ಉಡುಪಿ: ಹಿಜಬ್ ಹೋರಾಟದಲ್ಲಿ ವಿದ್ಯಾರ್ಥಿನಿಯರನ್ನು ಬೆಂಬಲಿಸಿದ್ದಕ್ಕೆ ನಮ್ಮ ಅಂಗಡಿಯನ್ನು ತೆರವು ಮಾಡಿದ್ದಾರೆ. ಸಂವಿಧಾನ ಬದ್ಧ ಹೋರಾಟವನ್ನು ಮುಂದೆಯೂ ಬೆಂಬಲಿಸುವುದಾಗಿ ಉಡುಪಿ ಎಸ್ಡಿಪಿಐ ಜಿಲ್ಲಾಧ್ಯಕ್ಷ ನಜೀರ್ ಅಹಮ್ಮದ್ ಹೇಳಿದ್ದಾರೆ.
ಮಾತನಾಡಿದ ನಜೀರ್, ಅಂಗಡಿ ತೆರವುಗೊಳಿಸಿರಬಹುದು ನಮ್ಮ ಹೋರಾಟ ಮುಚ್ಚಿಸಲು ಸಾಧ್ಯವಿಲ್ಲ. ನಮ್ಮನ್ನು ಹದ್ದುಬಸ್ತಿನಲ್ಲಿಡುವ ವ್ಯವಸ್ಥೆಯಾಗುತ್ತಿದೆ. ಬಿಜೆಪಿಯ ವಿರುದ್ಧ ಹೋದದ್ದಕ್ಕೆ ಅಂಗಡಿ ತೆರವು ಮಾಡಿದ್ದಾರೆ. ಕರ್ನಾಟಕ ಬಂದ್ ಇವರ ನಿದ್ದೆಗೆಡಿಸಿರಬೇಕು. ನಿರಂತರ ಬಂದ್ ಮಾಡಿಸುವ ಪ್ಲ್ಯಾನ್ ಇರಬಹುದು ಎಂದರು.
ತಿಂಗಳಿಗೆ 2 ಲಕ್ಷ ರುಪಾಯಿ ಬಾಡಿಗೆಯನ್ನು ಮಸೀದಿಗೆ ಕೊಡುತ್ತಿದ್ದೆವು. ಸರ್ಕಾರಕ್ಕೆ 37 ಸಾವಿರ ರುಪಾಯಿ ಜಿಎಸ್ಟಿ ಕಟ್ಟುತ್ತಿದ್ದೆವು. ಪರವಾನಿಗೆ ಪಡೆಯಲು ಕಡತಗಳಿಗೆ ಹಣ ಖರ್ಚು ಮಾಡಿದ್ದೇವೆ. ಹಿಜಬ್ ಹೋರಾಟದಲ್ಲಿ ಮಕ್ಕಳಿಗೆ ಸಂವಿಧಾನಬದ್ಧ ಹಕ್ಕು ಸಿಗಲೇಬೇಕು. ನಾವಾಗಿಯೇ ವಿವಾದ ಸೃಷ್ಟಿ ಮಾಡಿಲ್ಲ. ಸಂವಿಧಾನಬದ್ಧ ಹಕ್ಕು ಒದಗಿಸಲು ನಾವು ಸಹಾಯ ಮಾಡಿಯೇ ಮಾಡುತ್ತೇವೆ. ನಗರಸಭೆ ಅಧಿಕಾರಿಗಳಿಗೆ ಬಿಜೆಪಿಯವರ ಒತ್ತಡ ಇದೆ. ನಗರಸಭೆಯ ಸಭೆಯಲ್ಲಿ ಈ ಬಗ್ಗೆ ಚರ್ಚೆಯಾಗಿದೆ ಎಂದು ಬೇಸರ ಹೊರ ಹಾಕಿದ್ದಾರೆ.
ಉಡುಪಿಯಲ್ಲಿ ಹಲವಾರು ಅಕ್ರಮ ಕಟ್ಟಡಗಳು ಇವೆ. ಎಲ್ಲಾ ಕಟ್ಟಡಗಳನ್ನು ತರವು ಮಾಡುತ್ತಾರಾ? ನ್ಯಾಯ ಅಂತ ಹೇಳಿದ ಮೇಲೆ ಎಲ್ಲರಿಗೂ ಒಂದೇ ಕಾನೂನು ಜಾರಿಯಾಗಬೇಕು. ಒಂದು ಅಂಗಡಿಗೆ ಡೋರ್ ನಂಬರ್ ಇದೆ ಇನ್ನೊಂದಕ್ಕೆ ಇಲ್ಲ. ಅಂಗಡಿ ಪರವಾನಿಗೆಗೆ ನಾವು ಓಡಾಡುತ್ತಿದ್ದೆವು ಎಂದು ಹೇಳಿದರು.
ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…
ಉಡುಪಿ : ಮಲಬಾರ್ ಗೋಲ್ಡ್ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ ಉಡುಪಿ : ಮಲಬಾರ್…
ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…
ಪ್ರಧಾನಿ ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…
ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…
ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…