ಉಡುಪಿ: ಕುಂದಾಪುರ ಸರ್ಕಾರಿ ಪದವಿಪೂರ್ವ ಕಾಲೇಜಿನ ಹಿಜಬ್ ವಿವಾದ ತಾರಕಕ್ಕೇರಿದೆ. ನಿನ್ನೆ ಗೇಟಿನ ಹೊರಗೆ ನಿಲ್ಲಿಸಿದ್ದ ವಿದ್ಯಾರ್ಥಿನಿಯರನ್ನು ಕಾಲೇಜಿನ ಮೈದಾನದವರೆಗೆ ಆಡಳಿತ ಮಂಡಳಿ ಬಿಟ್ಟುಕೊಂಡಿದೆ.
ತರಗತಿಯಲ್ಲಿ ಕುಳಿತುಕೊಳ್ಳಲು ಅವಕಾಶ ಕೊಡುವಂತೆ ಪ್ರಾಂಶುಪಾಲರಿಗೆ ಹಿಜಬ್ ವಿದ್ಯಾರ್ಥಿನೀಯರು ಒತ್ತಾಯ ಮಾಡಿದ್ದಾರೆ. ಸರ್ಕಾರದ ಆದೇಶ ಏನು ಎಂಬುದನ್ನು ಕಾಲೇಜಿನ ಮಹಿಳಾ ಉಪನ್ಯಾಸಕರು ವಿದ್ಯಾರ್ಥಿನಿಯರಿಗೆ ಮನದಟ್ಟು ಮಾಡಲು ಯತ್ನಿಸಿದರು.
ಇವತ್ತು ವಿದ್ಯಾರ್ಥಿನಿಯರು ಪೋಷಕರನ್ನು ಕಾಲೇಜಿಗೆ ಕರೆದುಕೊಂಡು ಬಂದಿದ್ದಾರೆ. ಪೋಷಕರಿಗೆ ಕಾಲೇಜಿನ ಕಂಪೌಂಡ್ ಒಳಗೆ ಪ್ರವೇಶಾವಕಾಶವನ್ನು ಕೊಟ್ಟಿಲ್ಲ. ಪ್ರಾಂಶುಪಾಲರು ಕಾಲೇಜಿನ ಗೇಟಿಗೆ ಬೀಗ ಹಾಕಿ ಪೋಷಕರನ್ನು ಹೊರಗೆ ನಿಲ್ಲಿಸಿದ್ದಾರೆ.
ಪೋಷಕರು, ಉಪನ್ಯಾಸಕರು, ವಿದ್ಯಾರ್ಥಿಗಳ ವಾಗ್ವಾದಗಳು ನಡೆಯುತ್ತಿದ್ದಂತೆ, ಕುಂದಾಪುರ ಸರ್ಕಲ್ ಇನ್ಸ್ ಪೆಕ್ಟರ್ ಶ್ರೀಕಾಂತ್ ಪೋಷಕರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಪ್ರತಿಭಟನೆ ನಡೆಸಿದರೆ ಎಫ್ಐಆರ್ ದಾಖಲಿಸುವ ಎಚ್ಚರಿಕೆ ನೀಡಿದರು. ಹೊರಗಡೆ ಈ ಗಲಾಟೆಗಳು ನಡೆಯುತ್ತಿದ್ದರೆ ತರಗತಿಗಳಲ್ಲಿ ಎಂದಿನಂತೆ ಪಾಠ ನಡೆಯುತ್ತಿವೆ.
ಇದನ್ನೂ ಓದಿ :
ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…
ಮಂಗಳೂರು ವಿಮಾನ ನಿಲ್ದಾಣದಲ್ಲಿ 'ಉಬರ್' ಸೇವೆ ಆರಂಭ ಪ್ರಯಾಣಿಕರಿಗೆ ವೇಗವಾದ ಮತ್ತು ಸುಲಭ ಸಾರಿಗೆ ಸೌಲಭ್ಯ ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ…
ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…
ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ; ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…
ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…
246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…