ಉಡುಪಿ: ಹಿಜಬ್ ನಮ್ಮ ಸಂವಿಧಾನಾತ್ಮಕ ಹಕ್ಕು. ನಾವು ಹಿಜಬ್ ಹಾಕಿ ಕಾಲೇಜಿಗೆ ಹೋಗುತ್ತೇವೆ. ನಮಗೆ ಯಾವುದೇ ಆನ್ಲೈನ್ ಕ್ಲಾಸ್ ಗಳು ಬೇಡ ಮತ್ತೆ ನಮ್ಮ ಮಧ್ಯೆ ತಾರತಮ್ಯ ಮಾಡಬೇಡಿ ಎಂದು ಉಡುಪಿಯ ಸರ್ಕಾರಿ ಮಹಿಳಾ ಪದವಿಪೂರ್ವ ಕಾಲೇಜಿನ ಮುಸ್ಲಿಂ ವಿದ್ಯಾರ್ಥಿನಿಯರು ಹೇಳಿದ್ದಾರೆ.
ಅವರು ಗುರುವಾರ ಉಡುಪಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿ, ಸರಕಾರಿ ಕಾಲೇಜಿನಲ್ಲಿ ನಮಗೆ ನಮ್ಮ ಹಕ್ಕು ಸಿಗದಿದ್ದರೆ ನಾವು ಬೇರೆಡೆ ಅದನ್ನು ನಿರೀಕ್ಷಿಸಲು ಸಾಧ್ಯ. ಸಾಯನ್ಸ್ ವಿದ್ಯಾರ್ಥಿಗಳು ಇರೋದ್ರಿಂದ ನಮಗೆ ಆನ್ಲೈನ್ ಕ್ಲಾಸ್ ನಲ್ಲಿ ಲ್ಯಾಬ್ ಅಟೆಂಡ್ ಮಾಡಲು ಆಗುವುದಿಲ್ಲ. ನಮಗೆ ಒಂದು ತಿಂಗಳ ತರಗತಿ ನಷ್ಟ ಆಗಿದೆ. ಕಾಲೇಜಿನ ಉಳಿದ ಮುಸಲ್ಮಾನ ವಿದ್ಯಾರ್ಥಿನಿಯರು ಹಿಜಬ್ ಧರಿಸಲು ಸಿದ್ಧರಿದ್ದಾರೆ ಆದರೆ ನಮ್ಮ ಮೇಲೆ ನಡೆಯುತ್ತಿರುವ ದೌರ್ಜನ್ಯದಿಂದ ಅವರು ಭಯ ಗೊಂಡಿದ್ದಾರೆ.
ಇದನ್ನೂ ಓದಿ :
ಸರಕಾರಿ ಕಾಲೇಜ್ ಆಗಿರುವುದರಿಂದ ನಮ್ಮ ಹಕ್ಕನ್ನು ಕೇಳುತ್ತಿದ್ದೇವೆ. ತಾರತಮ್ಯವನ್ನು ಮಾಡಬೇಡಿ. ನಮಗೆ ನಡೆಯುತ್ತಿರುವ ದೌರ್ಜನ್ಯ ಪ್ರತಿದಿನ ಮಾಧ್ಯಮಗಳಲ್ಲಿ ನಮ್ಮ ಸುದ್ದಿಗಳನ್ನು ನೋಡಿ ಇತರ ಮುಸ್ಲಿಂ ವಿದ್ಯಾರ್ಥಿನಿಯರು ಆತಂಕಗೊಂಡಿದ್ದಾರೆ ಅವರು ನೈತಿಕವಾಗಿ ನಮಗೆ ಬೆಂಬಲ ಸೂಚಿಸಿದ್ದಾರೆ ಆದರೆ ಯಾರೂ ಮುಂದೆ ಬರುತ್ತಿಲ್ಲ. ಅವರು ಎಜುಕೇಶನ್ ತುಂಬಾ ಇಂಪಾರ್ಟೆಂಟ್ ಎಂದು ನಮ್ಮ ಜೊತೆ ಪ್ರತಿಭಟನೆಗೆ ಬರುತ್ತಿಲ್ಲ ಕ್ಲಾಸಿಗೆ ಹೋಗುತ್ತಿದ್ದಾರೆ ನಮಗೂ ಶಿಕ್ಷಣ ಮುಖ್ಯ ಅದರ ಜೊತೆಗೆ ಧರ್ಮ ಮತ ನಮ್ಮ ಹಿಜಬ್ ಹಕ್ಕು ಮುಖ್ಯ. ಹಿಜಾಬ್ ಇಲ್ಲದೆ ತರಗತಿಯಲ್ಲಿ ಕುಳಿತುಕೊಳ್ಳಲು ನಮಗೆ ಕಂಫರ್ಟ್ ಆಗುವುದಿಲ್ಲ. ಕಾಲೇಜಿನ ಸಮವಸ್ತ್ರದ ಶಾಲೆಯಲ್ಲಿ ನಾವು ಜಾಗೃತ ಯಾರಿ ಸಿ ಅದನ್ನು ತೊಟ್ಟುಕೊಂಡು ಕ್ಲಾಸಿನಲ್ಲಿ ಕುಳಿತುಕೊಳ್ಳುತ್ತೇವೆ. ನಾವು ಬೇರೆ ಯಾವುದೇ ವಿಚಾರಕ್ಕೆ ಹಠಹಿಡಿದು ಕುಳಿತುಕೊಂಡಿಲ್ಲ ಎಂದರು
ಕಾಲೇಜಲ್ಲಿ ಹಿಂದಿನಿಂದಲೂ ಪರಂಪರೆಯಿದೆ ಹಿಜಬ್ ಗೆ ಅವಕಾಶ ಇಲ್ಲ ಎಂದು ಎಲ್ಲರೂ ಹೇಳುತ್ತಿದ್ದಾರೆ ಆದರೆ ನಮ್ಮ ಸೀನಿಯರ್ಗಳು ಧರಿಸುತ್ತಿದ್ದನ್ನು ನಾವು ನೋಡಿದ್ದೇವೆ. ನಮಗೆ ಹಿಜಬ್ ಧರಿಸಿ ಕ್ಲಾಸ್ ಗೆ ಬರಲು ಆಡಳಿತ ಮಂಡಳಿಗೆ ನಮ್ಮ ಶಿಕ್ಷಣದ ಬಗ್ಗೆ ಯಾವುದೇ ಒಲವು ಇಲ್ಲ. ನಾವು ಉತ್ತಮವಾದ ಶಿಕ್ಷಣ ಪಡೆದು ಮುಂದೆ ಏನಾದರೂ ಜೀವನದಲ್ಲಿ ಸಾಧಿಸಬೇಕೆಂದು ಇದ್ದೇವೆ ಎಂದರು.
ಇದನ್ನೂ ಓದಿ :
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…