ಉಡುಪಿ: ಹಿಜಾಬ್ ಕೇಸರಿ ವಿವಾದಕ್ಕೆ ಸಂಬಂಧಿಸಿ ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ರೀತಿಯ ತಪ್ಪು ಸಂದೇಶ, ಸುಳ್ಳು ವದಂತಿಗಳನ್ನು ಹರಡಬಾರದು ಎಂದು ಉಡುಪಿ ಜಿಲ್ಲಾಧಿಕಾರಿ ಕೂರ್ಮಾ ರಾವ್ ಎಚ್ಚರಿಕೆ ನೀಡಿದ್ದಾರೆ.
ಈ ವಿಚಾರವಾಗಿ ವಿವಿಧ ಸಂಘಟನೆಗಳು ಮತ್ತು ಸಮಾಜದ ಮುಖಂಡರ ಸಭೆ ಕರೆದು ನ್ಯಾಯಾಲಯದ ಮಧ್ಯಾಂತರ ಆದೇಶವನ್ನು ಪಾಲಿಸುವ ನಿಟ್ಟಿನಲ್ಲಿ ಸೂಚನೆ ನೀಡಲು ತಹಶೀಲ್ದಾರರಿಗೆ ನಿರ್ದೇಶನ ನೀಡಲಾಗಿದೆ.
ಯಾವುದೇ ಗೊಂದಲ, ಶಾಂತಿ ಸುವ್ಯವಸ್ಥೆಗೆ ಭಂಗವಾಗದಂತೆ ಮಕ್ಕಳ ಶೈಕ್ಷಣಿಕ ಚಟುವಟಿಕೆ ಮುಂದುವರಿಯಬೇಕು. ಸಾರ್ವಜನಿಕರು ಶಾಂತಿ ಸುವ್ಯವಸ್ಥೆ ಕಾಪಾಡಲು ಜಿಲ್ಲಾಡಳಿತದೊಂದಿಗೆ ಸಹಕರಿಸಬೇಕು.ಸಮವಸ್ತ್ರದ ವಿವಾದದ ಹಿನ್ನೆಲೆಯಲ್ಲಿ ನ್ಯಾಯಾಲಯದ ಮಧ್ಯಾಂತರ ಆದೇಶ ಪಾಲಿಸಲು ಜಿಲ್ಲೆಯ ಎಲ್ಲ ಪ್ರೌಢಶಾಲೆ, ಪದವಿಪೂರ್ವ ಮತ್ತು ಪದವಿ ಕಾಲೇಜುಗಳಲ್ಲಿ ಕಾಲೇಜು ಅಭಿವೃದ್ಧಿ ಮಂಡಳಿ, ಕಾಲೇಜು ಆಡಳಿತ ಮಂಡಳಿ, ಕಾಲೇಜು ಶಿಸ್ತು ಸಮಿತಿ ಮತ್ತು ಶಿಕ್ಷಕರ, ಪಾಲಕರ ಸಭೆ ಕರೆದು ಕಾಲೇಜಿನಲ್ಲಿ ಯಾವುದೇ ಗೊಂದಲ ಆಗದಂತೆ ಕ್ರಮ ಕೈಗೊಳ್ಳಲು ಪದವಿಪೂರ್ವ, ಪದವಿ ಕಾಲೇಜುಗಳ ಪ್ರಾಂಶುಪಾಲರಿಗೆ ನಿರ್ದೇಶನ ನೀಡಿದ್ದಾರೆ.
ಇನ್ನು ಮುಂದೆ ಫೋನ್ ನಂಬರ್ ನೀಡದೇ ಚಾಟ್ ಮಾಡಬಹುದು : ಏನಿದು ವಾಟ್ಸಪ್ ಹೊಸ ಬದಲಾವಣೆ ? ಕ್ಯಾಲಿಫೋರ್ನಿಯಾ :…
ಬೆಂಗಳೂರು- ಮಂಗಳೂರು ಚತುಷ್ಪಥ ರೈಲು ಮಾರ್ಗ ಯೋಜನೆ ಅಭಿವೃದ್ದಿ: ಸೋಮಣ್ಣ ಬೆಂಗಳೂರು: ಬೆಂಗಳೂರಿನಿಂದ 100 ಕಿ.ಮೀ. ಸುತ್ತಮುತ್ತ ಇರುವ ನಗರಗಳಿಗೆ…
ಮಂಗಳೂರು: ಮಸೀದಿಗೆ ತೆರಳಿದ್ದ ವ್ಯಕ್ತಿ ನಾಪತ್ತೆ ; ಗುರುಪುರ ಸೇತುವೆ ಮೇಲೆ ಸ್ಕೂಟರ್ ಪತ್ತೆ - ಫಲ್ಗುಣಿ ನದಿಯಲ್ಲಿ ಶೋಧ…
ಉಳ್ಳಾಲ: ಕೆರೆಬೈಲ್ ಗುಡ್ಡೆಯಲ್ಲಿ ಮನೆ ಮೇಲೆ ಕುಸಿದ ಕಾಂಪೌಂಡ್ ಹಾಲ್: ತಪ್ಪಿದ ಭಾರೀ ದುರಂತ ಉಳ್ಳಾಲ: ಕಳೆದೆರಡು ದಿನಗಳಿಂದ ಸುರಿಯುತ್ತಿರುವ…
ನಾಗುರಿ ದುರಂತ - ಕಳಪೆ ಕಾಮಗಾರಿಯ ಶಂಕೆ : ತಪ್ಪಿತಸ್ಥರ ವಿರುದ್ಧ ಪ್ರಕರಣ ದಾಖಲಿಸಲು ಆದೇಶ ಮಂಗಳೂರು: ನಾಗುರಿಯಲ್ಲಿ ಮನೆ…
ನಕಲಿ ಪಾಸ್ಪೋರ್ಟ್ ಪ್ರಕರಣ: ಮಂಗಳೂರು ಟ್ರಾವೆಲ್ ಏಜೆಂಟ್ ವಿರುದ್ಧದ ಪ್ರಕರಣ ರದ್ದತಿಗೆ ಹೈಕೋರ್ಟ್ ನಕಾರ ಬೆಂಗಳೂರು: ಆಂಧ್ರಪ್ರದೇಶದ ಭಯೋತ್ಪಾದನಾ ನಿಗ್ರಹ…