Featured

ಉಡುಪಿ : ಹಿಜಬ್ ಹೋರಾಟದಲ್ಲಿ ವಿದ್ಯಾರ್ಥಿನಿಯರನ್ನು ಬೆಂಬಲಿಸಿದ್ದಕ್ಕೆ ನಮ್ಮ ಅಂಗಡಿ ತೆರವು : ಎಸ್‍ಡಿಪಿಐ ಜಿಲ್ಲಾಧ್ಯಕ್ಷ ನಜೀರ್

ಬಿಜೆಪಿಯ ವಿರುದ್ಧ ಹೋದದ್ದಕ್ಕೆ ಅಂಗಡಿ ತೆರವು ಮಾಡಿದ್ದಾರೆ..

ಅಂಗಡಿ ತೆರವುಗೊಳಿಸಿರಬಹುದು ನಮ್ಮ ಹೋರಾಟ ಮುಚ್ಚಿಸಲು ಸಾಧ್ಯವಿಲ್ಲ..

ಕರ್ನಾಟಕ ಬಂದ್ ಇವರ ನಿದ್ದೆಗೆಡಿಸಿರಬೇಕು , ನಿರಂತರ ಬಂದ್ ಮಾಡಿಸುವ ಪ್ಲ್ಯಾನ್..

ನ್ಯಾಯ ಅಂತ ಹೇಳಿದ ಮೇಲೆ ಎಲ್ಲರಿಗೂ ಒಂದೇ ಕಾನೂನು ಜಾರಿಯಾಗಬೇಕು..

ಉಡುಪಿ: ಹಿಜಬ್ ಹೋರಾಟದಲ್ಲಿ ವಿದ್ಯಾರ್ಥಿನಿಯರನ್ನು ಬೆಂಬಲಿಸಿದ್ದಕ್ಕೆ ನಮ್ಮ ಅಂಗಡಿಯನ್ನು ತೆರವು ಮಾಡಿದ್ದಾರೆ. ಸಂವಿಧಾನ ಬದ್ಧ ಹೋರಾಟವನ್ನು ಮುಂದೆಯೂ ಬೆಂಬಲಿಸುವುದಾಗಿ ಉಡುಪಿ ಎಸ್‍ಡಿಪಿಐ ಜಿಲ್ಲಾಧ್ಯಕ್ಷ ನಜೀರ್ ಅಹಮ್ಮದ್ ಹೇಳಿದ್ದಾರೆ.

ಮಾತನಾಡಿದ ನಜೀರ್, ಅಂಗಡಿ ತೆರವುಗೊಳಿಸಿರಬಹುದು ನಮ್ಮ ಹೋರಾಟ ಮುಚ್ಚಿಸಲು ಸಾಧ್ಯವಿಲ್ಲ. ನಮ್ಮನ್ನು ಹದ್ದುಬಸ್ತಿನಲ್ಲಿಡುವ ವ್ಯವಸ್ಥೆಯಾಗುತ್ತಿದೆ. ಬಿಜೆಪಿಯ ವಿರುದ್ಧ ಹೋದದ್ದಕ್ಕೆ ಅಂಗಡಿ ತೆರವು ಮಾಡಿದ್ದಾರೆ. ಕರ್ನಾಟಕ ಬಂದ್ ಇವರ ನಿದ್ದೆಗೆಡಿಸಿರಬೇಕು. ನಿರಂತರ ಬಂದ್ ಮಾಡಿಸುವ ಪ್ಲ್ಯಾನ್ ಇರಬಹುದು ಎಂದರು.

ತಿಂಗಳಿಗೆ 2 ಲಕ್ಷ ರುಪಾಯಿ ಬಾಡಿಗೆಯನ್ನು ಮಸೀದಿಗೆ ಕೊಡುತ್ತಿದ್ದೆವು. ಸರ್ಕಾರಕ್ಕೆ 37 ಸಾವಿರ ರುಪಾಯಿ ಜಿಎಸ್‍ಟಿ ಕಟ್ಟುತ್ತಿದ್ದೆವು. ಪರವಾನಿಗೆ ಪಡೆಯಲು ಕಡತಗಳಿಗೆ ಹಣ ಖರ್ಚು ಮಾಡಿದ್ದೇವೆ. ಹಿಜಬ್ ಹೋರಾಟದಲ್ಲಿ ಮಕ್ಕಳಿಗೆ ಸಂವಿಧಾನಬದ್ಧ ಹಕ್ಕು ಸಿಗಲೇಬೇಕು. ನಾವಾಗಿಯೇ ವಿವಾದ ಸೃಷ್ಟಿ ಮಾಡಿಲ್ಲ. ಸಂವಿಧಾನಬದ್ಧ ಹಕ್ಕು ಒದಗಿಸಲು ನಾವು ಸಹಾಯ ಮಾಡಿಯೇ ಮಾಡುತ್ತೇವೆ. ನಗರಸಭೆ ಅಧಿಕಾರಿಗಳಿಗೆ ಬಿಜೆಪಿಯವರ ಒತ್ತಡ ಇದೆ. ನಗರಸಭೆಯ ಸಭೆಯಲ್ಲಿ ಈ ಬಗ್ಗೆ ಚರ್ಚೆಯಾಗಿದೆ ಎಂದು ಬೇಸರ ಹೊರ ಹಾಕಿದ್ದಾರೆ.

ಉಡುಪಿಯಲ್ಲಿ ಹಲವಾರು ಅಕ್ರಮ ಕಟ್ಟಡಗಳು ಇವೆ. ಎಲ್ಲಾ ಕಟ್ಟಡಗಳನ್ನು ತರವು ಮಾಡುತ್ತಾರಾ? ನ್ಯಾಯ ಅಂತ ಹೇಳಿದ ಮೇಲೆ ಎಲ್ಲರಿಗೂ ಒಂದೇ ಕಾನೂನು ಜಾರಿಯಾಗಬೇಕು. ಒಂದು ಅಂಗಡಿಗೆ ಡೋರ್ ನಂಬರ್ ಇದೆ ಇನ್ನೊಂದಕ್ಕೆ ಇಲ್ಲ. ಅಂಗಡಿ ಪರವಾನಿಗೆಗೆ ನಾವು ಓಡಾಡುತ್ತಿದ್ದೆವು ಎಂದು ಹೇಳಿದರು.

Vishwa News 24

Recent Posts

ಇನ್ನು ಮುಂದೆ ಫೋನ್ ನಂಬರ್ ನೀಡದೇ ಚಾಟ್ ಮಾಡಬಹುದು : ಏನಿದು ವಾಟ್ಸಪ್‌ ಹೊಸ ಬದಲಾವಣೆ ? – vishwanews24

ಇನ್ನು ಮುಂದೆ ಫೋನ್ ನಂಬರ್ ನೀಡದೇ ಚಾಟ್ ಮಾಡಬಹುದು : ಏನಿದು ವಾಟ್ಸಪ್‌ ಹೊಸ ಬದಲಾವಣೆ ? ಕ್ಯಾಲಿಫೋರ್ನಿಯಾ :…

39 minutes ago

ಬೆಂಗಳೂರು- ಮಂಗಳೂರು ಚತುಷ್ಪಥ ರೈಲು ಮಾರ್ಗ ಯೋಜನೆ ಅಭಿವೃದ್ದಿ: ಸೋಮಣ್ಣ – vishwanews24

ಬೆಂಗಳೂರು- ಮಂಗಳೂರು ಚತುಷ್ಪಥ ರೈಲು ಮಾರ್ಗ ಯೋಜನೆ ಅಭಿವೃದ್ದಿ: ಸೋಮಣ್ಣ ಬೆಂಗಳೂರು: ಬೆಂಗಳೂರಿನಿಂದ 100 ಕಿ.ಮೀ. ಸುತ್ತಮುತ್ತ ಇರುವ ನಗರಗಳಿಗೆ…

56 minutes ago

ಮಂಗಳೂರು: ಮಸೀದಿಗೆ ತೆರಳಿದ್ದ ವ್ಯಕ್ತಿ ನಾಪತ್ತೆ ; ಗುರುಪುರ ಸೇತುವೆ ಮೇಲೆ ಸ್ಕೂಟರ್ ಪತ್ತೆ – vishwanews24

ಮಂಗಳೂರು: ಮಸೀದಿಗೆ ತೆರಳಿದ್ದ ವ್ಯಕ್ತಿ ನಾಪತ್ತೆ ; ಗುರುಪುರ ಸೇತುವೆ ಮೇಲೆ ಸ್ಕೂಟರ್ ಪತ್ತೆ  - ಫಲ್ಗುಣಿ ನದಿಯಲ್ಲಿ ಶೋಧ…

1 hour ago

ಉಳ್ಳಾಲ: ಕೆರೆಬೈಲ್ ಗುಡ್ಡೆಯಲ್ಲಿ ಮನೆ ಮೇಲೆ ಕುಸಿದ ಕಾಂಪೌಂಡ್ ಹಾಲ್: ತಪ್ಪಿದ ಭಾರೀ ದುರಂತ – vishwanews24

ಉಳ್ಳಾಲ: ಕೆರೆಬೈಲ್ ಗುಡ್ಡೆಯಲ್ಲಿ ಮನೆ ಮೇಲೆ ಕುಸಿದ ಕಾಂಪೌಂಡ್ ಹಾಲ್: ತಪ್ಪಿದ ಭಾರೀ ದುರಂತ ಉಳ್ಳಾಲ: ಕಳೆದೆರಡು ದಿನಗಳಿಂದ ಸುರಿಯುತ್ತಿರುವ…

1 hour ago

ನಾಗುರಿ ದುರಂತ – ಕಳಪೆ ಕಾಮಗಾರಿಯ ಶಂಕೆ : ತಪ್ಪಿತಸ್ಥರ ವಿರುದ್ಧ ಪ್ರಕರಣ ದಾಖಲಿಸಲು ಆದೇಶ – vishwanews24

ನಾಗುರಿ ದುರಂತ - ಕಳಪೆ ಕಾಮಗಾರಿಯ ಶಂಕೆ : ತಪ್ಪಿತಸ್ಥರ ವಿರುದ್ಧ ಪ್ರಕರಣ ದಾಖಲಿಸಲು ಆದೇಶ ಮಂಗಳೂರು: ನಾಗುರಿಯಲ್ಲಿ ಮನೆ…

2 hours ago

ನಕಲಿ ಪಾಸ್‌ಪೋರ್ಟ್‌ ಪ್ರಕರಣ: ಮಂಗಳೂರು ಟ್ರಾವೆಲ್‌ ಏಜೆಂಟ್‌ ವಿರುದ್ಧದ ಪ್ರಕರಣ ರದ್ದತಿಗೆ ಹೈಕೋರ್ಟ್ ನಕಾರ – vishwanews24

ನಕಲಿ ಪಾಸ್‌ಪೋರ್ಟ್‌ ಪ್ರಕರಣ: ಮಂಗಳೂರು ಟ್ರಾವೆಲ್‌ ಏಜೆಂಟ್‌ ವಿರುದ್ಧದ ಪ್ರಕರಣ ರದ್ದತಿಗೆ ಹೈಕೋರ್ಟ್ ನಕಾರ ಬೆಂಗಳೂರು: ಆಂಧ್ರಪ್ರದೇಶದ ಭಯೋತ್ಪಾದನಾ ನಿಗ್ರಹ…

2 hours ago