Featured

ಉಡುಪಿ : ಹಿಜಬ್ ಹೋರಾಟದಲ್ಲಿ ವಿದ್ಯಾರ್ಥಿನಿಯರನ್ನು ಬೆಂಬಲಿಸಿದ್ದಕ್ಕೆ ನಮ್ಮ ಅಂಗಡಿ ತೆರವು : ಎಸ್‍ಡಿಪಿಐ ಜಿಲ್ಲಾಧ್ಯಕ್ಷ ನಜೀರ್

ಬಿಜೆಪಿಯ ವಿರುದ್ಧ ಹೋದದ್ದಕ್ಕೆ ಅಂಗಡಿ ತೆರವು ಮಾಡಿದ್ದಾರೆ..

ಅಂಗಡಿ ತೆರವುಗೊಳಿಸಿರಬಹುದು ನಮ್ಮ ಹೋರಾಟ ಮುಚ್ಚಿಸಲು ಸಾಧ್ಯವಿಲ್ಲ..

ಕರ್ನಾಟಕ ಬಂದ್ ಇವರ ನಿದ್ದೆಗೆಡಿಸಿರಬೇಕು , ನಿರಂತರ ಬಂದ್ ಮಾಡಿಸುವ ಪ್ಲ್ಯಾನ್..

ನ್ಯಾಯ ಅಂತ ಹೇಳಿದ ಮೇಲೆ ಎಲ್ಲರಿಗೂ ಒಂದೇ ಕಾನೂನು ಜಾರಿಯಾಗಬೇಕು..

ಉಡುಪಿ: ಹಿಜಬ್ ಹೋರಾಟದಲ್ಲಿ ವಿದ್ಯಾರ್ಥಿನಿಯರನ್ನು ಬೆಂಬಲಿಸಿದ್ದಕ್ಕೆ ನಮ್ಮ ಅಂಗಡಿಯನ್ನು ತೆರವು ಮಾಡಿದ್ದಾರೆ. ಸಂವಿಧಾನ ಬದ್ಧ ಹೋರಾಟವನ್ನು ಮುಂದೆಯೂ ಬೆಂಬಲಿಸುವುದಾಗಿ ಉಡುಪಿ ಎಸ್‍ಡಿಪಿಐ ಜಿಲ್ಲಾಧ್ಯಕ್ಷ ನಜೀರ್ ಅಹಮ್ಮದ್ ಹೇಳಿದ್ದಾರೆ.

ಮಾತನಾಡಿದ ನಜೀರ್, ಅಂಗಡಿ ತೆರವುಗೊಳಿಸಿರಬಹುದು ನಮ್ಮ ಹೋರಾಟ ಮುಚ್ಚಿಸಲು ಸಾಧ್ಯವಿಲ್ಲ. ನಮ್ಮನ್ನು ಹದ್ದುಬಸ್ತಿನಲ್ಲಿಡುವ ವ್ಯವಸ್ಥೆಯಾಗುತ್ತಿದೆ. ಬಿಜೆಪಿಯ ವಿರುದ್ಧ ಹೋದದ್ದಕ್ಕೆ ಅಂಗಡಿ ತೆರವು ಮಾಡಿದ್ದಾರೆ. ಕರ್ನಾಟಕ ಬಂದ್ ಇವರ ನಿದ್ದೆಗೆಡಿಸಿರಬೇಕು. ನಿರಂತರ ಬಂದ್ ಮಾಡಿಸುವ ಪ್ಲ್ಯಾನ್ ಇರಬಹುದು ಎಂದರು.

ತಿಂಗಳಿಗೆ 2 ಲಕ್ಷ ರುಪಾಯಿ ಬಾಡಿಗೆಯನ್ನು ಮಸೀದಿಗೆ ಕೊಡುತ್ತಿದ್ದೆವು. ಸರ್ಕಾರಕ್ಕೆ 37 ಸಾವಿರ ರುಪಾಯಿ ಜಿಎಸ್‍ಟಿ ಕಟ್ಟುತ್ತಿದ್ದೆವು. ಪರವಾನಿಗೆ ಪಡೆಯಲು ಕಡತಗಳಿಗೆ ಹಣ ಖರ್ಚು ಮಾಡಿದ್ದೇವೆ. ಹಿಜಬ್ ಹೋರಾಟದಲ್ಲಿ ಮಕ್ಕಳಿಗೆ ಸಂವಿಧಾನಬದ್ಧ ಹಕ್ಕು ಸಿಗಲೇಬೇಕು. ನಾವಾಗಿಯೇ ವಿವಾದ ಸೃಷ್ಟಿ ಮಾಡಿಲ್ಲ. ಸಂವಿಧಾನಬದ್ಧ ಹಕ್ಕು ಒದಗಿಸಲು ನಾವು ಸಹಾಯ ಮಾಡಿಯೇ ಮಾಡುತ್ತೇವೆ. ನಗರಸಭೆ ಅಧಿಕಾರಿಗಳಿಗೆ ಬಿಜೆಪಿಯವರ ಒತ್ತಡ ಇದೆ. ನಗರಸಭೆಯ ಸಭೆಯಲ್ಲಿ ಈ ಬಗ್ಗೆ ಚರ್ಚೆಯಾಗಿದೆ ಎಂದು ಬೇಸರ ಹೊರ ಹಾಕಿದ್ದಾರೆ.

ಉಡುಪಿಯಲ್ಲಿ ಹಲವಾರು ಅಕ್ರಮ ಕಟ್ಟಡಗಳು ಇವೆ. ಎಲ್ಲಾ ಕಟ್ಟಡಗಳನ್ನು ತರವು ಮಾಡುತ್ತಾರಾ? ನ್ಯಾಯ ಅಂತ ಹೇಳಿದ ಮೇಲೆ ಎಲ್ಲರಿಗೂ ಒಂದೇ ಕಾನೂನು ಜಾರಿಯಾಗಬೇಕು. ಒಂದು ಅಂಗಡಿಗೆ ಡೋರ್ ನಂಬರ್ ಇದೆ ಇನ್ನೊಂದಕ್ಕೆ ಇಲ್ಲ. ಅಂಗಡಿ ಪರವಾನಿಗೆಗೆ ನಾವು ಓಡಾಡುತ್ತಿದ್ದೆವು ಎಂದು ಹೇಳಿದರು.

Vishwa News 24

Recent Posts

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ – vishwanews24

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…

23 hours ago

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು – vishwanews24

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…

1 day ago

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ – vishwanews24

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…

1 day ago

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ – vishwanews24

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…

1 day ago

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ – vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…

1 day ago

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

3 days ago