ಉಡುಪಿ : ಹಿಜಾಬ್ ಧರಿಸುವುದು ಮೂಲಭೂತ ಹಕ್ಕು ಎಂದು ಘೋಷಿಸುವಂತೆ ಮುಸ್ಲಿಂ ವಿದ್ಯಾರ್ಥಿನಿಯರು ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
ಉಡುಪಿ ಬಾಲಕಿಯರ ಕಾಲೇಜಿನ ವಿದ್ಯಾರ್ಥಿನಿ ರೇಶಾಮ್ ಫಾರೂಕ್ ನಿಂದ ಕರ್ನಾಟಕದ ಹೈಕೋರ್ಟ್ ನಲ್ಲಿ ರಿಟ್ ಅರ್ಜಿ ಸಲ್ಲಿಸಲಾಗಿದೆ. ಉಡುಪಿ ಸರಕಾರಿ ಬಾಲಕಿಯರ ಕಾಲೇಜಿನಲ್ಲಿ ಹಿಜಾಬ್ ಧರಿಸಿ ತರಗತಿ ಪ್ರವೇಶ ನಿರಾಕರಣೆ ಹಿನ್ನಲೆಯಲ್ಲಿ ವಿದ್ಯಾರ್ಥಿನಿ ಈ ನಿರ್ಧಾರಕ್ಕೆ ಬಂದಿದ್ದಾಳೆ.
ಹಿಜಾಬ್ ಧರಿಸುವುದನ್ನು ಸಂವಿಧಾನದ ಆರ್ಟಿಕಲ್ 14 ಮತ್ತು 25ರ ಅಡಿಯಲ್ಲಿ ಮೂಲಭೂತ ಹಕ್ಕು ಎಂದು ಘೋಷಿಸಲು ಮನವಿ ಮಾಡಲಾಗಿದೆ. ವಿದ್ಯಾರ್ಥಿಗಳಿಗೆ ಹಿಜಾಬ್ ಧರಿಸಿ ಕಾಲೇಜು ಆಡಳಿತ ಮಂಡಳಿಯ ಹಸ್ತಕ್ಷೇಪ ಇಲ್ಲದೆ ತರಗತಿಗೆ ಭಾಗವಹಿಸಲು ಅವಕಾಶ ನೀಡುವಂತೆ ಮನವಿ ಮಾಡಲಾಗಿದೆ.
ಹಿಜಾಬ್ ಧರಿಸುವುದು ನಮ್ಮ ಧಾರ್ಮಿಕ ನಂಬಿಕೆಯ ಭಾಗವಾಗಿದೆ. ಶತಾಭೀಷ್ ಶಿವಣ್ಣ, ಅರ್ನವ್ ಎ ಬಾಗಲವಾಡಿ ಮತ್ತು ಅಭಿಷೇಕ್ ಜನಾರ್ದನ್ ಪ್ರಕರಣದ ಪರವಾಗಿ ವಾದ ಮಂಡನೆ ಮಾಡಲಿರುವರು.
ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು ಯಲ್ಲಾಪುರ : ಉತ್ತರ ಕನ್ನಡ…
ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು ಕುಂದಾಪುರ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ…
ಪುತ್ತೂರು: ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ: 3ನೇ ಮತ್ತು 4ನೇ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ಮಂಜೂರು ಪುತ್ತೂರು: ಕಲ್ಲೇಗ ಟೈಗರ್ಸ್…
ಎಲ್ಪಿಜಿ ಸಿಲಿಂಡರ್ ಬುಕಿಂಗ್ ನಿಯಮಗಳಲ್ಲಿ ಯಾವುದೇ ಬದಲಾವಣೆ ಇಲ್ಲ : ಕೇಂದ್ರ ಸ್ಪಷ್ಟನೆ ನವದೆಹಲಿ: ಎಲ್ಪಿಜಿ(LPG) ಸಿಲಿಂಡರ್ ಬುಕಿಂಗ್ ನಿಯಮಗಳಲ್ಲಿ…
ಸುಳ್ಯ : ಕಂಬಕ್ಕೆ ಬೈಕ್ ಡಿಕ್ಕಿ; ಮೆಸ್ಕಾಂ ಸಿಬ್ಬಂದಿ ಮೃತ್ಯು ಸುಳ್ಯ,: ತಾಲೂಕಿನ ನಿಂತಿಕಲ್ಲು ಬಳಿ ವಿದ್ಯುತ್ ಕಂಬಕ್ಕೆ ಬೈಕ್…
13 ವರ್ಷದ ಕೋಮಾ ಜೀವನ ಅಂತ್ಯ : ದಯಾಮರಣಕ್ಕೆ ಅನುಮತಿ ಪಡೆದಿದ್ದ ಹರೀಶ್ ರಾಣಾ ನಿಧನ ಹೊಸದಿಲ್ಲಿ: 13 ವರ್ಷಗಳಿಂದ…