Featured

ಉಡುಪಿ : ಹಿಜಾಬ್ ಧರಿಸಲು ಅವಕಾಶ ನೀಡಬೇಕೆಂದು ನಾಳೆಯೂ ಪಟ್ಟು ಹಿಡಿದರೆ ಅಂತಹ ವಿದ್ಯಾರ್ಥಿನಿಯರ ಮೇಲೆ ಕ್ರಿಮಿನಲ್ ಕೇಸ್ ಜೊತೆಗೆ ನ್ಯಾಯಾಂಗ ನಿಂದನೆ ಪ್ರಕರಣ ದಾಖಲು  : ರಘುಪತಿ ಭಟ್ ಎಚ್ಚರಿಕೆ – Vishwanews24

ಈ ಮಕ್ಕಳು, ಇವರ ಪೋಷಕರು ಅನ್ನ ತಿನ್ನುವುದಿಲ್ಲವಾ ?

ನಾಳೆ ಮತ್ತೆ ನಾಟಕ ಮಾಡಿದರೆ ನ್ಯಾಯಾಂಗ ನಿಂದನೆ ಕೇಸು ದಾಖಲು

ಕಾಲೇಜಿನ ವಾತಾವರಣ ಕೆಡಿಸುವುದು ಮತ್ತು ಸಮಾಜದಲ್ಲಿ ಅಶಾಂತಿ ಸೃಷ್ಟಿ ಮಾಡುವುದೇ ಇವರ ಉದ್ದೇಶ..

ಉಡುಪಿ: ಹೈಕೋರ್ಟ್‌ ಆದೇಶ ಮೀರಿ ಹಿಜಾಬ್ ಧರಿಸಲು ಅವಕಾಶ ನೀಡಬೇಕೆಂದು ನಾಳೆಯೂ ಪಟ್ಟು ಹಿಡಿದರೆ ಅಂತಹ ವಿದ್ಯಾರ್ಥಿನಿಯರ ಮೇಲೆ ಕ್ರಿಮಿನಲ್ ಕೇಸ್ ಜೊತೆಗೆ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಲಾಗುವುದು ಎಂದು ಉಡುಪಿ ಶಾಸಕರ ರಘುಪತಿ ಭಟ್ ಎಚ್ಚರಿಕೆ ನೀಡಿದ್ದಾರೆ.

ಉಡುಪಿ ಪರೀಕ್ಷಾ ಕೇಂದ್ರದಲ್ಲಿ ಹಿಜಾಬ್ ಹೋರಾಟಗಾರ್ತಿಯರಿಬ್ಬರು ಹೈಡ್ರಾಮಾ ಸೃಷ್ಟಿಸಿರುವುದಕ್ಕೆ ಆಕ್ರೋಶ ಹೊರ ಹಾಕಿದ ಅವರು, ಇದೊಂದು ಷಡ್ಯಂತ್ರ ಅನ್ನುವುದು ಸಾಬೀತಾಗಿದೆ. ನಿನ್ನೆ ಸಂಜೆಯವರೆಗೆ ಫೋನ್ ಮಾಡಿ ಹಾಲ್ ಟಿಕೆಟ್ ಪಡೆಯಲು ಹೇಳಲಾಗಿತ್ತು. ಬೆಳಗ್ಗಿನವರೆಗೂ ಹಾಲ್ ಟಿಕೆಟ್ ಪಡೆಯಲು ಬರಲಿಲ್ಲ. ಇಂದು ಬೆಳಗ್ಗೆ 9.30ಕ್ಕೆ ಕಾಲೇಜಿಗೆ ಬಂದವರಿಗೆ ಹಿಜಾಬ್ ತೆಗೆದಿಟ್ಟು ಹೋದರೆ ಮಾತ್ರ ಹಾಲ್ ಟಿಕೆಟ್ ಕೊಡುವುದಾಗಿ ಪ್ರಾಂಶುಪಾಲರು ಹೇಳಿದ್ದರಿಂದ ಹಿಜಾಬ್ ತೆಗೆದು ಹಾಲ್ ಟಿಕೆಟ್ ಪಡದುಕೊಂಡು ಹೋಗಿದ್ದಾರೆ. ಆದರೆ ಬಳಿಕ ಪರೀಕ್ಷಾ ಕೇಂದ್ರಕ್ಕೆ ಹೋಗಿ ಡ್ರಾಮಾ ಮಾಡಿದ್ದಾರೆ ಎಂದರು.

ಈ ಬಗ್ಗೆ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಜೊತೆ ಮಾತನಾಡಿದ್ದೇನೆ. ನಾಳೆ ಮತ್ತೆ ನಾಟಕ ಮಾಡಿದರೆ ನ್ಯಾಯಾಂಗ ನಿಂದನೆ ಕೇಸು ದಾಖಲಿಸಲು ಹೇಳಿದ್ದೇನೆ. ಅಲ್ಲದೆ, ಯಥಾ ಪ್ರಕಾರ ಮುಂದುವರೆದರೆ ಅವರ ವಿರುದ್ಧ ಕ್ರಿಮಿನಲ್ ಕೇಸ್ ಹಾಕಲಾಗುವುದು ಎಂದು ಅವರು ಎಚ್ಚರಿಸಿದರು.

ಇವರೇನು ಹುಡುಗಾಟಿಕೆ ಮಾಡುತ್ತಿದ್ದಾರಾ? ಇವರು ಮುಗ್ದ ಮಕ್ಕಳಲ್ಲ. ಹೈಕೋರ್ಟ್‌ನ ಅರ್ಜಿದಾರರು. ಹಿಜಾಬ್ ಮತ್ತು ಪರೀಕ್ಷೆಗೆ ಸಂಬಂಧ ಇಲ್ಲ ಎಂದು ಸುಪ್ರೀಂ ಕೋರ್ಟ್ ನ್ಯಾಯಾಧೀಶರು ಕೂಡ ಹೇಳಿದ್ದಾರೆ. ಈ ಮಕ್ಕಳ ಮೇಲೆ ಶಿಸ್ತುಕ್ರಮ ಕೈಗೊಂಡು ಕ್ರಿಮಿನಲ್ ಪ್ರಕರಣ ದಾಖಲಿಸಬೇಕು. ತರಗತಿಗೇ ಸರಿಯಾಗಿ ಹಾಜರಾಗದ ಇವರೇನು ಪರೀಕ್ಷೆ ಬರೆಯುತ್ತಾರೆ ಎಂದು ಪ್ರಶ್ನಿಸಿದ ರಘುಪತಿ ಭಟ್, ಹಿಜಾಬ್ ಧರಿಸಲು ಬಿಟ್ಟರೂ ಅವರು ಪರೀಕ್ಷೆ ಬರೆಯುವುದಿಲ್ಲ. ನಮ್ಮ ಕಾಲೇಜಿನ ವಾತಾವರಣ ಕೆಡಿಸುವುದು ಮತ್ತು ಸಮಾಜದಲ್ಲಿ ಅಶಾಂತಿ ಸೃಷ್ಟಿ ಮಾಡುವುದೇ ಇವರ ಉದ್ದೇಶ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಮಕ್ಕಳ ಬಗ್ಗೆ ಯಾವುದೇ ಸಹಾನುಭೂತಿ ಇಲ್ಲ. ಮೀಡಿಯಾದ ಅಟೆನ್ಶನ್ ಪಡೆಯಲು ಹೀಗೆಲ್ಲ ಮಾಡುತ್ತಿದ್ದಾರೆ. ಇನ್ನು ನಾವೇ ಕಾನೂನು ಕ್ರಮ ಕೈಗೊಳ್ಳಲು‌ ಮುಂದಾಗುತ್ತೇವೆ. ನ್ಯಾಯಾಂಗ ನಿಂದನೆಯ ಕೇಸು ಮಾಡುತ್ತೇವೆ. ಈವೆರೆಗೆ ಸಂಘಟನೆಯ ಕೈವಾಡ ಎಂದು ಹೇಳುತ್ತಿದ್ದೆವು. ಈ ಮಕ್ಕಳು, ಇವರ ಪೋಷಕರು ಅನ್ನ ತಿನ್ನುವುದಿಲ್ಲವಾ ಎಂದು ಪ್ರಶ್ನಿಸಿದರು.

ಈವರೆಗೂ ಹೆಣ್ಣು ಮಕ್ಕಳು ಮುಗ್ಧರು ಎಂದು ಭಾವಿಸಿದ್ದೆ. ನಾಳೆ ಸಂಘಟನೆಯವರು ಭಯೋತ್ಪಾದಕರಾಗಿ ಅಂತಾರೆ, ಗನ್ ಹಿಡಿದುಕೊಳ್ಳಿ ಅಂತಾರೆ, ಅದನ್ನು ಇವರು ಕೇಳುತ್ತಾರಾ? ಮಾನವ ಬಾಂಬ್ ಆಗಿ ಅಂತಾರೆ ಅದನ್ನೂ ಕೇಳುತ್ತಾರಾ? ಎಂದು ರಘುಪತಿ ಭಟ್ ಪ್ರಶ್ನಿಸಿದರು.

 

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

2 days ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

2 days ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

2 days ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

2 days ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

2 days ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

2 days ago