Featured

ಉಡುಪಿ : ಹಿಜಾಬ್‌ಗೆ ಅನುಮತಿ; ರಾಜಕೀಯಕ್ಕಾಗಿ ವಿದ್ಯಾರ್ಥಿಗಳ ಜೀವನದಲ್ಲಿ ಚೆಲ್ಲಾಟವಾಡಲು ಅವಕಾಶ ನೀಡುವುದಿಲ್ಲ : ಯಶ್‌ಪಾಲ್ ಸುವರ್ಣ ಎಚ್ಚರಿಕೆ  – vishwanews24

ಉಡುಪಿ: ಹಿಜಾಬ್‌ಗೆ ಅನುಮತಿ; ಶಿಕ್ಷಣ ವ್ಯವಸ್ಥೆಯನ್ನ ಇಸ್ಲಾಮೀಕರಣ ಮಾಡಲು ಮುಂದಾದ ರಾಜ್ಯ ಸರ್ಕಾರ : ಯಶ್‌ಪಾಲ್ ಸುವರ್ಣ

ಉಡುಪಿ: ರಾಜ್ಯದ ಶಾಲಾ ಕಾಲೇಜುಗಳಲ್ಲಿ ಹಿಜಾಬ್ ನಿಷೇಧ ಆದೇಶವನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಹಿಂಪಡೆಯುವ ಮೂಲಕ ರಾಜ್ಯದ ಶಿಕ್ಷಣ ವ್ಯವಸ್ಥೆಯನ್ನು ಇಸ್ಲಾಮೀಕರಣಗೊಳಿಸಲು ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರ ಮುಂದಾಗಿದೆ ಎಂದು ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಶಾಲಾ ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ನಡುವೆ ಜಾತಿ ಮತ ಬಡವ ಶ್ರೀಮಂತ ಎಂಬ ತಾರತಮ್ಯ ಹೋಗಲಾಡಿಸುವ ನಿಟ್ಟಿನಲ್ಲಿ ಶಾಲಾ ಸಮವಸ್ತ್ರದ ಆಶಯಕ್ಕೆ ವಿರುದ್ಧವಾಗಿ ಇದೀಗ ಶಾಲಾ ಕಾಲೇಜುಗಳಲ್ಲಿ ಹಿಜಾಬ್ ಧರಿಸಲು ಅವಕಾಶ ನೀಡುವ ಮೂಲಕ ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ಗೊಂದಲ ಸೃಷ್ಟಿಸಲು ರಾಜ್ಯ ಸರ್ಕಾರ ಮುಂದಾಗಿದೆ.

ಇದನ್ನೂ ಓದಿ: 

2021 ಡಿಸೆಂಬರ್ ತಿಂಗಳಿನಲ್ಲಿ ಉಡುಪಿಯ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ 6 ಮಂದಿ ವಿದ್ಯಾರ್ಥಿನಿಯರು ದುರುದ್ದೇಶ ಪೂರ್ವಕವಾಗಿ ಹಿಜಾಬ್ ಅವಕಾಶ ನೀಡುವಂತೆ ಆಗ್ರಹಿಸಿ ವಿವಾದ ಸೃಷ್ಟಿಸಿ ರಾಜ್ಯ ಹಾಗೂ ದೇಶದಾದ್ಯಂತ ಗೊಂದಲ ನಿರ್ಮಾಣವಾಗಿ ಶಿಕ್ಷಣ ವ್ಯವಸ್ಥೆಗೆ ಹಾಗೂ ಕಾನೂನು ವ್ಯವಸ್ಥೆಗೆ ಧಕ್ಕೆ ಉಂಟಾಗಿದ್ದು, ಈ ಸಂದರ್ಬದಲ್ಲಿ ಕೆಲವು ಮತೀಯವಾದಿ ನಿಷೇಧಿತ ಸಂಘಟನೆಗಳು ಹಿಜಾಬ್ ವಿವಾದದ ಮೂಲಕ ಶಾಂತಿ ಸುವ್ಯವಸ್ಥೆಗೂ ಧಕ್ಕೆ ತರುವ ಪ್ರಯತ್ನ ಮಾಡಿರುವುದನ್ನು ರಾಜ್ಯದ ಜನತೆ ಇಂದೂ ಮರೆತಿಲ್ಲ.

ಕೇವಲ ಅಲ್ಪಸಂಖ್ಯಾಂತರ ಓಲೈಕೆಗಾಗಿ ಹಿಜಾಬ್ ನಿಷೇಧ ಆದೇಶವನ್ನು ಹಿಂಪಡೆಯಲು ರಾಜ್ಯ ಸರಕಾರ ಮುಂದಾಗಿದೆ. ಹಿಜಾಬ್ ಧರಿಸಲು ಅವಕಾಶ ನೀಡುವ ಸರ್ಕಾರ ಕೇಸರಿ ಶಾಲು ಧರಿಸಲು ಅವಕಾಶ ನೀಡದೆ ಮತ್ತೊಮ್ಮೆ ತನ್ನ ಹಿಂದೂ ವಿರೋಧಿ ನಿಲುವನ್ನು ಮುಂದುವರೆಸಿದೆ.

ಇದನ್ನೂ ಓದಿ: 

ಈ ಹಿಂದೆ ಹಿಜಾಬ್ ಇಸ್ಲಾಂನ ಅತ್ಯಗತ್ಯ ಭಾಗವಲ್ಲ’ ಎಂದು ಹೈಕೋರ್ಟ್‍ನ ತ್ರಿಸದಸ್ಯ ಪೀಠ ನೀಡಿದ ತೀರ್ಪು ನೀಡಿದ್ದರೂ ಹಿಜಾಬ್ ಧರಿಸಲು ಅವಕಾಶ ನೀಡಲು ಅತಿ ಮುತುವರ್ಜಿ ವಹಿಸುತ್ತಿರುವ ರಾಜ್ಯ ಸರಕಾರ ತನ್ನ ನಿರ್ಧಾರವನ್ನು ತಕ್ಷಣ ಹಿಂಪಡೆಯಬೇಕು. ಕೇವಲ ರಾಜಕೀಯ ಉದ್ದೇಶಕ್ಕಾಗಿ ರಾಜ್ಯದ ಶಿಕ್ಷಣ ವ್ಯವಸ್ಥೆಯನ್ನು ಹದಗೆಡಿಸಿ ವಿದ್ಯಾರ್ಥಿಗಳ ಜೀವನದಲ್ಲಿ ಚೆಲ್ಲಾಟವಾಡಲು ಅವಕಾಶ ನೀಡುವುದಿಲ್ಲ ಎಂದು ಶಾಸಕ ಯಶ್ ಪಾಲ್ ಸುವರ್ಣ ಎಚ್ಚರಿಕೆ ನೀಡಿದ್ದಾರೆ.

Vishwa News 24

Recent Posts

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ – vishwanews24

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…

1 day ago

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ; ಆರೋಪಿಗಾಗಿ ಶೋಧ- vishwanews24

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…

1 day ago

ಆರು ದಿನಗಳ ನಂತರ ಅಮರನಾಥ ಯಾತ್ರೆ ಪುನರಾರಂಭ -vishwanews24

ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…

1 day ago

BREAKING NEWS : ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ – vishwanews24

 ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…

1 day ago

ಕಾಮನ್‌ವೆಲ್ತ್ ಗೇಮ್ಸ್ 2026 : ಪ್ಯಾರಾ ಪವರ್‌ ಲಿಫ್ಟಿಂಗ್‌ನಲ್ಲಿ ಕಂಚು ಗೆದ್ದ ಝಂದು ಕುಮಾರ್ – vishwanews24

ಕಾಮನ್‌ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್‌: ಪ್ಯಾರಾ ಪವರ್‌ಲಿಫ್ಟಿಂಗ್‌ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…

1 day ago

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ – vishwanews24

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…

1 day ago