Featured

ಉಡುಪಿ : ಹಿಜಾಬ್‌ ವಿವಾದ: ಯಥಾಸ್ಥಿತಿ ಮುಂದುವರಿಸುವಂತೆ ಶಿಕ್ಷಣ ಇಲಾಖೆ ಆದೇಶ.. -Vishwanews24

ಉಡುಪಿ : ಹಿಜಾಬ್‌ ವಿವಾದ: ಯಥಾಸ್ಥಿತಿ ಮುಂದುವರಿಸುವಂತೆ ಶಿಕ್ಷಣ ಇಲಾಖೆ ಆದೇಶ.. -Vishwanews24

ಎಲ್ಲರೂ ಸಮಾನತೆಯಿಂದ ತರಗತಿಗಳಿಗೆ ಹಾಜರಾಗುವಂತೆ ಶಾಸಕ ಭಟ್ ಮನವಿ..

ಉಡುಪಿ: ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು ಉಡುಪಿ ಇಲ್ಲಿ ವಿದ್ಯಾರ್ಥಿನಿಯರು ಸಮವಸ್ತ್ರ ಮತ್ತು ಹಿಜಾಬ್ ಧರಿಸುವ ಬಗೆಗಿನ ವಿಷಯಕ್ಕೆ ಸಂಬಂಧಿಸಿದಂತೆ ರಾಜ್ಯದ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ಸಮವಸ್ತ್ರ ಅಥವಾ ವಸ್ತ್ರಸಂಹಿತೆಯನ್ನು ನಿಗಧಿಗೊಳಿಸುವ ಕುರಿತು ಚಿಂತನ ಮಂಥನ ನಡೆಸಲು ಉನ್ನತಮಟ್ಟದ ಸಮಿತಿ ರಚಿಸಿ ಅಧ್ಯಯನ ನಡೆಸಿ ಸಲ್ಲಿಸಲಾಗುವ ಶಿಫಾರಸ್ಸುಗಳನ್ನು ಪರಿಶೀಲಿಸಿದ ನಂತರ ಸರಕಾರ ಅಗತ್ಯ ಕ್ರಮ ಕೈಗೊಳ್ಳಬೇಕಾಗುತ್ತದೆ. ಈ ಪಕ್ರಿಯೆ ಆಗುವವರೆಗೂ ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜು ಉಡುಪಿ ತನ್ನ ಸಂಸ್ಥೆಯ ಹಂತದಲ್ಲಿ ವಿದ್ಯಾರ್ಥಿನಿಯರಿಗೆ ನಿಗಧಿಗೊಳಿಸಿರುವ ಸಮವಸ್ತ್ರ /ವಸ್ತ್ರ ಸಂಹಿತೆಯ ವಿಷಯದಲ್ಲಿ ಯಥಾಸ್ಥಿತಿಯನ್ನು ಮುಂದುವರೆಸಲು ಸರ್ಕಾರಿ ಆದೇಶ ಸಂಖ್ಯೆ : ಇಪಿ/14/ಎಸ್ ಹೆಚ್ ಹೆಚ್ / 2022 ರಂತೆ ದಿನಾಂಕ 25-01-2022 ರಂದು ಆದೇಶ ಹೊರಡಿಸಿದ್ದು, ಅದರಂತೆ ಸರ್ಕಾರಿ ಆದೇಶವನ್ನು ಪಾಲಿಸಿ ಯಾವುದೇ ಗೊಂದಲಗಳಿಗೆ ಅವಕಾಶವನ್ನು ನೀಡದೆ ಶೈಕ್ಷಣಿಕ ಹಿತದೃಷ್ಟಿಯಿಂದ ಎಲ್ಲರೂ ಸಮಾನತೆಯಿಂದ ತರಗತಿಗಳಿಗೆ ಹಾಜರಾಗುವಂತೆ ಶಾಸಕ ರಘುಪತಿ ಭಟ್ ಮನವಿ ಮಾಡಿದ್ದಾರೆ.

ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು ಇಲ್ಲಿ 1985 ರಿಂದಲೂ ಸಮವಸ್ತ್ರ/ವಸ್ತ್ರ ಸಂಹಿತೆ ಪದ್ಧತಿ ಜಾರಿಯಲ್ಲಿತ್ತು. ಈ ಕಾಲೇಜಿಗೆ ದಾಖಲಾಗುವ ವಿದ್ಯಾರ್ಥಿನಿಯರು ಪ್ರವೇಶ ಪಡೆಯುವ ವೇಳೆಯಲ್ಲಿ ಕಾಲೇಜು ನಿಗಧಿ ಮಾಡಿದ ಸಮವಸ್ತ್ರ/ ವಸ್ತ್ರಸಂಹಿತೆ ಕುರಿತು ಮಾಹಿತಿ ಇದ್ದು ಅದನ್ನು ಒಪ್ಪಿಯೇ ಸ್ವ-ಇಚ್ಛೆಯಿಂದ ಕಾಲೇಜಿಗೆ ದಾಖಲಾತಿಯನ್ನು ಪಡೆದಿರುತ್ತಾರೆ. ಆದರೆ ಪ್ರಸ್ತುತ ಈ ಕಾಲೇಜಿನ 6 ಮಂದಿ ವಿದ್ಯಾರ್ಥಿನಿಯರು ಹಿಜಾಬ್ ಧರಿಸುವ ಬಗ್ಗೆ ಗೊಂದಲವನ್ನುಂಟು ಮಾಡಿರುವುದರಿಂದ ಈ ಬಗ್ಗೆ ಸರ್ಕಾರಕ್ಕೆ ಸೂಕ್ತ ಕ್ರಮಕ್ಕಾಗಿ ಮನವಿ ಮಾಡಲಾಗಿತ್ತು.

ಸರ್ಕಾರಿ ಆದೇಶಕ್ಕೆ ಸಂಬಂಧಿಸಿದಂತೆ ಇಂದು ದಿನಾಂಕ 25-01-2022ರಂದು ಶಾಸಕ ಕೆ ರಘುಪತಿ ಭಟ್ ಅವರ ಅಧ್ಯಕ್ಷತೆಯಲ್ಲಿ ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜು ಉಡುಪಿ ಇಲ್ಲಿನ ಕಾಲೇಜು ಅಭಿವೃದ್ಧಿ ಸಮಿತಿ ಹಾಗೂ ಪೋಷಕರನ್ನೊಳಗೊಂಡ ಶಿಕ್ಷಣ ಸೇವಾ ಸಮಿತಿಯ ಜಂಟಿ ಸಭೆಯಲ್ಲಿ ಈ ವಿಷಯದ ಬಗ್ಗೆ ಚರ್ಚೆ ನಡೆದು ಎಲ್ಲಾ ವಿದ್ಯಾರ್ಥಿಗಳು ಸಮವಸ್ತ್ರದಲ್ಲಿ ತರಗತಿಗೆ ಹಾಜರಾಗಬೇಕೆಂದು ನಿರ್ಣಯಿಸಲಾಯಿತು. ಇದಕ್ಕೆ ಮಕ್ಕಳ ಪೋಷಕರನ್ನು ಒಳಗೊಂಡ ಸಮಿತಿಯ ಸದಸ್ಯರು ಬೆಂಬಲವನ್ನು ಸೂಚಿಸಿದರು.

ಪ್ರಸ್ತುತ ಕೇವಲ ಆರು ಮಕ್ಕಳ ಅಶಿಸ್ತಿನ ವರ್ತನೆಯಿಂದಾಗಿ ಕಾಲೇಜಿನಲ್ಲಿರುವ 1000 ವಿದ್ಯಾರ್ಥಿಗಳ ಶೈಕ್ಷಣಿಕ ಭವಿಷ್ಯಕ್ಕೆ ತೊಡಕು ಉಂಟಾಗುತ್ತಿದೆ. ಆದ್ದರಿಂದ ಸರಕಾರದ ಆದೇಶದಂತೆ ಎಲ್ಲಾ ವಿದ್ಯಾರ್ಥಿಗಳು ಸಮವಸ್ತ್ರವನ್ನು ಧರಿಸಿ ತರಗತಿಗೆ ಹಾಜಾರಾಗುವುದು. ಈ ಬಗ್ಗೆ ಮಕ್ಕಳ ಪೋಷಕರಿಗೆ ಮನವರಿಕೆ ಮಾಡಿಕೊಡುವುದು ಸೂಕ್ತ ಎಂದು ಸಭೆಯಲ್ಲಿ ನಿರ್ಧರಿಸಲಾಯಿತು.

Vishwa News 24

Recent Posts

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

9 hours ago

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ -vishwanews24

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…

9 hours ago

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

10 hours ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

10 hours ago

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ -vishwanews24

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…

10 hours ago

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ -vishwanews24

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…

10 hours ago