ಉಡುಪಿ: ಕುಂದಾಪುರ ಸರ್ಕಾರಿ ಪದವಿಪೂರ್ವ ಕಾಲೇಜಿನ ಹಿಜಬ್ ವಿವಾದ ತಾರಕಕ್ಕೇರಿದೆ. ನಿನ್ನೆ ಗೇಟಿನ ಹೊರಗೆ ನಿಲ್ಲಿಸಿದ್ದ ವಿದ್ಯಾರ್ಥಿನಿಯರನ್ನು ಕಾಲೇಜಿನ ಮೈದಾನದವರೆಗೆ ಆಡಳಿತ ಮಂಡಳಿ ಬಿಟ್ಟುಕೊಂಡಿದೆ.
ತರಗತಿಯಲ್ಲಿ ಕುಳಿತುಕೊಳ್ಳಲು ಅವಕಾಶ ಕೊಡುವಂತೆ ಪ್ರಾಂಶುಪಾಲರಿಗೆ ಹಿಜಬ್ ವಿದ್ಯಾರ್ಥಿನೀಯರು ಒತ್ತಾಯ ಮಾಡಿದ್ದಾರೆ. ಸರ್ಕಾರದ ಆದೇಶ ಏನು ಎಂಬುದನ್ನು ಕಾಲೇಜಿನ ಮಹಿಳಾ ಉಪನ್ಯಾಸಕರು ವಿದ್ಯಾರ್ಥಿನಿಯರಿಗೆ ಮನದಟ್ಟು ಮಾಡಲು ಯತ್ನಿಸಿದರು.
ಇವತ್ತು ವಿದ್ಯಾರ್ಥಿನಿಯರು ಪೋಷಕರನ್ನು ಕಾಲೇಜಿಗೆ ಕರೆದುಕೊಂಡು ಬಂದಿದ್ದಾರೆ. ಪೋಷಕರಿಗೆ ಕಾಲೇಜಿನ ಕಂಪೌಂಡ್ ಒಳಗೆ ಪ್ರವೇಶಾವಕಾಶವನ್ನು ಕೊಟ್ಟಿಲ್ಲ. ಪ್ರಾಂಶುಪಾಲರು ಕಾಲೇಜಿನ ಗೇಟಿಗೆ ಬೀಗ ಹಾಕಿ ಪೋಷಕರನ್ನು ಹೊರಗೆ ನಿಲ್ಲಿಸಿದ್ದಾರೆ.
ಪೋಷಕರು, ಉಪನ್ಯಾಸಕರು, ವಿದ್ಯಾರ್ಥಿಗಳ ವಾಗ್ವಾದಗಳು ನಡೆಯುತ್ತಿದ್ದಂತೆ, ಕುಂದಾಪುರ ಸರ್ಕಲ್ ಇನ್ಸ್ ಪೆಕ್ಟರ್ ಶ್ರೀಕಾಂತ್ ಪೋಷಕರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಪ್ರತಿಭಟನೆ ನಡೆಸಿದರೆ ಎಫ್ಐಆರ್ ದಾಖಲಿಸುವ ಎಚ್ಚರಿಕೆ ನೀಡಿದರು. ಹೊರಗಡೆ ಈ ಗಲಾಟೆಗಳು ನಡೆಯುತ್ತಿದ್ದರೆ ತರಗತಿಗಳಲ್ಲಿ ಎಂದಿನಂತೆ ಪಾಠ ನಡೆಯುತ್ತಿವೆ.
ಇದನ್ನೂ ಓದಿ :
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…
ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ : ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…