂದೂ ವಿರೋಧಿ ಹೇಳಿಕೆ ನೀಡಿದ ಉದಯನಿಧಿ ಯನ್ನು ಕೂಡಲೇ ಮಂತ್ರಿ ಸ್ಥಾನದಿಂದ ವಜಾಗೊಳಿಸಿ ಕಾನೂನು ಕ್ರಮ ಕೈಗೊಳ್ಳಬೇಕು, ತಪ್ಪಿದಲ್ಲಿ ಮುಂದಿನ ದಿನಗಳಲ್ಲಿ ಜನತೆ ಚುನಾವಣೆಯಲ್ಲಿ ತಕ್ಕ ಉತ್ತರ ನೀಡಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಬೈಕಂಪಾಡಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ – vishwanews24

ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…

18 hours ago

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  – vishwanews24

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…

18 hours ago

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ – vishwanews24

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್​​ ಕಲಾಪ…

19 hours ago

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು – vishwanews24

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…

19 hours ago

ಹಿಂದೂ ಸಂಘಟನೆಗಳ ಮುಖಂಡರಿಗೆ ಜಿಲ್ಲೆ ಪ್ರವೇಶ ನಿಷೇಧ: ಉಡುಪಿ ಜಿಲ್ಲಾ ವಿಹಿಂಪ–ಬಜರಂಗದಳ ತೀವ್ರ ಖಂಡನೆ – vishwanews24

ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…

19 hours ago

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರ ಪ್ರವೇಶ ನಿರ್ಬಂಧ: ವಿಹಿಂಪ ಖಂಡನೆ – vishwanews24

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…

20 hours ago