ಉಡುಪಿ

ಉಡುಪಿ : ಹಿಜಬ್ ಹೋರಾಟದ ವಿದ್ಯಾರ್ಥಿಗಳಿಗೆ ಆಲ್‍ಖೈದಾ ಬೆಂಬಲ ; ವಿದ್ಯಾರ್ಥಿಗಳು ಟೆರೆರಿಸ್ಟ್ ಸಂಘಟನೆಯ ಸದಸ್ಯರು ಎಂದು ಸಾಬೀತು : ಯಶ್‌ಪಾಲ್ ಸುವರ್ಣ – VIshwanews24

ಹಿಜಬ್ ಹೋರಾಟದ ವಿದ್ಯಾರ್ಥಿಗಳಿಗೆ ಆಲ್‍ಖೈದಾ ಬೆಂಬಲ ; ವಿದ್ಯಾರ್ಥಿಗಳು ಟೆರೆರಿಸ್ಟ್ ಸಂಘಟನೆಯ ಸದಸ್ಯರು ಎಂದು ಸಾಬೀತು : ಯಶ್‌ಪಾಲ್ ಸುವರ್ಣ

ಉಡುಪಿ: ಉಡುಪಿಯಲ್ಲಿ ಹಿಜಾಬ್ ಸಂಘರ್ಷಕ್ಕೆ ಕಾರಣರಾದ 6 ಮಂದಿ ವಿದ್ಯಾರ್ಥಿಗಳನ್ನು ಆಲ್‍ಖೈದಾ ನಾಯಕರು ಬೆಂಬಲಿಸುತ್ತಿರುವುದು ನೋಡಿದರೆ ಈ ವಿದ್ಯಾರ್ಥಿಗಳು ಮತ್ತೆ ಟೆರೆರಿಸ್ಟ್ ಸಂಘಟನೆಯ ಸದಸ್ಯರು ಎನ್ನುವುದನ್ನು ಸಾಬೀತು ಮಾಡಿದ್ದಾರೆ ಎಂದು ಉಡುಪಿ ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜಿನ ಉಪಾಧ್ಯಕ್ಷ ಯಶ್ ಪಾಲ್ ಸುವರ್ಣ ಹೇಳಿದ್ದಾರೆ.

ಈ ಕುರಿತಾಗಿ ಇಂದು ಮಾತನಾಡಿರುವ ಅವರು, ಈ 6 ಜನ ವಿದ್ಯಾರ್ಥಿಗಳನ್ನು ಭಯೋತ್ಪಾಕ ಸಂಘಟನೆಗಳು ಪ್ರೋತ್ಸಾಹಿಸುತ್ತಿದೆ ಎಂದು ಹೇಳಿದ್ದೆ. ಇದೀಗ ಮತ್ತೆ ಈ ವಿದ್ಯಾರ್ಥಿಗಳನ್ನು ಆಲ್ ಖೈದ ನಾಯಕರು ಬೆಂಬಲಿಸಿದ್ದು, ಈ ವಿದ್ಯಾರ್ಥಿಗಳು ಮತ್ತೆ ಟೆರೆರಿಸ್ಟ್ ಸಂಘಟನೆಯ ಸದಸ್ಯರು ಎಂದು ಸಾಬೀತಾಗಿದೆ. ಈ ವಿದ್ಯಾರ್ಥಿಗಳು, ಅವರ ಪೋಷಕರು ಹಾಗೂ ಅವರಿಗೆ ಸಹಕರಿಸಿದವರ ಮೇಲೆ ಎನ್‍ಐಎ ತನಿಖೆ ನಡೆಸಿ ಸೂಕ್ತ ಶಿಕ್ಷೆ ನೀಡಬೇಕು. ಈ ಬಗ್ಗೆ ಸರಕಾರ ತಕ್ಷಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.

ಹೈಕೋರ್ಟ್ ನ್ಯಾಯಧೀಶರ ಬಗ್ಗೆ ಹಗುರವಾದ ಹೇಳಿಕೆಗಳನ್ನು ನೀಡುವ ಮೂಲಕ ರಾಜ್ಯದ ಕಾನೂನಾತ್ಮಕ ವ್ಯವಸ್ಥೆಯನ್ನು ಧಿಕ್ಕರಿಸುವಂತಹ ಕೆಲಸ ನಡೆಯುತ್ತಿದೆ.

ಇದು ಕೇವಲ ಎಸ್.ಡಿ.ಪಿ.ಐ, ಸಿಎಫ್‍ಐ ,ಪಿಎಫ್ ಐ ಸಂಘಟನೆಗಳ ಕೆಲಸವಲ್ಲ ಇದರ ಹಿಂದೆ ಬಹು ದೊಡ್ಡ ದೇಶದ್ರೋಹಿ ಸಂಘಟನೆಗಳಾದ ಅಲ್ ಖೈದಾ ಹಾಗೂ ಇನ್ನಿತರ ಸಂಘಟನೆಯ ಕೈವಾಡ ಇದೆ. ಸಂಘಟನೆಯ ಬಹಳಷ್ಟು ಜನರು ಶರಿಯತ್ ಕಾನೂನು ಬಗ್ಗೆ ಮಾತನಾಡುತ್ತಾರೆ. ಈ ಬೆಳವಣಿಗೆ ವಿರುದ್ಧ ಶರಿಯತ್ ಕಾನೂನಿನಂತೆ ಶಿಕ್ಷೆಯಾಗಲಿ ಎಂದು ಒತ್ತಾಯಿಸಿದರು. ನಾವು ಹಿಂದೂ ರಾಷ್ಟ್ರ ನಿರ್ಮಾಣದ ಕಲ್ಪನೆಯ ಬಗ್ಗೆ ಚಿಂತನೆ ಮಾಡಿದ್ದೇವೆ ಎಂದ ಅವರು 6 ಜನ ವಿದ್ಯಾರ್ಥಿಗಳಿಂದ ಸೃಷ್ಟಿಯಾದ ಗೊಂದಲದಿಂದ ಅಲ್ಪಸಂಖ್ಯಾತರು ಇಂದು ಸಮಸ್ಯೆ ಎದುರಿಸುವಂತಾಗಿದೆ, ಇದು ಇನ್ನಷ್ಟು ಮುಗ್ಧ ಮಕ್ಕಳ ಮೇಲೆ ಪ್ರಭಾವ ಆಗುವ ಸಾಧ್ಯತೆ ತಪ್ಪಿಸಬೇಕು. ಉಡುಪಿಗೆ ವಿದ್ಯಾರ್ಥಿಗಳಿಗೆ, ಕುಟುಂಬಕ್ಕೆ ಬಹಿಷ್ಕಾರ ಹಾಕಬೇಕಾಗುತ್ತದೆ. ಗೆಲ್ಲು, ಕಾಂಡ ಕತ್ತರಿಸಿದರೆ ಸಾಲದು ಬೇರು ಸಮೇತ ಕಿತ್ತುಹಾಕಬೇಕು ಎಂದರು.

ಹಿಜಬ್, ವ್ಯಾಪಾರ ಬಹಿಷ್ಕಾರ, ಆಜಾನ್ ನಿಯಂತ್ರಣ ವಿಚಾರ ಅವರು ಮಾಡಿದ ಕರ್ಮ ಅವರು ತಿನ್ನುತ್ತಿದ್ದಾರೆ, ನಾವು ಮುಸಲ್ಮಾನರ ಮೇಲೆ ಅವಲಂಬಿತರಾಗಿ ಇರಬೇಕಾಗಿಲ್ಲ ಎಂದ ಅವರು. ಮುಸಲ್ಮಾನರು ಗದ್ದೆ ಬೇಸಾಯ ಮಾಡುವವರು ಇಲ್ಲ, ಕೆಲವರು ತಿರುಚುವ ಹೇಳಿಕೆ ನೀಡಿದ್ದಾರೆ. ಹೊಟ್ಟೆಪಾಡಿಗೆ ಸಮಸ್ಯೆ ಆದಾಗ ದೇಶ ವಿರೋಧಿ ಚಟುವಟಿಕೆಗಳು ಇದ್ದರೂ ಕೂಡ ದೇಶದ ಪರವಾಗಿ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ವ್ಯಂಗ್ಯ ವಾಡಿದರು.

Vishwa News 24

Recent Posts

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ – vishwanews24

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…

16 hours ago

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು – vishwanews24

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…

18 hours ago

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ – vishwanews24

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…

18 hours ago

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ – vishwanews24

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…

18 hours ago

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ – vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…

18 hours ago

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

3 days ago