ಉಡುಪಿ: ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಹಿಜಾಬ್ ಧರಿಸಿಯೇ ಬರೆಯುವುದಾಗಿ ಪಟ್ಟು ಹಿಡಿದಿದ್ದ ಉಡುಪಿಯ ಇಬ್ಬರು ಹಿಜಾಬ್ ಹೋರಾಟಗಾರ್ತಿಯರು ಅವಕಾಶ ನಿರಾಕರಿಸಿದ ಕಾರಣ ಪರೀಕ್ಷೆ ಬರೆಯದೆ ವಾಪಸ್ಸಾಗಿದ್ದಾರೆ.
ಇಂದಿನಿಂದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಆರಂಭವಾಗಿದ್ದು, ಉಡುಪಿಯಲ್ಲಿ ಆರು ಮಂದಿ ಹಿಜಾಬ್ ಹೋರಾಟಗಾರ್ತಿಯರ ಪೈಕಿ ಆಲಿಯಾ ಅಸ್ಸಾದಿ ಮತ್ತು ರೇಶಮ್ಎಂಬ ಇಬ್ಬರು ವಿದ್ಯಾರ್ಥಿನಿಯರು ಪರೀಕ್ಷೆ ಎದುರಿಸಬೇಕಿತ್ತು. ಆದರೆ ಇಬ್ಬರೂ ನಿನ್ನೆವರೆಗೂ ಪ್ರವೇಶ ಪತ್ರ ಪಡೆದಿರಲಿಲ್ಲ. ಇಂದು ಪರೀಕ್ಷೆ ಆರಂಭವಾಗುವ ಮುನ್ನ ಕೊನೆ ಕ್ಷಣದಲ್ಲಿ ಪ್ರವೇಶ ಪತ್ರ ಪಡೆದು ಪರೀಕ್ಷಾ ಕೇಂದ್ರಕ್ಕೆ ಆಗಮಿಸಿದ್ದಾರೆ. ಆದರೆ ಹಿಜಾಬ್ ತೆಗೆಯಲು ಒಪ್ಪದೆ ಆಲಿಯಾ ಅಸಾದಿ ಹಾಗೂ ರೇಷ್ಮಾ ಪರೀಕ್ಷೆ ಬರೆಯುವುದಕ್ಕೆ ಬಂದಾಗ, ಪರೀಕ್ಷಾ ಕೇಂದ್ರದಲ್ಲಿ ಅವಕಾಶ ನಿರಾಕರಿಸಲಾಯಿತು.
ಇದರಿಂದ ಹಿಜಾಬ್ ಧರಿಸಿಯೇ ಪರೀಕ್ಷೆ ಬರೆಯುವುದಾಗಿ ಇಬ್ಬರು ವಿದ್ಯಾರ್ಥಿನಿಯರು ಪಟ್ಟು ಹಿಡಿದು ಪರೀಕ್ಷಾ ಕೇಂದ್ರದ ಮುಂಭಾಗದಲ್ಲಿ ಹೈಡ್ರಾಮ ಸೃಷ್ಟಿಸಿದರು. ಆದರೆ ಕೋರ್ಟ್ ಆದೇಶವಿರುವುದರಿಂದ ಹಿಜಾಬ್ ತೆಗೆದಲ್ಲಿ ಮಾತ್ರ ಪರೀಕ್ಷೆ ಬರೆಯಲು ಅವಕಾಶ ನೀಡುವುದಾಗಿ ಸಿಬಂದಿ ಸೂಚಿಸಿದ್ದರಿಂದ ಬಳಿಕ ಪರೀಕ್ಷೆಗೆ ಹಾಜರಾಗದೇ ಮನೆಗೆ ಹಿಂತಿರುಗಿದ್ದಾರೆ.
ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ ಉಡುಪಿ: ಉಡುಪಿ ಜಿಲ್ಲೆಯನ್ನು ರಾಜ್ಯ ಕಾಂಗ್ರೆಸ್…
ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್.. ಸುಪ್ರೀಂ ಕೋರ್ಟ್ನಲ್ಲಿ ಅಧಿಕೃತ ಕ್ರಮಗಳನ್ನು ಪೂರ್ಣಗೊಳಿಸಲು ಸರ್ಕಾರಕ್ಕೆ ಮನವಿ…
ಟ್ರ್ಯಾಕ್ಟರ್ - ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ…
ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ಉಡುಪಿ: ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್ಗೆ ಬಿಟ್ಟ ವಿಚಾರ.…
ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ ಕೋಲ್ಕತ್ತಾ: ಇತರ…
ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್…